ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ಹೇಳಿಲ್ಲ: ಯು.ಟಿ.ಖಾದರ್
ಮಂಗಳೂರು, ಡಿಸೆಂಬರ್ 19: ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ, ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ ಎಂದು ಮಾಜಿ ಸಚಿವ ಯು.ಟಿ.ಖಾದರ್ ಟ್ವಿಟ್ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಉರಿಯುವ 'ಪೌರತ್ವ'ದ ಬೆಂಕಿಗೆ 'ನಿಷೇಧಾಜ್ಞೆ'ಯ ತುಪ್ಪ
ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬ ಅರ್ಥದಲ್ಲಿ ಹೇಳಿದ್ದೇನೆ. ತಪ್ಪಾಗಿ ಅರ್ಥ ಮಾಡಿಕೊಂಡು ನನ್ನ ಹೇಳಿಕೆಯನ್ನು ತಿರುಚಲಾಗಿದೆ ಎಂದು ಬರೆದುಕೊಂಡಿದ್ದಾರೆ.
ಸುಮ್ಮನೆ ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಅಂದಹಾಗೆ ಈ ಪೌರತ್ವ ಕಾನೂನು ಹುಟ್ಟು ಹಾಕಿ ಉತ್ತರ ಭಾರತದ ರಾಜ್ಯಗಳಿಗೆ ಬೆಂಕಿ ಇಟ್ಟಿದ್ದೀರ ಎಂದಿದ್ದಾರೆ.
ನನ್ನ ಹೇಳಿಕೆಯನ್ನು ತಪ್ಪಾಗಿ ಅರ್ಥೈಸಲಾಗಿದೆ.ಕರ್ನಾಟಕಕ್ಕೆ ಬೆಂಕಿ ಹಚ್ಚುತ್ತೇನೆಂದು ನಾನು ಹೇಳಿಲ್ಲ.CAB ಕರ್ನಾಟಕದಲ್ಲಿ ಜಾರಿ ಮಾಡಿದರೆ ತೀವ್ರ ವಿರೋಧ ವ್ಯಕ್ತವಾಗಲಿದೆ ಎಂಬರ್ಥದಲ್ಲಿ ಹೇಳಿದ್ದೇನೆ.ತಪ್ಪಾಗಿ ಅರ್ಥೈಸಿಕೊಂಡು ಕಾಲಹರಣ ಮಾಡುವ ಬದಲು ಇತರ ಕೆಲಸದತ್ತ ಗಮನ ಕೊಡಿ.(1)
— UT Khadér (@utkhader) December 19, 2019
ಈ ನಡುವೆಯೇ ಆರ್ಥಿಕ ಕುಸಿತದ ಕಥೆ ಎಲ್ಲಿಗೆ ಬಂತು? ಇದರಿಂದ ತಪ್ಪಿಸಿಕೊಳ್ಳಲು ಹೊಸ ಕಾನೂನು ಜಾರಿ ಮಾಡುತ್ತಿದೆ ಎಂದು ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.