400 ವರ್ಷ ಹಳೆಯ ಬ್ರಹ್ಮರಥಕ್ಕೆ ಇದು ಕೊನೆಯ ಚಂಪಾಷಷ್ಠಿ
ಮಂಗಳೂರು, ಡಿಸೆಂಬರ್ 12 : ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಈಗ ಚಂಪಾ ಸೃಷ್ಠಿಯ ಸಡಗರ . ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಚಂಪಾಷಷ್ಠಿ ಈ ಬಾರಿ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವದ ಕೊನೆಯದಿನ ಬ್ರಹ್ಮರಥಕ್ಕೆ ಇದು ಕೊನೆಯ ಜಾತ್ರಾ ಮಹೋತ್ಸವ . 400 ವರ್ಷ ಹಳೆಯ ಈ ಬ್ರಹ್ಮರಥಕ್ಕೆ ಇದೇ ಕೊನೆಯ ಚಂಪಾಷಷ್ಠಿ.
ಈ ಬಾರಿಯ ಜಾತ್ರೆಯಲ್ಲಿ ಕೊನೆಯ ಬಾರಿಗೆ ಈ ತೇರನ್ನು ಎಳೆಯಲಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ವೇಳೆ ಸಹಸ್ರಾರು ಭಕ್ತರ ಸಮ್ಮುಖ ಶ್ರದ್ಧಾಭಕ್ತಿಯಿಂದ ಎಳೆಯುವ ಬ್ರಹ್ಮರಥಕ್ಕೆ 400ಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. ಈ ತೇರನ್ನು ಈ ಬಾರಿಯ ಜಾತ್ರೆಯಲ್ಲಿ ಕೊನೆಯ ಬಾರಿಗೆ ಎಳೆಯಲಾಗುತ್ತಿದ್ದು, ಬಳಿಕ ಅದು ಇತಿಹಾಸದ ಪುಟಗಳನ್ನು ಸೇರಲಿದೆ.
ಹಳೆಯ ಬ್ರಹ್ಮರಥ ಎಷ್ಟು ಪ್ರಾಚೀನ ಎಂದು ನಿಖರವಾಗಿ ತಿಳಿದಿಲ್ಲ. ದಾಖಲೆಗಳ ಪ್ರಕಾರ 400 ವರ್ಷಗಳ ಹಿಂದೆ ಕೆಳದಿ ಸಂಸ್ಥಾನದ ಹಿರಿಯ ವೆಂಕಟಪ್ಪ ನಾಯಕ ರಥ ನಿರ್ಮಿಸಿ ಕೊಟ್ಟಿದ್ದ ಎಂದು ಹೇಳಲಾಗುತ್ತದೆ. ಪ್ರತಿಮಾಶಾಸ್ತ್ರ, ಚಿತ್ರಕಲೆ, ಜ್ಯಾಮಿತಿಕ ಅಂಶ, ಪೌರಾಣಿಕ ಸನ್ನಿವೇಶಗಳ ಹಿನ್ನೆಲೆ ತಿಳಿದ ಶಿಲ್ಪಿಗಳಿಂದ ಈ ರಥದ ರಚನೆಯಾಗಿದೆ. ವಿವಿಧ ಶಿಲ್ಪಶಾಸ್ತ್ರ ಗ್ರಂಥಗಳಲ್ಲಿ ಹೇಳಿರುವ ವಿಧಿ-ವಿಧಾನ, ನಿಯಮ ಅನುಸರಿಸಿ ರಚಿಸಿದ್ದಾಗಿದೆ.

ಶಿಥಿಲಾವಸ್ಥೆಯ ಹಂತಕ್ಕೆ ತಲುಪಿದೆ
ಬ್ರಹ್ಮರಥದಲ್ಲಿ ಪ್ರಪಂಚದ ಎಲ್ಲ ರೀತಿಯ ಜೀವರಾಶಿಗಳ ಚಿತ್ರಗಳ ಕೆತ್ತನೆಯಿದೆ. ಈ ಕೆತ್ತನೆಗಳು ಕಾಲಾಂತರದಲ್ಲಿ ನಶಿಸಿ ಹೋಗಿದ್ದು, ಬಹುತೇಕ ಚಿತ್ರಗಳು ಈಗ ಗೋಚರಿಸುತ್ತಿಲ್ಲ. ರಥದ ಮರದ ಚಕ್ರಗಳು ಇತರೆ ಬಿಡಿಭಾಗಗಳು ಬಿರುಕು ಪಡೆದು ಶಿಥಿಲಾವಸ್ಥೆಯ ಹಂತಕ್ಕೆ ತಲುಪಿದೆ.

