ಪಕ್ಷದ ವಿಚಾರಧಾರೆ, ಸಿದ್ಧಾಂತ, ಶಿಸ್ತಿನಲ್ಲಿ ರಾಜಿ ಮಾತೇ ಇಲ್ಲ ಎಂದ ನಳಿನ್ ಕುಮಾರ್ ಕಟೀಲ್
ಮಂಗಳೂರು, ಆಗಸ್ಟ್ 29: "ಪಕ್ಷದ ವಿಚಾರಧಾರೆ, ಸಿದ್ಧಾಂತ, ಶಿಸ್ತಿನಲ್ಲಿ ಯಾವುದೇ ರಾಜಿಯಿಲ್ಲ" ಎಂದು ಬಿಜೆಪಿ ನೂತನ ರಾಜ್ಯಾಧ್ಯಕ್ಷ ನಳಿನ ಕುಮಾರ್ ಕಟೀಲ್ ಸ್ಪಷ್ಟಪಡಿಸಿದ್ದಾರೆ. ಮಂಗಳೂರಿನಲ್ಲಿ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರನ್ನು ಉದ್ಧೇಶಿಸಿ ಅವರು ಮಾತನಾಡಿದರು.
ರಾಜ್ಯಾಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ನಳಿನ್ ಕುಮಾರ್ ಕಟೀಲ್ ಅವರು ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸಿದ್ದು, ಕೊಡಿಯಾಲ್ ಬೈಲ್ ಟಿ.ವಿ ರಮಣ್ ಪೈ ಸಭಾಂಗಣದಲ್ಲಿ ಜಿಲ್ಲಾ ಬಿಜೆಪಿ ಘಟಕದ ವತಿಯಿಂದ ಇಂದು ಅಭಿನಂದನಾ ಕಾರ್ಯಕ್ರಮ ನಡೆಯಿತು.
ಒಂದೇ ದಿನ ನಳಿನ್ ಕುಮಾರ್ ಕಟೀಲ್ಗೆ ಎರಡೆರಡು ಗಿಫ್ಟ್
Recommended Video
ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡದ ನಳಿನ್ ಕುಮಾರ್ ಕಟೀಲ್, "ಬಿಜೆಪಿ ಬಲವರ್ಧನೆಯೇ ನನ್ನ ಗುರಿ. ದಕ್ಷಿಣ ಕನ್ನಡ ಜಿಲ್ಲೆಯ ಬಿಜೆಪಿ ಭದ್ರಕೋಟೆಯ ಸೂತ್ರವನ್ನು ರಾಜ್ಯಾದ್ಯಂತ ಮತಗಟ್ಟೆ ಸಂಘಟನೆ ಸ್ವರೂಪದಲ್ಲಿ ಅನುಷ್ಠಾನಿಸಲಾಗುವುದು" ಎಂದು ಹೇಳಿದರು.

"ನನಗೆ ಎಷ್ಟೇ ಎತ್ತರದ ಸ್ಥಾನ ಸಿಕ್ಕಿದ್ದರೂ, ನಾನು ದಕ್ಷಿಣ ಕನ್ನಡ ಜಿಲ್ಲೆಯ ಜನತೆ ಪಾಲಿಗೆ ಕೇವಲ ಸಂಘದ ಸ್ವಯಂ ಸೇವಕನಾಗಿ ಇರುತ್ತೇನೆ. ನಾನು ಬರೀ ಸಂಘದ ನಿಷ್ಠಾವಂತ ಕಾರ್ಯಕರ್ತ. ಜವಾಬ್ದಾರಿ ನಿಷ್ಠೆಯಿಂದ ನಿರ್ವಹಿಸುತ್ತೇನೆ. ವಾರದಲ್ಲಿ 6 ದಿನ ರಾಜ್ಯಾದ್ಯಂತ ಪಕ್ಷ ಸಂಘಟನೆಗೆ ಪ್ರವಾಸ ಮಾಡಿ, ವಾರದಲ್ಲಿ ಒಂದು ದಿನ ದಕ್ಷಿಣ ಕನ್ನಡದ ಅಭಿವೃದ್ಧಿ ಕಾರ್ಯದ ಪ್ರವಾಸ ಕೈಗೊಳ್ಳಲಿದ್ದೇನೆ. ಬಿಜೆಪಿಯಲ್ಲಿ ಹೋರಾಟಕ್ಕಾಗಿ ಸೀಟ್ ಸಿಗಲ್ಲ; ನಿಮ್ಮ ಕೆಲಸ ನೋಡಿ ಸೀಟ್ ಸಿಗಲಿದೆ" ಎಂದು ಹೇಳಿದರು.
-
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ












Click it and Unblock the Notifications