ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಭಾರತ್ ಬಂದ್ ಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ

|
Google Oneindia Kannada News

ಮಂಗಳೂರು, ಜನವರಿ 08 : ಭಾರತ್ ಬಂದ್ ಗೆ ಕರಾವಳಿ ಭಾಗದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಎಡಪಕ್ಷಗಳ ಕಾರ್ಮಿಕ ಸಂಘಟನೆಗಳು ಬಂದ್ ಗೆ ಬೆಂಬಲ ಸೂಚಿಸಿರುವ ಹಿನ್ನೆಲೆಯಲ್ಲಿ ಯಾವುದೇ ರೀತಿಯಲ್ಲಿ ನಾಗರೀಕರಿಗೆ ಬಂದ್‌ನ ಬಿಸಿ ತಟ್ಟಿಲ್ಲ.

ಭಾರತ್ ಬಂದ್ LIVE: ಎಂದಿನಂತೆ ತೆರೆದಿರುವ ಇಂದಿರಾ ಕ್ಯಾಂಟೀನ್ಭಾರತ್ ಬಂದ್ LIVE: ಎಂದಿನಂತೆ ತೆರೆದಿರುವ ಇಂದಿರಾ ಕ್ಯಾಂಟೀನ್

ಖಾಸಗಿ, ಸರ್ಕಾರಿ ಬಸ್‌ಗಳು ಸೇರಿದಂತೆ ಎಲ್ಲಾ ವಾಹನಗಳ ಸಂಚಾರ ಯಥಾ ಸ್ಥಿತಿಯಲ್ಲಿದೆ. ಇನ್ನು ಬಂದ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯ ಎಲ್ಲಾ ಶಾಲಾ, ಕಾಲೇಜುಗಳಿಗೆ ಜಿಲ್ಲಾಧಿಕಾರಿಗಳು ಇಂದು ರಜೆ ಘೋಷಿಸಿದ್ದಾರೆ.

ಭಾರತ್ ಬಂದ್ ವೇಳೆ ಕಂಡ ಚಿತ್ರಣಗಳು

No response to Bharath bundh in Dakshina kannada

ನಗರದಲ್ಲಿ ಖಾಸಗಿ ಸಿಟಿ ಬಸ್ ಗಳು ಎಂದಿನಂತೆ ಮುಂಜಾನೆಯಿಂದಲೇ ರಸ್ತೆಗಿಳಿದು ಸಂಚಾರ ಆರಂಭಿಸಿವೆ. ಅದಲ್ಲದೇ ಆಟೋರಿಕ್ಷಾಗಳು ಕೂಡ ಓಡಾಟ ಆರಂಭಿಸಿವೆ. ಮಂಗಳೂರು ವಿಭಾಗದಿಂದ ಕೆಎಸ್ ಆರ್‌ಟಿಸಿ ಬಸ್ ಗಳು ಕಾರ್ಯಾಚರಣೆ ಆರಂಭಿಸಿವೆ. ಆದರೆ, ಕೇರಳ, ಕಾಸರಗೋಡಿಗೆ ತೆರಳುವ ಬಸ್ ಸೇವೆ ಮಾತ್ರ ಸ್ಥಗಿತಗೊಳಿಸಲಾಗಿದೆ.

ಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರಜನವರಿ 8 ಮತ್ತು 9ರಂದು ಕೆಎಸ್ಆರ್‌ಟಿಸಿ ನೌಕರರ ಮುಷ್ಕರ

ನಗರದಲ್ಲಿ ಟ್ಯಾಕ್ಸಿ ಹಾಗೂ ಕ್ಯಾಬ್ ಸಂಚಾರವೂ ಎಂದಿನಂತೆ ಮುಂದುವರಿದಿದೆ. ಕಾರ್ಮಿಕ‌ ಸಂಘಟನೆ ಬೆಂಬಲಿತ ಅಂಗಡಿಗಳನ್ನು ಹೊರತುಪಡಿಸಿ ಉಳಿದ ಅಂಗಡಿ- ಮುಂಗಟ್ಟು , ಹೋಟೆಲ್ ಗಳು ತೆರೆದಿವೆ.

No response to Bharath bundh in Dakshina kannada

ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಎಂದಿನಂತೆ ವ್ಯಾಪಾರ ವಹಿವಾಟು ನಡೆಯುತ್ತಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಿಗಿ‌ ಪೊಲೀಸ್ ಬಂದೋಬಸ್ತ್ ನಡೆಸಲಾಗಿದೆ.

English summary
Bharat Bandh: Mixed response in Dakshina Kannada and Mangalore district. As a fallout of the bandh call, schools and colleges in Dakshina Kannada district would remain closed, said reports.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X