ಇತಿಹಾಸ ಸೃಷ್ಟಿಸಲು ತೀರ್ಮಾನ
ಕಳೆದ 400 ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿದ ಬ್ರಹ್ಮರಥ ಶಿಥಿಲಾವಸ್ಥೆಗೆ ತಲುಪಿದ್ದು, ಇದರ ಬದಲಿಗೆ 1.99 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಬ್ರಹ್ಮರಥ ನಿರ್ಮಾಣಗೊಳ್ಳುತ್ತಿದೆ. ಈ ಬಾರಿ ಜಾತ್ರೆಯಲ್ಲಿ ಹಳೆಯ ತೇರನ್ನೇ ಎಳೆಯಲಾಗುತ್ತಿದೆ. ಐತಿಹಾಸಿಕ ರಥವನ್ನು ಕೊನೆಯ ಬಾರಿಗೆ ಎಳೆಯುವ ಮೂಲಕ ಇತಿಹಾಸವೊಂದು ಸೃಷ್ಟಿಸಲು ಭಕ್ತರು ತೀರ್ಮಾನಿಸಿದ್ದಾರೆ.

ಸ್ಯಂದನ ರಥ
ಆರು ಚಕ್ರ ಹೊಂದಿರುವ ಬ್ರಹ್ಮರಥವನ್ನು ಶಾಸ್ತ್ರೀಯವಾಗಿ ಸ್ಯಂದನ ರಥವೆನ್ನುವರು. ಅಡಿಪಾಯ, ಅಡಿಸ್ಥಾನ, ಮಂಟಪ, ಗೋಪುರ, ಶಿಖರ ಇವು ರಥದ ಪ್ರಮುಖ ಭಾಗಗಳು. ಅಡಿಪಾಯದಿಂದ ಮಂಟಪದವರೆಗಿನ ಒಟ್ಟು ಭಾಗ ಸ್ಥಿರ ರಥ. ಚಕ್ರದ ಎತ್ತರ 8 ಅಡಿ 6 ಅಂಗುಲ. ಒಂದು ಚಕ್ರದಲ್ಲಿ 5 ಬೃಹತ್ ಮರದ ತುಂಡುಗಳು ಇವೆ. ರಥದ ಚಕ್ರಗಳ ಅಗಲ 21 ಅಂಗುಲ. ರಥದ ಚಕ್ರದ ದಪ್ಪ 10 ಅಂಗುಲ ಎಂಬ ಲೆಕ್ಕವಿದೆ.

ನೂತನ ಬ್ರಹ್ಮರಥ ಸಿದ್ಧ
ದೇಗುಲದ ಪ್ರಶ್ನೆ ವೇಳೆ ಈಗಿನ ಬ್ರಹ್ಮರಥ ಶಿಥಿಲಾವಸ್ಥೆಗೆ ತಲುಪುತ್ತಿರುವುದರಿಂದ ನೂತನ ರಥ ಹೊಂದುವ ಕುರಿತು ಕಂಡುಬಂದಿತ್ತು. ಅದರಂತೆ ಬಿಡದಿ ರಿಯಾಲಿಟಿ ವೆಂಚರ್ ಫೋರ್ ಗ್ರೂಪ್ ಸಂಸ್ಥೆಯ ಪಾಲುದಾರರಾದ ಮುತ್ತಪ್ಪ ರೈ ಮತ್ತು ಅಜಿತ್ ರೈ ನೂತನ ಬ್ರಹ್ಮರಥ ನಿರ್ಮಿಸಿಕೊಡುತ್ತಿದ್ದಾರೆ. ಕೋಟೇಶ್ವರದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಬ್ರಹ್ಮರಥ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ನೂತನ ಬ್ರಹ್ಮರಥ ಸಿದ್ಧಗೊಂಡು ದೇಗುಲಕ್ಕೆ ಹಸ್ತಾಂತರಗೊಳ್ಳಲಿದೆ.
-
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ












Click it and Unblock the Notifications