ಬಿಜೆಪಿ ಅಭ್ಯರ್ಥಿಗಳ ಆಯ್ಕೆಯಲ್ಲಿ ಭಿನ್ನಾಭಿಪ್ರಾಯವಿಲ್ಲ: ಧರ್ಮೇಂದ್ರ ಪ್ರಧಾನ್
ಮಂಗಳೂರು, ಏಪ್ರಿಲ್ 22: ಅಭ್ಯರ್ಥಿಗಳ ಘೋಷಣೆ ಆದ ಬಳಿಕ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೆಲ ಆಕಾಂಕ್ಷಿಗಳಿಗೆ ನೋವಾಗಿರಬಹುದು. ಆದರೆ ಆ ಎಲ್ಲಾ ಸಮಸ್ಯೆಗಳನ್ನು ಶೀಘ್ರ ಇತ್ಯರ್ಥ ಪಡಿಸಲಾಗುವುದು. ಜಿಲ್ಲೆಯಲ್ಲಿ ಬಂಡಾಯದ ಪರಿಸ್ಥಿತಿ ಇಲ್ಲ. ಚುನಾವಣೆಗೆ ಯಾವುದೇ ಸಮಸ್ಯೆಯಾಗುವುದಿಲ್ಲಎಂದು ಕೇಂದ್ರ ಪೆಟ್ರೋಲಿಯಂ ಖಾತೆ ಸಚಿವ ಧರ್ಮೇಂದ್ರ ಪ್ರಧಾನ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು ಜಿಲ್ಲೆಯ ಮುಖಂಡರ ನಡುವೆ ಭಿನ್ನಾಭಿಪ್ರಾಯ, ಅಸಮಾಧಾನ ಇಲ್ಲ ಎಂದು ಸ್ಪಷ್ಟಪಡಿಸಿದರು. ಬಿಜೆಪಿಯಲ್ಲಿ ಬಂಡಾಯ ಏಳುವ ಮುಖಂಡರಿಲ್ಲ. ಎಲ್ಲರೂ ಪಕ್ಷದ ನಿಷ್ಠಾವಂತ ಸಿಪಾಯಿಗಳು. ಈ ಹಿನ್ನೆಲೆಯಲ್ಲಿ ಬಿಜೆಪಿಯಲ್ಲಿ ಗೊಂದಲ ಸೃಷ್ಠಿಯಾಗುವ ಪ್ರಶ್ನೆ ಇಲ್ಲ ಎಂದು ಅವರು ತಿಳಿಸಿದರು.
ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರಕಾರ ತುಷ್ಟೀಕರಣ ಹಾಗೂ ಭ್ರಷ್ಟಾಚಾರದಲ್ಲಿ ಮುಳುಗಿದೆ. ಇಲ್ಲಿ ಅಭಿವೃದ್ದಿ ಮರೀಚಿಕೆಯಾಗಿದೆ ಎಂದು ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ರಾಜ್ಯದಲ್ಲಿ ಜನ ವಿರೋಧಿ ನೀತಿ ಅನುಸರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ಸನ್ನು ತಿರಸ್ಕರಿಸಲು ಜನರು ತೀರ್ಮಾನಿಸಿದ್ದಾರೆ. ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತದೊಂದಿಗೆ ಗೆಲುವು ಸಾಧಿಸಿ ಬಿಜೆಪಿ ಸರಕಾರ ರಚಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ಉತ್ತಮ ಆಡಳಿತ ನೀಡಲು ಬಿಜೆಪಿ ಕಟಿಬದ್ಧವಾಗಿದ್ದು, ಅಭಿವೃದ್ಧಿಯನ್ನೇ ಮೂಲಮಂತ್ರವಾಗಿಸಿಕೊಂಡು ಬಿಜೆಪಿ ರಾಜ್ಯದಲ್ಲಿ ಮುಂಬರುವ ಚುನಾವಣೆ ಎದುರಿಸಲಿದೆ ಎಂದು ಅವರು ಸ್ಪಷ್ಟಪಡಿಸಿದರು.
ಏಪ್ರಿಲ್ 28ರ ಬಳಿಕ ಕರ್ನಾಟಕದಲ್ಲಿ ಬದಲಾವಣೆ ಕಾಣಲಿದೆ. ಚುನಾವಣೆಯ ದಿಕ್ಕೇ ಬದಲಾಗಲಿದೆ. ಏಪ್ರಿಲ್ 28ರ ಬಳಿಕ ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಆರಂಭಿಸಲಿದ್ದಾರೆ ಎಂದು ಅವರು ತಿಳಿಸಿದರು. ರಾಜ್ಯದ ಕರಾವಳಿ ಭಾಗದಲ್ಲೂ ಮೋದಿ ಪ್ರಚಾರಕ್ಕೆ ಆಗಮಿಸಲಿದ್ದು ಉಡುಪಿಗೆ ಮೇ 1 ರಂದು ಹಾಗು ಮೇ 7 ರಂದು ಮಂಗಳೂರಿಗೆ ಮೋದಿ ಭೇಟಿ ನೀಡಲಿದ್ದಾರೆ ಎಂದು ಅವರು ತಿಳಿಸಿದರು.
ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ ಪ್ರಕರಣದ ವಿರುದ್ಧ ಕೇಂದ್ರ ಸರಕಾರ ಅತ್ಯಂತ ಕಠಿಣ ಕ್ರಮ ಕೈಗೊಂಡಿದೆ. ಬಾಲಕಿಯರ ಮೇಲೆ ಅತ್ಯಾಚಾರ ಎಸಗುವವರಿಗೆ ಮರಣ ದಂಡನೆ ನೀಡುವ ಹಾಗೆ ಪೋಕ್ಸೋ ಕಾನೂನಿಗೆ ತಿದ್ದುಪಡಿ ತರಲು ಒಪ್ಪಿಗೆ ಸೂಚಿಸಲಾಗಿದೆ ಎಂದು ಅವರು ಹೇಳಿದರು.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
ರಾಮಚಂದ್ರ ರಾವ್ ಪ್ರಕರಣ: 'ಎಐ' ಅಲ್ಲ ಅಸಲಿ ವಿಡಿಯೋ; ಎಫ್ಎಸ್ಎಲ್ ವರದಿಯಲ್ಲಿ ಬಯಲಾಯ್ತು ಸತ್ಯ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
Rishab Shetty: ಹೊಂಬಾಳೆ ಫಿಲ್ಮ್ಸ್ ಅನ್ಫಾಲೋ ಮಾಡಿದ ರಿಷಬ್ ಶೆಟ್ಟಿ: ಕಾಂತಾರ ಕುಟುಂಬದಲ್ಲಿ ಬಿರುಕು ವದಂತಿ -
Anil Kumble: ವಿರಾಟ್ ಕೊಹ್ಲಿ-ಬೆಂಗಳೂರು ನಡುವಿನ ಅವಿನಾಭಾವ ಸಂಬಂಧದ ಬಗ್ಗೆ ಕನ್ನಡಿಗ ಅನಿಲ್ ಕುಂಬ್ಳೆ ಮನದಾಳದ ಮಾತು -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣದ ಸ್ಥಳ: ಸಚಿವ ಎಂ.ಬಿ.ಪಾಟೀಲ್ ಮಹತ್ವದ ಮಾಹಿತಿ -
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
SCR Railway Recruitment 2026: ಲಿಖಿತ ಪರೀಕ್ಷೆ ಇಲ್ಲದೇ ನೇಮಕಾತಿ, 2801 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ












Click it and Unblock the Notifications