ದೇಶದಲ್ಲಿ ಲವ್ ಜಿಹಾದ್ ಎಲ್ಲಿಯೂ ನಡೆದಿಲ್ಲ: ಮಂಗಳೂರಿನಲ್ಲಿ ಮುಸ್ಲಿಂ ಜಸ್ಟೀಸ್ ಫೋರಂ ಕಮಿಟಿ ಸ್ಪಷ್ಟನೆ
ಮಂಗಳೂರು, ನವೆಂಬರ್, 30: ದೇಶದಲ್ಲಿ ಎಲ್ಲಿಯೂ ಲವ್ ಜಿಹಾದ್ ನಡೆದಿಲ್ಲ. ಪ್ರೀತಿಯ ಹಿನ್ನೆಲೆಯಲ್ಲಿ ಹಿಂದೂ ಯುವತಿಯರೇ ಸ್ವಇಚ್ಛೆಯಿಂದ ಮತಾಂತರಗೊಂಡ ಪ್ರಕರಣ ನಡೆದಿದೆ. ಬಲವಂತದ ಮತಾಂತರವನ್ನು ಮುಸ್ಲಿಂ ಸಮುದಾಯ ಬೆಂಬಲಿಸುವುದಿಲ್ಲ. ಒಂದು ವೇಳೆ ಹಾಗೇನಾದರೂ ನಡೆದರೆ ಅದನ್ನು ನಾವು ವಿರೋಧಿಸುತ್ತೇವೆ ಎಂದು ಮುಸ್ಲಿಂ ಜಸ್ಟಿಸ್ ಫೋರಂ ಕಮಿಟಿ ಮಂಗಳೂರಿನಲ್ಲಿ ಹೇಳಿದೆ.
ಮಂಗಳೂರು ನಗರದ ಖಾಸಗಿ ಹೊಟೇಲ್ನಲ್ಲಿ ಮುಸ್ಲಿಂ ಜಸ್ಟಿಸ್ ಫೋರಂ ಕಮಿಟಿಯ ಸ್ಥಾಪಕಾಧ್ಯಕ್ಷ ರಫೀಯುದ್ದೀನ್ ಕುದ್ರೋಳಿ ಮಾತನಾಡಿ, "ದೇಶದ ಯಾವುದೇ ಪೊಲೀಸ್ ಠಾಣೆಗಳಲ್ಲಿ ಈವರೆಗೆ ಲವ್ ಜಿಹಾದ್ ಬಗ್ಗೆ ಒಂದು ಪ್ರಕರಣವೂ ದಾಖಲಾಗಿಲ್ಲ. ಮುಸ್ಲಿಂ ಯುವತಿಯರನ್ನು ಹಿಂದೂ ಯುವಕರು ಮದುವೆಯಾಗುತ್ತಾರೆ. ನಂತರ ಒಂದೆರಡು ವರ್ಷಗಳಲ್ಲಿಯೇ ಚಿತ್ರಹಿಂಸೆ ನೀಡಿ ಅವರನ್ನು ಕೊಂದಿರುವ ಪ್ರಕರಣಗಳು ನಡೆದಿವೆ. ಇದು ಯಾವ ಜಿಹಾದ್?," ಎಂದು ರಫೀಯುದ್ದೀನ್ ಕುದ್ರೋಳಿ ಪ್ರಶ್ನಿಸಿದರು.
