ಮಂಗಳೂರು: KPSC ಪರೀಕ್ಷಾ ಕೇಂದ್ರದ ಅವ್ಯವಸ್ಥೆ, ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳ ಬಳಕೆ
ಮಂಗಳೂರು, ಡಿಸೆಂಬರ್ 18: ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಲೋಕಸೇವಾ ಆಯೋಗವು ನಿನ್ನೆ ಭಾನುವಾರ(ಡಿಸೆಂಬರ್ 18) ಸ್ಪರ್ಧಾತ್ಮಕ ಪರೀಕ್ಷೆ ನಡೆಸಿದೆ. ಮಂಗಳೂರಿನಲ್ಲಿ ಈ ಪರೀಕ್ಷೆ ನಡೆದ ಕ್ರಮಕ್ಕೆ ಹಾಗೂ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಸ್ಪರ್ಧಾತ್ಮಕ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳ ತಪಾಸಣೆಗೆ ಮಕ್ಕಳನ್ನು ಬಳಕೆ ಮಾಡಿರುವುದು ತೀವ್ರ ಆಕ್ಷೇಪಕ್ಕೆ ಕಾರಣವಾಗಿದೆ.
ಮಂಗಳೂರಿನ ಬಲ್ಮಠದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯ ಗ್ರೂಪ್ ಸಿ ವೃಂದದ ಕಿರಿಯ ಲೆಕ್ಕ ಸಹಾಯಕ ಹುದ್ದೆಗಳ ನೇಮಕಾತಿ ಪರೀಕ್ಷೆ ನಡೆಯಿತು. ಈ ವೇಳೆ ಸರ್ಕಾರದ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದಲ್ಲಿ ಸಣ್ಣ ಸಣ್ಣ ವಿದ್ಯಾರ್ಥಿಗಳು ಅಭ್ಯರ್ಥಿಗಳ ತಪಾಸಣೆ ಮಾಡುತ್ತಿರುವ ದೃಶ್ಯ ಕಂಡುಬಂದಿದೆ.

ಕೆಪಿಎಸ್ಸಿ, ಪರೀಕ್ಷಾ ಅಕ್ರಮವನ್ನು ತಡೆಯುವ ದೃಷ್ಟಿಯಿಂದ ಮೆಟಲ್ ಡಿಟೆಕ್ಟರ್, ಬಯೋ ಮೆಟ್ರಿಕ್ ಫೇಸ್ ಡಿಟೆಕ್ಷನ್, ಬಾಡಿ ಕ್ಯಾಮೆರಾ ಹಾಗೂ ಮೊಬೈಲ್ ಜಾಮರ್ ಬಳಕೆಗೆ ಸೂಚಿಸಿದೆ. ಆದರೆ ಮಂಗಳೂರಿನ ಬಲ್ಮಠದ ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಸರ್ಕಾರಿ ಪರೀಕ್ಷೆಗೆ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳನ್ನು ತಪಾಸಣೆಗೆ ಬಳಸಿಕೊಂಡು ಅಧಿಕಾರಿಗಳು ಬೇಜವಾಬ್ದಾರಿ ತೋರಿರುವ ಆರೋಪ ಕೇಳಿ ಬಂದಿದೆ.
ಕೆಪಿಎಸ್ಸಿಯ ಮಹತ್ವದ ಬಗ್ಗೆ, ಭದ್ರತೆ ಬಗ್ಗೆ ಅರಿವೇ ಇಲ್ಲದ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರದ ಭದ್ರತೆಗೆ ನೇಮಕ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದ ಬಾಗಿಲಲ್ಲಿ ಏಳೆಂಟು ವಿದ್ಯಾರ್ಥಿಗಳು ಮೆಟಲ್ ಡಿಟೆಕ್ಟರ್ ಹಿಡಿದು ಪರೀಕ್ಷಾರ್ಥಿಗಳ ತಪಾಸಣೆ ಮಾಡಿದ್ದಾರೆ. ಈ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಕೆಪಿಎಸ್ಸಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಬಿಜೆಪಿ ಶಾಸಕರ ಕಿಡಿ
ಕೆಪಿಎಸ್ಸಿ ಪರೀಕ್ಷೆಯ ಅಭ್ಯರ್ಥಿಗಳನ್ನು ಮಕ್ಕಳು ಪರಿಶೀಲನೆ ನಡೆಸುತ್ತಿರುವ ಫೋಟೋ ಹಂಚಿಕೊಂಡಿರುವ ವ್ಯಕ್ತಿಯೊಬ್ಬರು, 'ಕೆಪಿಎಸ್ಸಿ ನಡೆಸುತ್ತಿರುವ ಅಸಿಸ್ಟೆಂಟ್ ಅಕೌಂಟೆಂಟ್ ಪರೀಕ್ಷೆಗೆ ಮಂಗಳೂರಿನ ಶಾಲೆಯಲ್ಲಿ ಎಸ್ಎಸ್ಎಲ್ಸಿ ಮಕ್ಕಳಿಂದ ತಪಾಸಣೆ ನಡೆಸಿ ಅಭ್ಯರ್ಥಿಗಳನ್ನು ಒಳ ಬಿಡಲಾಗುತ್ತಿದೆ. ಎಂದು ಸಿಎಂ ಸಿದ್ದರಾಮಯ್ಯ ಹಾಗೂ ಸಚಿವ ಪ್ರಿಯಾಂಕ್ ಖರ್ಗೆ ಅವರಿಗೆ ಟ್ಯಾಗ್ ಮಾಡಿದ್ದು, ನಿಮಗೆ ಪರೀಕ್ಷೆ ನಡೆಸಲು ಯೋಗ್ಯತೆ ಇಲ್ಲದಿದ್ದರೆ ಕೆಪಿಎಸ್ಸಿ ಬಾಗಿಲು ಹಾಕಿಕೊಂಡು ಅಲ್ಲಿಂದ ತೊಲಗಿ' ಎಂದು ಕೆಪಿಎಸ್ಸಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.
ಈ ಪೋಸ್ಟ್ಗೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರತಿಕ್ರಿಯಿಸಿದ್ದು, 'ಅಸಿಸ್ಟೆಂಟ್ ಅಕೌಂಟೆಂಟ್ ಹುದ್ದೆಗಳಿಗೆ ನಡೆಯುವ ಪರೀಕ್ಷೆಗಳಿಗೆ ಹತ್ತನೇ ತರಗತಿ ಮಕ್ಕಳಿಂದ ತಪಾಸಣೆ ನಡೆಸುತ್ತಿರುವ ಕೆ.ಪಿ.ಎಸ್.ಸಿ ಇಲಾಖೆಯು ಪರೀಕ್ಷೆಗಳನ್ನು ನಡೆಸಲು ಹೇಗೆ ಸನ್ನದ್ಧರಾಗಿದ್ದಾರೆ ಎಂದು ತಿಳಿಯುತ್ತದೆ. ಕರ್ನಾಟಕ ಲೋಕ ಸೇವಾ ಆಯೋಗದಲ್ಲಿ ವೃತ್ತಿಪರತೆಯ ಕೊರತೆ ಎದ್ದು ಕಾಣುತ್ತಿದೆ' ಎಂದು ಕಿಡಿಕಾರಿದ್ದಾರೆ.
-
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ












Click it and Unblock the Notifications