ಮಂಗಳೂರಿನಲ್ಲಿ ಬೆಳಕಿಗೆ ಬಂತು ವೃದ್ಧನೊಬ್ಬನ ಕಾಮ ಪುರಾಣ
Recommended Video

ಮಂಗಳೂರು, ಸೆಪ್ಟೆಂಬರ್.24: ಅಪ್ರಾಪ್ತ ಹಾಗೂ ಹರೆಯದ ಯುವತಿಯರಿಗೆ ಆಮಿಷ ತೋರಿಸಿ ಲೈಂಗಿಕವಾಗಿ ಬಳಸಿಕೊಂಡು ಅದನ್ನು ಕ್ಯಾಮೆರಾದಲ್ಲಿ ಸೆರೆಹಿಡಿದು ಬ್ಲಾಕ್ ಮೇಲ್ ಮಾಡುತ್ತಿದ್ದ ವಿಕೃತಕಾಮಿಯೊಬ್ಬನ ವಿಕಟ ರೂಪ ಮಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಈ ವಿಕೃತ ಮನಸ್ಸಿನ ವೃದ್ಧ ಎಂಥಹ ಆಸಾಮಿ ಎಂದರೆ ತನ್ನ ಕೃತ್ಯಗಳ ವಿಡಿಯೋ ನೋಡುವುದೇ ಇವನಿಗೊಂದು ಚಟ. ನೋಡಲು ತುಂಬಾ ಸಂಭಾವಿತನಂತಿರುವ ಈ ವೃದ್ಧನ ಬುದ್ಧಿ ಮಾತ್ರ ಖತರ್ನಾಕ್ . ಕೇರಳ ಮೂಲದ ಈತನ ಹೆಸರು ಶಶಿ (65) . ಈ ವೃದ್ಧ ಕಳೆದ ಹಲವು ವರ್ಷಗಳಿಂದ ಯುವತಿಯರಿಗೆ ಆಮಿಷ ತೋರಿಸಿ, ತನ್ನ ಮಂಚಕ್ಕೆ ಕರೆಸಿಕೊಳ್ಳುತ್ತಿದ್ದ.
ಅಷ್ಟೇ ಅಲ್ಲ, ಅವರಿಗೆ ಗೊತ್ತಿಲ್ಲದಂತೆ ವಿಡಿಯೋ ಕ್ಯಾಮೆರಾ ಇಟ್ಟು ತನ್ನದೇ ಕಾಮದಾಟವನ್ನು ಚಿತ್ರೀಕರಿಸಿಕೊಳ್ಳುತ್ತಿದ್ದ. ನಂತರ ಅವರನ್ನು ಸತತವಾಗಿ ಬ್ಲಾಕ್ ಮೇಲ್ ಮಾಡಿ ಮತ್ತೆ ಮತ್ತೆ ಕಾಮತೃಷೆ ತೀರಿಸಿಕೊಳ್ಳುತ್ತಿದ್ದ ಈ ಚಪಲ ತೀರದ ವೃದ್ಧ ಎಂದು ಆರೋಪಿಸಲಾಗಿದೆ.

ಆದರೆ, ಈ ಬಗ್ಗೆ ಅರಿತ ಯುವತಿಯೊಬ್ಬಳು ಆತನ ಕ್ಯಾಮೆರಾದಲ್ಲಿದ್ದ ಚಿಪ್ ಅನ್ನೇ ಕದ್ದು ಸಾಮಾಜಿಕ ಕಾರ್ಯಕರ್ತೆಯೊಬ್ಬರಿಗೆ ನೀಡಿದ್ದರು. ಅದರಂತೆ ಕಾರ್ಯಾಚರಣೆ ನಡೆಸಿದ್ದ ಶ್ರೀಲತಾ ಎಂಬಾಕೆ ವೃದ್ಧನ ಜೊತೆ ಸಲುಗೆಯ ಮಾತನಾಡಿ ಬಲೆಯಲ್ಲಿ ಸಿಕ್ಕಿಬೀಳುವಂತೆ ಮಾಡಿದ್ದರು.
ಆನಂತರ ಆರೋಪಿ ಶಶಿಯನ್ನು ಮಂಗಳೂರಿನ ಕದ್ರಿ ಠಾಣೆಯ ಪೊಲೀಸರಿಗೆ ಹಸ್ತಾಂತರ ಮಾಡಿದ್ದರು. ಅದಲ್ಲದೇ 15ಕ್ಕೂ ಹೆಚ್ಚು ಯುವತಿಯರ ಜೊತೆ ಈ ವೃದ್ಧ ಕಾಮದಾಟವಾಡಿದ್ದ ಬಗ್ಗೆ ವಿಡಿಯೋ ಚಿತ್ರೀಕರಣದ ಕಾಪಿಯನ್ನೂ ಪೊಲೀಸರಿಗೆ ನೀಡಿದ್ದಾರೆ.
ಆದರೆ ಕದ್ರಿ ಠಾಣೆ ಪೊಲೀಸರು ಆತನ ವಿರುದ್ಧ ದೂರು ದಾಖಲಾಗಿಲ್ಲವೆಂಬ ನೆಪದಲ್ಲಿ ವೃದ್ಧನನ್ನು ಬಂಧಿಸದೆ ಬಿಟ್ಟಿದ್ದಾರೆ. ಹರೆಯದ ಬಾಲಕಿಯರನ್ನು, ಯುವತಿಯರನ್ನು ಬಳಸಿಕೊಂಡು ಬ್ಲಾಕ್ ಮೇಲ್ ಮಾಡುತ್ತಿದ್ದಾನೆಂದು ಮೌಖಿಕ ದೂರಿತ್ತಿದ್ದರೂ, ಪೊಲೀಸರು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಆದರೆ, ಆರೋಪಿ ಶಶಿ ತನ್ನನ್ನು ಬಯಲು ಮಾಡಿದ್ದ ಸಾಮಾಜಿಕ ಕಾರ್ಯಕರ್ತೆ ಶ್ರೀಲತಾ ವಿರುದ್ಧವೇ ಬರ್ಕೆ ಪೊಲೀಸ್ ಠಾಣೆಯಲ್ಲಿ ರಾಬರಿ ಪ್ರಕರಣ ದಾಖಲಿಸಿದ್ದಾನೆ. ಇದರಿಂದಾಗಿ ಪೊಲೀಸರು ಶ್ರೀಲತಾಳನ್ನು ವಶಕ್ಕೆ ಪಡೆದಿದ್ದಾರೆ.
ಹೀಗಾಗಿ ಪ್ರಕರಣದಲ್ಲಿ ಪೊಲೀಸರ ನಡೆಯೇ ಸಂಶಯ ಹುಟ್ಟಿಸಿದ್ದು, ವಿಕೃತ ಮನಸ್ಸಿನ ವೃದ್ಧನನ್ನು ಬಿಟ್ಟು, ಹಿಡಿದು ಕೊಟ್ಟವರನ್ನೇ ಬಂಧಿಸಲು ಮುಂದಾಗಿದ್ದು ಮಾತ್ರ ದುರ್ದೈವದ ಸಂಗತಿ .
-
ಮಳೆ.. ಮಳೆ.. ಮುಂದಿನ 48 ಗಂಟೆಯಲ್ಲಿ ಮಳೆ ಬಗ್ಗೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ... Karnataka Rain -
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ












Click it and Unblock the Notifications