ವಿಡಿಯೋ; ಸಚಿವರ ತವರು ಕ್ಷೇತ್ರ ಸುಳ್ಯದಲ್ಲಿ ಇದೆಂಥ ಸ್ಥಿತಿ?
ಮಂಗಳೂರು, ಜುಲೈ 14; ರಭಸವಾದ ಹೊಳೆಯಲ್ಲಿ ಮಹಿಳೆಯನ್ನು ಹೊತ್ತು ಆಸ್ಪತ್ರೆಗೆ ದಾಖಲು ಮಾಡಬೇಕಾದ ಪರಿಸ್ಥಿತಿ ಜನರದ್ದು. ಕರ್ನಾಟಕದ ಸರ್ಕಾರದಲ್ಲಿ ಸಚಿವರಾಗಿರುವ ಎಸ್. ಅಂಗಾರ ಪ್ರತಿನಿಧಿಸುವ ಕ್ಷೇತ್ರದ ದಯನೀಯ ಪರಿಸ್ಥಿತಿಯ ವಿಡಿಯೋ ಇಲ್ಲಿದೆ.
ಮೀನುಗಾರಿಕಾ ಮತ್ತು ಬಂದರು, ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರರ ಸ್ವ ಕ್ಷೇತ್ರ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಂಗಾರ ಸತತ 30 ವರ್ಷಗಳ ಕಾಲ ಶಾಸಕನಾಗಿ ಆಯ್ಕೆಯಾದರೂ ಇನ್ನೂ ಸುಳ್ಯದ ಹಲವು ಭಾಗಗಳಲ್ಲಿ ಅತೀ ಬೇಡಿಕೆಯ ರಸ್ತೆ ಮತ್ತು ಸೇತುವೆ ಆಗಿಲ್ಲ. ಇದಕ್ಕೆ ಮತ್ತೊಂದು ನಿದರ್ಶನವಾಗಿ ವಿಡಿಯೋವೊಂದು ಹರಿದಾಡುತ್ತಿದೆ.

ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಮರಸಂಕ ಎಂಬ ಊರಿನಲ್ಲಿ 9 ಕುಟುಂಬದ 50 ಜನರು ವಾಸವಾಗಿದ್ದಾರೆ. ಆದರೆ ಮರಸಂಕ ಊರಿಗೆ ತಲುಪಲು ರಸ್ತೆಯೂ ಇಲ್ಲ, ಸೇತುವೆಯೂ ಇಲ್ಲ. ರಭಸವಾಗಿ ಹರಿಯುವ ಹೊಳೆ ದಾಟಿ ಹೋಗಬೇಕು.
ಮಂಗಳವಾರ ಸಂಜೆ ಮರಸಂಕ ನಿವಾಸಿ ದೇವಕಿ ಮನೆಯ ಅಂಗಳದಲ್ಲಿ ಕಾಲು ಜಾರಿ ಬಿದ್ದಿದ್ದು, ಕಾಲಿನ ಮೂಳೆ ಮುರಿಯಿತು. ಅತೀವ ನೋವಿನಿಂದ ಬಳಲುತ್ತಿದ್ದರು. ಸ್ಥಳೀಯರು ಅಂಬುಲೆನ್ಸ್ಗೆ ಕರೆ ಮಾಡಿದರೂ ಹೊಳೆ ದಾಟಲು ಸಾಧ್ಯವಾಗಲಿಲ್ಲ.
ಹೀಗಾಗಿ ಸ್ಥಳೀಯರು ದೇವಕಿಯವರನ್ನು ಸ್ಟ್ರೆಚರ್ನಲ್ಲಿ ಹೊತ್ತುಕೊಂಡು ರಭಸವಾಗಿ ಹರಿಯುವ ಹೊಳೆ ದಾಟಿದ್ದಾರೆ. ಪಯಸ್ವಿನಿ ನದಿಗೆ ಸೇರುವ ಹೊಳೆ ಇದಾಗಿದ್ದು, ಭಾರೀ ಮಳೆಯ ಹಿನ್ನೆಲೆ ರಭಸವಾಗಿ ಹೊಳೆ ಹರಿಯುತ್ತಿದೆ. ಜೀವವನ್ನು ಲೆಕ್ಕಿಸದೆ ಸ್ಥಳೀಯರು ದೇವಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ.
ಈ ಹಿಂದಿನ ಚುನಾವಣೆಯ ಸಂದರ್ಭದಲ್ಲಿ ಸೇತುವೆಯ ಬೇಡಿಕೆಯನ್ನಿಟ್ಟು ಮರಸಂಕ ಊರಿನ ಜನ ಚುನಾವಣಾ ಬಹಿಷ್ಕಾರ ಮಾಡಿದ್ದರು. ಆದರೆ ಆ ಸಂದರ್ಭದಲ್ಲಿ ಎಸ್. ಅಂಗಾರ ಈ ಬಾರಿ ಖಂಡಿತ ಸೇತುವೆ ಮಾಡಿಕೊಡುವುದಾಗಿ ಆಶ್ವಾಸನೆ ನೀಡಿದ್ದರು.
ಈಗ ಸೇತುವೆ ಆಗಿಲ್ಲ. ಶಾಸಕರಾದ ಅಂಗಾರ ಮಾತ್ರ ಸಚಿವರಾದರು ಅಂತಾ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications