ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಉಗ್ರರನ್ನು ಮುಗಿಸಲು ಭಾರತೀಯ ಸೇನೆಗೆ ಭಗವಂತ ಭೀಮ ಬಲ ನೀಡಲಿ:ಒಡಿಯೂರು ಶ್ರೀ

|
Google Oneindia Kannada News

ಮಂಗಳೂರು, ಫೆಬ್ರವರಿ 15: ಪಾಕ್ ಪ್ರೇರಿತ ಉಗ್ರರು ಸಿಆರ್ ಪಿಎಫ್ ಯೋಧರ ವಾಹನದ ಮೇಲೆ ನಡೆಸಿರುವ ದಾಳಿಗೆ ದೇಶದೆಲ್ಲೆಡೆ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಕಾಶ್ಮೀರದಲ್ಲಿ ಉಗ್ರರು ನಡೆಸಿದ ಆತ್ಮಾಹುತಿ ದಾಳಿಯಲ್ಲಿ ಹುತಾತ್ಮರಾದ ವೀರ ಯೋಧರಿಗೆ ಸಂತಾಪದ ಮಹಾಪೂರವೇ ಹರಿದು ಬರುತ್ತಿದೆ. ಈ ನಡುವೆ ಉಗ್ರರಿಗೆ ತಕ್ಕ ಪಾಠ ಕಲಿಸಲು ಸರ್ಜಿಕಲ್ ಸ್ಟ್ರೈಕ್ ದಾಳಿ ನಡೆಸುವಂತೆ ಒತ್ತಾಯ ಬಲಗೊಳ್ಳುತ್ತಿದೆ.

ಪುಲ್ವಾಮಾ ದಾಳಿ LIVE:ಯೋಧರ ಪಾರ್ಥಿವ ಶರೀರ ಹೊತ್ತ ರಾಜನಾಥ್ ಸಿಂಗ್ಪುಲ್ವಾಮಾ ದಾಳಿ LIVE:ಯೋಧರ ಪಾರ್ಥಿವ ಶರೀರ ಹೊತ್ತ ರಾಜನಾಥ್ ಸಿಂಗ್

ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ಒಡಿಯೂರು ಮಠದ ಶ್ರೀ ಗುರುದೇವಾನಂದ ಸ್ವಾಮೀಜಿ, ಉಗ್ರರ ದಾಳಿಗೆ ಆಕ್ರೋಶ ವ್ಯಕ್ತಪಡಿಸಿದ್ದು, ಉಗ್ರರನ್ನು ಮುಗಿಸಲು ನಮ್ಮ ಸೇನೆಗೆ ಭಗವಂತ ಭೀಮ ಬಲ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸಿದ್ದಾರೆ.

Odiyoor swamiji condemned terror attack on CRPF convoy

ನಮ್ಮ ಸುಖ, ಸಂತೋಷದ ಹಿಂದೆ ಯೋಧರ ತ್ಯಾಗ-ಬಲಿದಾನವಿದೆ. ಇದನ್ನು ಅರ್ಥ ಮಾಡಿಕೊಂಡು ಯೋಧರಿಗೆ ಸಾಂತ್ವನ ಹೇಳುವ ಕಾರ್ಯ ಸಮಾಜ ಮಾಡಬೇಕು. ಉಗ್ರರು ಈ ಹೇಯ ಕೃತ್ಯಕ್ಕೆ ಖಂಡಿಸುವ ಜತೆಗೆ ಪ್ರತ್ಯುತ್ತರ ನೀಡುವ ಕಾರ್ಯವಾಗಬೇಕು. ಎದೆಕೊಟ್ಟು ಸೆಟೆದು ನಿಲ್ಲುವ ಕಾರ್ಯ ಯೋಧರಿಂದ ನಡೆಯಲಿ ಎಂದು ಹೇಳಿದರು.

 ಮತ್ತೊಂದು ಸರ್ಜಿಕಲ್ ದಾಳಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ವಿಎಚ್ ಪಿ ಬಜರಂಗದಳ ಪ್ರತಿಭಟನೆ ಮತ್ತೊಂದು ಸರ್ಜಿಕಲ್ ದಾಳಿಗೆ ಒತ್ತಾಯಿಸಿ ಮಂಗಳೂರಿನಲ್ಲಿ ವಿಎಚ್ ಪಿ ಬಜರಂಗದಳ ಪ್ರತಿಭಟನೆ

ಉಗ್ರರ ಈ ನೀಚ ಕೃತ್ಯಕ್ಕೆ ದೇವರ ಬಲ ಯಾವತ್ತೂ ಇರುವುದಿಲ್ಲ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿ ತಿಳಿಸಿದರು.

English summary
Sri Gurudevanand swamiji of Odiyoor Matt condemned terrorist suicide attack on CRPF convoy in Jammu.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X