ಮಾಧ್ಯಮಗಳಿಂದ ಸಮಾಜಕ್ಕೆ ತಪ್ಪು ಸಂದೇಶ
"ದೆಹಲಿಯ ಶ್ರದ್ಧಾ ಕೊಲೆ ಪ್ರಕರಣದ ಆರೋಪಿ ಅಫ್ತಾಬ್ ಪಾರ್ಸಿ ಸಮುದಾಯದವನಾಗಿದ್ದಾನೆ. ಆದರೆ ಆತನನ್ನು ಮಾಧ್ಯಮಗಳು ಮುಸ್ಲಿಂ ಎಂದು ಬಿಂಬಿಸುತ್ತಿದ್ದು, ಸಮಾಜಕ್ಕೆ ತಪ್ಪು ಸಂದೇಶವನ್ನು ಸಾರುತ್ತಿವೆ. ಅದೇ ರೀತಿ ಗೋಸಾಗಾಟ ಮಾಡುವವರು ಹಾಗೂ ಏಜೆಂಟ್ಗಳು ಮುಸ್ಲಿಮರೇತರರು ಆಗಿರುತ್ತಾರೆ. ಆದರೆ ವಾಹನಗಳ ಚಾಲಕರು ಮಾತ್ರ ಮುಸ್ಲಿಮರು ಆಗಿರುತ್ತಾರೆ. ಅವರು ಸಣ್ಣಪುಟ್ಟ ಹಣಕ್ಕಾಗಿ ಬಂದು ಈ ಕೃತ್ಯಗಳಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ," ಎಂದು ಹೇಳಿದ್ದಾರೆ.

ಜಮಾಅರ್ನ ಪ್ರವಚನದಲ್ಲಿ ಹೇಳುವುದೇನು?
ಇನ್ನು ಗಾಂಜಾ ಪ್ರಕರಣದಲ್ಲಿ ಬಹಳಷ್ಟು ಮುಸ್ಲಿಂ ಯುವಕರ ಹೆಸರು ಕೇಳಿ ಬರುತ್ತಿವೆ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಈ ಬಗ್ಗೆ ನಾವು ಚಿಂತನೆ ನಡೆಸುತ್ತೇವೆ. ಅದೇ ರೀತಿ ಶುಕ್ರವಾರದಂದು ಜಮಾಅರ್ನ ಪ್ರವಚನದಲ್ಲಿ ಗಾಂಜಾ ವ್ಯಸನಿಗಳಾಗಬಾರದು, ಅನೀತಿ, ಅನಾಚಾರಗಳ, ಅನ್ಯಾಯಗಳನ್ನು ಎಸಗಬಾರದು ಎಂದು ತಿಳಿ ಹೇಳಲಾಗುತ್ತದೆ. ಅಲ್ಲದೆ ಈ ಕೃತ್ಯಗಳಲ್ಲಿ ತೊಡಗಿದವರನ್ನು ಜಮಾಅತ್ನ ಸಂಪರ್ಕದಿಂದ ಕಡಿತಗೊಳಿಸಲಾಗುತ್ತದೆ ಎಂದು ಸೂಚನೆ ನೀಡುತ್ತೇವೆ ಅಂತಾ ಹೇಳಿದ್ದಾರೆ. ಅಲ್ಲದೇ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಕಾಲೇಜು ಸರ್ಕಾರದಿಂದ ಮಾಡುವ ಯೋಜನೆಯಲ್ಲ. ಅದು ಮುಸ್ಲಿಮರ ಹಣದಿಂದಲೇ ಮಾಡುವಂತದ್ದು, ಸರ್ಕಾರದಲ್ಲಿ ಹಣ ಎಲ್ಲಿದೆ? ಲವ್ ಜಿಹಾದ್ ಮಾಡುವವರಿಗೆ ಮರಣ ಶತಸಿದ್ಧ ಎಂಬ ಬಜರಂಗದಳ ಕಾರ್ಯಕರ್ತ ಹೇಳಿರುವುದು ಅವರ ಅಸ್ತಿತ್ವ ಪ್ರದರ್ಶನದ ಹೇಳಿಕೆಯಾಗಿದೆ. ಸಂಘಟನೆಯ ಗುರಾಣಿ ಹಿಡಿದು ಸಮಾಜದಲ್ಲಿ ಕಂದಕ ಸೃಷ್ಟಿಸುವ ಹೇಳಿಕೆ ನೀಡುವುದನ್ನು ವಿರೋಧಿಸಬೇಕಾಗಿದೆ ಎಂದು ರಫೀಯುದ್ದೀನ್ ಕುದ್ರೋಳಿ ಹೇಳಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications