400 ವರ್ಷ ಹಳೆಯ ಬ್ರಹ್ಮರಥಕ್ಕೆ ಇದು ಕೊನೆಯ ಚಂಪಾಷಷ್ಠಿ
ಮಂಗಳೂರು, ಡಿಸೆಂಬರ್ 12 : ಶ್ರೀ ಕ್ಷೇತ್ರ ಸುಬ್ರಹ್ಮಣ್ಯದಲ್ಲಿ ಈಗ ಚಂಪಾ ಸೃಷ್ಠಿಯ ಸಡಗರ . ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಚಂಪಾಷಷ್ಠಿ ಈ ಬಾರಿ ಹಲವು ವಿಶೇಷತೆಗಳಿಗೆ ಸಾಕ್ಷಿಯಾಗಿದೆ. ಶ್ರೀ ಕುಕ್ಕೆ ಸುಬ್ರಹ್ಮಣ್ಯದ ಜಾತ್ರಾ ಮಹೋತ್ಸವದ ಕೊನೆಯದಿನ ಬ್ರಹ್ಮರಥಕ್ಕೆ ಇದು ಕೊನೆಯ ಜಾತ್ರಾ ಮಹೋತ್ಸವ . 400 ವರ್ಷ ಹಳೆಯ ಈ ಬ್ರಹ್ಮರಥಕ್ಕೆ ಇದೇ ಕೊನೆಯ ಚಂಪಾಷಷ್ಠಿ.
ಈ ಬಾರಿಯ ಜಾತ್ರೆಯಲ್ಲಿ ಕೊನೆಯ ಬಾರಿಗೆ ಈ ತೇರನ್ನು ಎಳೆಯಲಾಗುತ್ತದೆ. ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಚಂಪಾಷಷ್