Get Updates
Get notified of breaking news, exclusive insights, and must-see stories!

ಸಿದ್ದರಾಮಯ್ಯ ಯಾವ ತಪ್ಪು ಮಾಡಿಲ್ಲ: ಜಿ.ಪರಮೇಶ್ವರ

ಮಂಗಳೂರು , ಫೆ. 11: ಅರ್ಕಾವತಿ ಡಿನೋಟಿಫೈ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಯಾವುದೇ ಅಕ್ರಮ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಸಮರ್ಥಿಸಿಕೊಂಡಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಪ್ರಸಕ್ತ ಸರ್ಕಾರ ಕಾನೂನಿಗೆ ವಿರುದ್ಧವಾದ ಯಾವುದೇ ತೀರ್ಮಾನಗಳನ್ನು ಮಾಡಿಲ್ಲ. ಈ ಬಗ್ಗೆ ದಿನಾ ಮಾಧ್ಯಮಗಳಿಗೆ ದೂರು ನೀಡುತ್ತಿರುವ ಜೆಡಿಎಸ್ ಮತ್ತು ಬಿಜೆಪಿ ನಾಯಕರು ಸಂವಿಧಾನ ಬದ್ಧವಾಗಿ ಮಾತನಾಡುವುದನ್ನು ಕಲಿತುಕೊಳ್ಳಲಿ ಎಂದು ತಿರುಗೇಟು ನೀಡಿದರು.[ಅರ್ಕಾವತಿ ಫೈಟ್ : ಸರ್ಕಾರದಿಂದ 1 ಲಕ್ಷ ಪುಟಗಳ ದಾಖಲೆ ಸಲ್ಲಿಕೆ]

congress

ಕುಮಾರಸ್ವಾಮಿ ಪುಸ್ತಕದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಆರ್ ಟಿಐನಲ್ಲಿ ಪಡೆದ ಸರ್ಕಾರಿ ಆದೇಶಗಳನ್ನು ಪುಸ್ತಕ ಮಾಡಿ ಪ್ರಕಟಿಸಿದ್ದು ದೊಡ್ಡ ಸಾಧನೆಯಲ್ಲ ಎಂದು ಲೇವಡಿ ಮಾಡಿದರು.[ಅರ್ಕಾವತಿ ಕರ್ಮಕಾಂಡ : ಕುಮಾರಸ್ವಾಮಿ ಪುಸ್ತಕದಲ್ಲೇನಿದೆ?]

ಉಪಮುಖ್ಯಮಂತ್ರಿ ಸ್ಥಾನದ ಬಗೆಗಿನ ತೀರ್ಮಾನವನ್ನು ಹೈ ಕಮಾಂಡ್ ತೆಗೆದುಕೊಳ್ಳುತ್ತದೆ. ಕೆಪಿಸಿಸಿ ಅಧ್ಯಕ್ಷನಾಗಿ ಸುದೀರ್ಘ ಅವಧಿಗೆ ಹುದ್ದೆ ನಿಭಾಯಿಸಿದ ತೃಪ್ತಿಯಿದೆ ಎಂದು ಹೇಳಿದರು. ಹಿಂದು ಸಮಾಜೋತ್ಸವದಲ್ಲಿ ಪಕ್ಷದ ನಾಯಕರೊಬ್ಬರು ಭಾಗಿಯಾಗಿರುವ ಬಗ್ಗೆ ಮಾಹಿತಿಯಿದ್ದು ಆ ಬಗ್ಗೆ ಸೂಕ್ತ ತನಿಖೆ ನಡೆಸಿ ಕ್ರಮ ಕೈಗೊಳ್ಳಲಾಗುವುದು ಎಂದು ಪರಮೇಶ್ವರ್ ತಿಳಿಸಿದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+