ಉತ್ತರ ಭಾರತದ ನಟೋರಿಯಸ್ ಸಾಹೇಬ್ ಗ್ಯಾಂಗ್ ಡಕಾಯಿತರು ಮಂಗಳೂರಿನಲ್ಲಿ ಸೆರೆ
ಮಂಗಳೂರು, ಡಿ. 01: ಜ್ಯುವೆಲ್ಲರಿ ದರೋಡೆಗೆ ಸಂಚು ರೂಪಿಸಿದ್ದ ಉತ್ತರ ಭಾರತದ ನಟೋರಿಯಸ್ ಸಾಹೇಬ್ ಗಂಜ್ ಗ್ಯಾಂಗ್ ಅನ್ನು ಮಂಗಳೂರು ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.
ಮಂಗಳೂರು ನಗರ ಹೊರವಲಯದ ಉಳ್ಳಾಲ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿ ದರೋಡೆಗೆ ಯತ್ನಿಸಿದ್ದ ಕುಖ್ಯಾತ ಅಂತಾರಾಜ್ಯ ಸಾಹೇಬ್ ಗಂಜ್ ದರೋಡೆ ಗ್ಯಾಂಗ್ ನ 9 ಮಂದಿ ಖದೀಮರನ್ನು ಬಂಧಿಸುವಲ್ಲಿ ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಗುಜರಾತ್ ನಿವಾಸಿ ಭಾಸ್ಕರ ಬೆಳ್ಚಪಾಡ (65), ನೇಪಾಲ ದೇಶದ ದಿನೇಶ್ ರಾವಲ್ (38) ಬಿಸ್ತ ರೂಪ್ ಸಿಂಗ್ (34), ಕೃಷ್ಣ ಬಹದ್ದೂರ್ ಬೋಗಟಿ (41), ಜಾರ್ಖಂಡ್ ನ ಮೊಹಮ್ಮದ್ ಜಾಮೀಲ್ ಶೇಖ್ (29), ಇಂಜಮಾಮ್ ಉಲ್ ಹಕ್ (27), ಇಮ್ದದುಲ್ ರಝಾಕ್ ಶೇಖ್ (32), ಬಿವುಲ್ ಶೇಖ್ (31) ಇಮ್ರಾನ್ ಶೇಖ್ (30) ಬಂಧಿತ ದರೋಡೆಕೋರರು.

ನಗರದ ತೊಕ್ಕೊಟ್ಟು ಮಂಚಿಲದಲ್ಲಿನ ಮನೆಯೊಂದರಲ್ಲಿ ಉತ್ತರ ಭಾರತದ ಕುಖ್ಯಾತ " ಸಾಹೇಬ್ ಗಂಜ್ ದರೋಡೆ ಗ್ಯಾಂಗ್" ನ ವ್ಯಕ್ತಿಗಳು ವಾಸವಿತ್ತು. ಈ ಗ್ಯಾಂಗ್ ತೊಕ್ಕೊಟ್ಟಿನ ಜ್ಯುವೆಲ್ಲರಿ ಅಂಗಡಿಗೆ ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದೆ ಎಂಬ ಬಗ್ಗೆ ಖಚಿತ ಮಾಹಿತಿ ಮೇರೆಗೆ ಮಂಗಳೂರು ಸಿಸಿಬಿ ಪೊಲೀಸ್ ತಂಡ ದಾಳಿ ನಡೆಸಿ 9 ಮಂದಿಯನ್ನು ಬಂಧಿಸಿದ್ದಾರೆ.
ಸೂಪರ್ ಗೋಲ್ಡ್ ಅಂಡ್ ಡೈಮಂಡ್ಸ್ ಜ್ಯುವೆಲ್ಲರಿಯನ್ನು ದರೋಡೆಗೆ ಸಂಚು ರೂಪಿಸಿದ್ದರು ಎನ್ನಲಾಗಿದೆ. ಈ ಗ್ಯಾಂಗ್ ದರೋಡೆಗೆ ಗ್ಯಾಸ್ ಕಟ್ಟರ್, ಆಕ್ಸಿಜನ್ ಸಿಲಿಂಡರ್, ಗ್ಯಾಸ್ ಸಿಲಿಂಡರ್, ಗ್ಯಾಸ್ ಕಟ್ಟಿಂಗ್ ನೋಝಲ್, ಕಟ್ಟಿಂಗ್ ಹೋಸ್ ಪೈಪ್, ಲೆದರ್ ಹ್ಯಾಂಡ್ ಗ್ಲೌಸ್, ಕಬ್ಬಿಣದ ರಾಡ್, ತಲವಾರು, ಹ್ಯಾಕ್ಸೋ ಬ್ಲೇಡ್, ಹ್ಯಾಮರ್, ಸ್ಕ್ರೂಡ್ರೈವರ್, ಮೆಣಸಿನ ಹುಡಿ, ನೈಲಾನ್ ಹಗ್ಗ ಹಾಗೂ ಇತರ ಹಲವಾರು ಸೊತ್ತುಗಳನ್ನು ಇವರು ಶೇಖರಿಸಿಕೊಂಡಿದ್ದರು.
ಆರೋಪಿಗಳನ್ನು ಬಂಧಿಸಿರುವ ಪೊಲೀಸರು ಅವರಿಂದ ಈ ಎಲ್ಲಾ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಮೌಲ್ಯ 2,90,000 ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸಾಹೀಬ್ ಗಂಜ್ ಗ್ಯಾಂಗ್ ಎಂಬುವುದು ಉತ್ತರ ಭಾರತದ ಜಾರ್ಖಂಡ್ ರಾಜ್ಯದ ನಟೋರಿಯಸ್ ಗ್ಯಾಂಗ್. ಈ ಗ್ಯಾಂಗ್ನ ನಟೋರಿಯಸ್ ಕ್ರಿಮಿನಲ್ಗಳ ಪೈಕಿ ನೇಪಾಳದವರೇ ಅತೀ ಹೆಚ್ಚು. ಈ ಗ್ಯಾಂಗ್ನ ಪಾತಕಿಗಳು ಮೊದಲು ದೊಡ್ಡ ನಗರಗಳ ದೊಡ್ಡ ಜುವ್ಯಲ್ಲೆರಿ ಅಂಗಡಿಗಳನ್ನು ಗುರುತಿಸಸುತ್ತಾರೆ. ಬಳಿಕ ಅದೇ ಪ್ರದೇಶದಲ್ಲಿ ಲಾಡ್ಜ್ ಅಥವಾ ಬಾಡಿಗೆ ಮನೆಯಲ್ಲಿ ವಾಸವಿದ್ದು, ದರೋಡೆಗೆ ಬೇಕಾದ ಎಲ್ಲಾ ವಸ್ತುಗಳನ್ನು ಖರೀದಿಸುತ್ತಾರೆ. ಬಳಿಕ ಕನ್ನ ಕೊರೆದು, ತಿಜೋರಿಯನ್ನು ಗ್ಯಾಸ್ ಕಟ್ಟರ್ ಮೂಲಕ ಒಡೆದು ಕೋಟ್ಯಾಂತರ ರೂಪಾಯಿ ಮೌಲ್ಯದ ಸೊತ್ತು ದೋಚುವುದರಲ್ಲಿ ಈ ಗ್ಯಾಂಗ್ ಕುಖ್ಯಾತಿ ಪಡೆದಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications