ಮಂಗಳೂರು, ದಕ್ಷಿಣ ಕನ್ನಡ, ಸೀಲ್ಡ್ ಡೌನ್: ಜಿಲ್ಲಾಡಳಿತದ ಸ್ಪಷ್ಟನೆ
ಮಂಗಳೂರು, ಏಪ್ರಿಲ್ 10: ತಕ್ಷಣದಿಂದಲೇ ಜಾರಿಗೆ ಬರುವಂತೆ ಮಂಗಳೂರು ನಗರ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಸೀಲ್ಡ್ ಡೌನ್ ಆಗಲಿದೆ ಎನ್ನುವ ಸುದ್ದಿಯ ಬಗ್ಗೆ ಜಿಲ್ಲಾಡಳಿತ ಸ್ಪಷ್ಟನೆಯನ್ನು ನೀಡಿದೆ.
ಶುಕ್ರವಾರ ಬೆಳಗ್ಗೆಯಿಂದ ಜಿಲ್ಲೆ ಸೀಲ್ಡ್ ಡೌನ್ ಆಗಲಿದೆ ಎನ್ನುವ ಸುಳ್ಳು ಸುದ್ದಿಯಿಂದ, ಜನರು ಆತಂಕಗೊಂಡಿದ್ದರು. ಈ ಬಗ್ಗೆ ಸ್ಪಷ್ಟನೆಯನ್ನು ನೀಡಿರುವ ಜಿಲ್ಲಾಡಳಿತ "ಇದೊಂದು ಸುಳ್ಳು ಸುದ್ದಿ" ಎಂದು ಹೇಳಿದೆ.
"ಈಗಾಗಲೇ ಲಾಕ್ ಡೌನ್ ಇರುವುದರಿಂದ, ಜಿಲ್ಲೆಯನ್ನು ಸಂಪೂರ್ಣವಾಗಿ ಸೀಲ್ಡ್ ಡೌನ್ ಮಾಡುವ ಯಾವ ಪ್ರಕ್ರಿಯೆಗಳೂ ನಡೆಯುತ್ತಿಲ್ಲ. ರಾಜ್ಯ ಸರಕಾರದಿಂದ ಯಾವ ಸುತ್ತೋಲೆಗಳೂ ಬಂದಿಲ್ಲ" ಎಂದು ಜಿಲ್ಲಾಡಳಿತ ಅತ್ಯಂತ ಸ್ಪಷ್ಟವಾಗಿ ಹೇಳಿದೆ.

"ಮುಂದಿನ ಕೆಲವು ದಿನ ಲಾಕ್ ಡೌನ್ ಮುಂದುವರಿಯಲಿದೆ. ಇದನ್ನೇ ನಾವು ಕಟ್ಟುನಿಟ್ಟಾಗಿ ಜಾರಿಗೆ ತರುತ್ತಿದ್ದೇವೆಯೇ ಹೊರತು, ಸೀಲ್ಡ್ ಡೌನ್ ಇಲ್ಲ. ಜನರು ವದಂತಿಯನ್ನು ನಂಬಬೇಡಿ" ಎಂದು ಜಿಲ್ಲಾಡಳಿತ, ಸಾರ್ವಜನಿಕರಲ್ಲಿ ಮನವಿ ಮಾಡಿದೆ.
"ಸುದ್ದಿ ಪ್ರಸಾರ ಮಾಡುವ ಮೊದಲು, ಸಂಬಂಧ ಪಟ್ಟ ಇಲಾಖೆಯಿಂದ ದೃಢೀಕರಿಸಲು ಕೋರಲಾಗಿದೆ. ಆದರೂ, ಇಂತಹ ಸುಳ್ಳುಸುದ್ದಿಗಳು ಪ್ರಸಾರವಾಗುತ್ತಿವೆ. ಇದರಿಂದ, ಅನಗತ್ಯವಾಗಿ ಸಾರ್ವಜನಿಕರು ಗಾಭರಿಗೊಳಗಾಗುತ್ತಾರೆ" ಎಂದು ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಎಚ್ಚರಿಕೆಯನ್ನು ನೀಡಿದ್ದಾರೆ.
ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ಸರಕಾರ ತೆಗೆದುಕೊಂಡ ಕ್ರಮದ ರೀತಿಯಲ್ಲಿ, ರಾಜ್ಯದ ಕೆಲವು ಜಿಲ್ಲೆಗಳು ಸೀಲ್ಡ್ ಡೌನ್ ಆಗಲಿದೆ. ಇದರಿಂದ, ಸಾರ್ವಜನಿಕರಿಗೆ ದೈನಂದಿನ ಪದಾರ್ಥಗಳೂ ಸಿಗುವುದಿಲ್ಲ ಎನ್ನುವ ಸುದ್ದಿ ಶುಕ್ರವಾರ ಬೆಳಗ್ಗೆ, ದಟ್ಟವಾಗಿ ಜಿಲ್ಲೆಯಲ್ಲಿ ಹರಿದಾಡುತ್ತಿತ್ತು.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications