ಲೋಕಸಭೆಯಲ್ಲಿ ಕಂಬಳ ಪರ ಧ್ವನಿ ಮೊಳಗಿಸಿದ ನಳಿನ್
ಮಂಗಳೂರು, ಫೆಬ್ರವರಿ 8: ಕಂಬಳ ಕ್ರೀಡೆಗೆ ಕೇಂದ್ರ ಸರಕಾರವು ಸಂಪೂರ್ಣ ಬೆಂಬಲ ನೀಡಬೇಕು ಎಂದು ಮಂಗಳೂರು ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲು ಲೋಕಸಭೆಯಲ್ಲಿ ಆಗ್ರಹಿಸಿದ್ದಾರೆ.
"ಕಂಬಳ ಕರಾವಳಿ ಕರ್ನಾಟಕದ ಒಂದು ಜಾನಪದ ಕ್ರೀಡೆ. ಕೋಣಗಳನ್ನು ಮಣ್ಣಿನ ಗದ್ದೆಯಲ್ಲಿ ಓಡಿಸುವ ಸ್ಪರ್ಧೆಯೇ ಕಂಬಳ. ಕಂಬಳದ ಇತಿಹಾಸದಲ್ಲಿ ಕೋಣಗಳನ್ನು ಯಾವುದೇ ರೀತಿಯಾಗಿ ಹಿಂಸಿಸುವ ಹಾಗೂ ಈ ಕ್ರೀಡೆಯ ಸಂದರ್ಭದಲ್ಲಿ ಕೋಣಗಳು ಮೃತಪಟ್ಟ ನಿದರ್ಶನಗಳಿಲ್ಲ. ಈ ಕ್ರೀಡೆಯು ಕರಾವಳಿ ರೈತರ ಆಚರಣೆ, ಸಂಪ್ರದಾಯ ಹಾಗೂ ಸಂಸ್ಕೃತಿಯ ಪ್ರತೀಕವಾಗಿದ್ದು, ಕಂಬಳಕ್ಕೆ ಅದರದ್ದೇ ಆಗಿರುವ ಇತಿಹಾಸವಿದೆ. ದಾಖಲೆಗಳು ಹಾಗೂ ಶಾಸನಗಳು ಇದಕ್ಕೆ ಸಾಕ್ಷಿಯಾಗಿರುತ್ತದೆ. ಕರಾವಳಿ ಕರ್ನಾಟಕದ ಬೈಂದೂರಿನಿಂದ ಕೇರಳದ ಕಾಸರಗೋಡಿನವರೆಗೆ ನೂರಾರು ಕಂಬಳ ಗದ್ದೆಗಳಿವೆ," ಎಂದು ಲೋಕಸಭೆಯಲ್ಲಿನ ನಳಿನ್ ಕುಮಾರ್ ಕಟೀಲ್ ಹೇಳಿದರು.[ಕಂಬಳ ಇರಲಿ, ಪನಿಕುಲ್ಲನೆ ಬೇಡ: ದೇವನೂರು ಮಹಾದೇವ]

"ಕರ್ನಾಟಕ ಸೇರಿದಂತೆ ನಮ್ಮ ದೇಶದ ಸಂಸ್ಕೃತಿ, ಜನಪದ ಕ್ರೀಡೆ ಹಾಗೂ ಆಚರಣೆಗಳನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮದಾಗಿರುತ್ತದೆ. ಕೇಂದ್ರ ಹಾಗೂ ರಾಜ್ಯ ಸರಕಾರವು ಕಂಬಳದಂತಹ ಗ್ರಾಮೀಣ ಕ್ರೀಡೆಗಳಿಗೆ ಅನುದಾನ ನೀಡಿ ಹಾಗೂ ಈ ಕ್ರೀಡೆಗಳಲ್ಲಿನ ಸಾಧಕರಿಗೆ ಪ್ರಶಸ್ತಿ ಪುರಸ್ಕಾರಗಳನ್ನು ನೀಡಿ ಗ್ರಾಮೀಣ ಕ್ರೀಡೆಗಳಿಗೆ ಉತ್ತೇಜನ ನೀಡಬೇಕು," ಎಂದು ನಳಿನ್ ಆಗ್ರಹಿಸಿದರು.[ಕಂಬಳ ಎಂದರೇನು? ಕಂಬಳ ನಮಗೇಕೆ ಬೇ]

"ಕರ್ನಾಟಕದ ಕಂಬಳಾಭಿಮಾನಿಗಳು ಕಂಬಳದ ಮೇಲೆ ಹೇರಲಾದ ನಿಷೇಧವನ್ನು ತೆರವುಗೊಳಿಸುವಂತೆ ಆಗ್ರಹಿಸುತ್ತಿದ್ದಾರೆ. ಗ್ರಾಮೀಣ ಕ್ರೀಡೆಗಳ ಪ್ರಾಮುಖ್ಯತೆಗಳನ್ನು ಮನಗಂಡು ಕೇಂದ್ರ ಸರಕಾರವು ಕಂಬಳ ಹಾಗೂ ಕಂಬಳದಂತಹ ಜಾನಪದ ಕ್ರೀಡೆಗಳನ್ನು ನಡೆಸಲು ಅನುಮತಿ ನೀಡುವುದಲ್ಲದೆ ಸರಕಾರವೇ ಇಂತಹ ಕ್ರೀಡೆಗಳನ್ನು ನಡೆಸಲು ಪ್ರೋತ್ಸಾಹವನ್ನು ನೀಡಬೇಕು. ಕರ್ನಾಟಕದ ತುಳು ಭಾಷಿಕರ ಗುರುತಾಗಿರುವ ಕಂಬಳ ಕ್ರೀಡೆಯನ್ನು ನಡೆಸಲು ಕೇಂದ್ರ ಸರಕಾರವು ಈ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು," ಎಂದು ಸಂಸದ ನಳಿನ್ ಕುಮಾರ್ ಕಟೀಲ್ ಒತ್ತಾಯಿಸಿದರು. ಮಂಗಳವಾರ ಚಳಿಗಾಲದ ಅಧಿವೇಶನದಲ್ಲಿ ನಿಯಮ 377ರ ಅಡಿಯಲ್ಲಿ ಸಂಸದ ನಳಿನ್ ಕಂಬಳ ಕ್ರೀಡೆಯ ಪ್ರಸ್ತಾಪ ಮಾಡಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications