ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನಮ್ಮನ್ನು ಯಾರೂ ಏನೂ ಮಾಡೋಕಾಗಲ್ಲ: ಯುಟಿ ಖಾದರ್

|
Google Oneindia Kannada News

ಮಂಗಳೂರು, ಜುಲೈ 17: "ಸರ್ಕಾರ ಸದ್ಯಕ್ಕೆ ಸುಭದ್ರವಾಗಿದೆ. ಯಾವುದೇ ಆತಂಕ ನಮಗಿಲ್ಲ. ಅತೃಪ್ತರು, ನಾವೆಲ್ಲರೂ ಅಣ್ಣ ತಮ್ಮಂದಿರಂತೆ ಇದ್ದೇವೆ. ವಿಶ್ವಾಸಮತ ಗಳಿಸುವ ನಂಬಿಕೆಯಿದೆ. ಕುಟುಂಬದಲ್ಲಿ ಸಣ್ಣಪುಟ್ಟ ಭೇದ ಭಾವ ಸಹಜ. ಇಲ್ಲೂ ಹಾಗೆಯೇ. ಅವೆಲ್ಲಾ ಸರಿಯಾಗುತ್ತವೆ" ಎಂದು ಹೇಳಿಕೆ ನೀಡಿದ್ದಾರೆ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ ಖಾದರ್.

 ಅತೃಪ್ತ ಶಾಸಕರು vs ಸ್ಪೀಕರ್: ಸುಪ್ರೀಂ ತೀರ್ಪಿನ ಒಟ್ಟು ಸಾರ ಏನು? ಅತೃಪ್ತ ಶಾಸಕರು vs ಸ್ಪೀಕರ್: ಸುಪ್ರೀಂ ತೀರ್ಪಿನ ಒಟ್ಟು ಸಾರ ಏನು?

ಅತೃಪ್ತ ಶಾಸಕರು, ನಾಳೆ ನಡೆಯುವ ವಿಶ್ವಾಸಮತ ಯಾಚನೆಯಲ್ಲಿ ಭಾಗವಹಿಸಲೇಬೇಕು ಎಂದು ವಿಪ್ ಮೂಲಕ ಒತ್ತಾಯ ಮಾಡುವಂತಿಲ್ಲ ಎಂದು ಇಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ತೀರ್ಪು ಬಂದ ಮೇಲೆ, ವಿಶ್ವಾಸಮತ ಯಾಚನೆವರೆಗೂ ಕಾಯದೇ ಕುಮಾರಸ್ವಾಮಿ ರಾಜೀನಾಮೆ ನೀಡಬೇಕು, ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂದು ಬಿಜೆಪಿಯವರೂ ಒತ್ತಾಯಿಸಿದ್ದಾರೆ. ಇದರ ನಡುವೆಯೂ ಖಾದರ್ ಸರ್ಕಾರ ಉಳಿಯುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

no one can do anything to us said ut khader in mangaluru

"ನಾಳೆ ವಿಶ್ವಾಸಮತ ಸಾಬೀತಿಗೆ ಅವಕಾಶವಿದೆ. ಎಲ್ಲವೂ ಸುಸುತ್ರವಾಗಿ ನಡೆಯಲಿದೆ. ನಮ್ಮಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್ ಅಂದು ಬೇರೆ ಬೇರೆ ಇಲ್ಲ. ನಮ್ಮ ಸರ್ಕಾರ ಒಂದೇ, ಅದೇ ಸಮ್ಮಿಶ್ರ ಸರ್ಕಾರ. ನಾವು ವಿಶ್ವಾಸ ಮತ ಗೆಲ್ಲುತ್ತೇವೆ. ಪ್ರಜಾಪ್ರಭುತ್ವದ ಅನುಸಾರ ಆಯ್ಕೆಯಾದವರು ನಾವು. ನಮ್ಮನ್ನು ಯಾರೂ ಏನೂ ಮಾಡಲು ಆಗುವುದಿಲ್ಲ ಎಂದು ಕರ್ನಾಟಕದಿಂದ ಇಡೀ ದೇಶಕ್ಕೆ ಸಂದೇಶ ಹೋಗುತ್ತದೆ" ಎಂದು ಆತ್ಮವಿಶ್ವಾಸದಿಂದ ಹೇಳಿದ್ದಾರೆ.

English summary
We are elected as per democracy. So no one can do anything to our government. Everything will be set right tomorrow said district minister UT Khader in Mangaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X