ಹಿಂದೂ ಕಾರ್ಯಕರ್ತರಿಂದ ದೇಯಿ ಬೈದ್ಯೆತಿ ವಿಗ್ರಹಕ್ಕೆ ಹಾಲೆರೆದು ಶುದ್ಧೀಕರಣ
ಮಂಗಳೂರು, ಸೆಪ್ಟೆಂಬರ್ 13: ತುಳುನಾಡಿನ ವೀರ ಪುರುಷರಾದ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿ ಅವರ ವಿಗ್ರಹ ಅರಣ್ಯ ಇಲಾಖೆಯ ವಿರೋಧದ ನಡುವೆಯೇ ಕ್ಷೀರಾಭಿಷೇಕ ಮೂಲಕ ಶುದ್ಧೀಕರಣ ಪ್ರಕ್ರಿಯೆ ನಡೆಸಲಾಗಿದೆ.
ಕೋಟಿ ಚೆನ್ನಯರ ಜನ್ಮಸ್ಥಳವಾದ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಪಡುಮಲೆಯಲ್ಲಿ ದೇಯಿ ಬೈದ್ಯೆತಿ ಔಷಧ ವನವಿದ್ದು, ಈ ಔಷಧ ವನದಲ್ಲಿ ದೇಯಿ ಬೈದ್ಯೆತಿಯ ವಿಗ್ರಹ ಸ್ಥಾಪಿಸಲಾಗಿತ್ತು.
ಕೆಲವು ದಿನಗಳ ಹಿಂದೆ ಯುವಕನೋರ್ವ ದೇಯಿ ಬೈದ್ಯೆತಿ ಅವರ ವಿಗ್ರಹಕ್ಕೆ ಈಶ್ವರಮಂಗಲದ ಹನೀಫ್ ಎಂಬಾತ ಅಪಮಾನ ಮಾಡಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದ. ಈ ಹಿನ್ನೆಲೆಯಲ್ಲಿ ಆತನ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ವಿಗ್ರಹ ಶುದ್ದೀಕರಣಕ್ಕೆ ಯತ್ನ
ಈ ಹಿನ್ನಲೆಯಲ್ಲಿ ಕೋಟಿ ಚೆನ್ನಯರ ತಾಯಿ ದೇಯಿ ಬೈದ್ಯೆತಿ ವಿಗ್ರಹಕ್ಕೆ ಶುದ್ಧೀಕರಣ ಪ್ರಕ್ರಿಯೆ ನಿರ್ವಹಿಸಲು ವಿಶ್ವ ಹಿಂದು ಪರಿಷತ್, ಭಜರಂಗದಳ ಹಾಗೂ ದುರ್ಗಾ ವಾಹಿನಿ ಕಾರ್ಯಕರ್ತರು ನಿರ್ಧರಿಸಿದ್ದರು. ದೇಯಿ ಬೈದ್ಯೆತಿ ವಿಗ್ರಹಕ್ಕೆ ಕ್ಷೀರಾಭಿಷೇಕ ಮೂಲಕ ಶುದ್ಧೀಕರಣ ನಡೆಸಲು ಕಾರ್ಯಕರ್ತರು ಮುಂದಾಗಿದ್ದರು.

ಕಾರ್ಯಕರ್ತರಿಂದ ಪ್ರತಿಭಟನೆ
ಆದರೆ, ಔಷಧವನವನ್ನು ಪ್ರವೇಶಿಸಲು ಅರಣ್ಯ ಇಲಾಖೆ ಅಧಿಕಾರಿಗಳು ಅನುಮತಿ ನಿರಾಕರಿಸಿದ ಹಿನ್ನೆಲೆಯಲ್ಲಿ, ಅರಣ್ಯ ಇಲಾಖೆಯ ಧೋರಣೆ ವಿರೋಧಿಸಿ ಔಷಧಿ ವನದ ಹೊರಗೆ ಸಂಘ ಪರಿವಾರದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.

ಕ್ಷೀರಾಭಿಷೇಕ
ಅವಕಾಶ ನೀಡದಿದ್ದರೂ ಹಿಂದೂ ಸಂಘಟನೆಯ ಕಾರ್ಯಕರ್ತರು ಗೌಪ್ಯವಾಗಿ ಔಷಧವನ್ನು ಪ್ರವೇಶಿಸಿ, ದೇಯಿ ಬೈದ್ಯೆತಿ ವಿಗ್ರಹಕ್ಕೆ ಕ್ಷೀರಾಭಿಷೇಕ ನೆರವೇರಿಸಿದ್ದಾರೆ. ಈ ಮೂಲಕ ಶುದ್ಧೀಕರಣ ನೆರವೇರಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಯುವಕನ ಬಂಧನ
ಇನ್ನು ಜಿಲ್ಲೆಯ ಬಿಲ್ಲವ ಸಂಘಟನೆಗಳು ಹನೀಫ್ ನ್ನು ಬಂಧಿಸಿ ಕಠಿಣ ಕ್ರಮ ಜರುಗಿಸುವಂತೆ ಆಗ್ರಹಿಸಿದ ಹಿನ್ನಲೆಯಲ್ಲಿ ಪೊಲೀಸ್ ಇಲಾಖೆ ಮನವಿ ಸ್ವೀಕರಿಸಿ ಅಪಮಾನ ಮಾಡಿದ ಯುವಕ ಈಶ್ವರಮಂಗಲ ನಿವಾಸಿ ಹನೀಫ್ ನನ್ನು ಬಂಧಿಸಿತ್ತು
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications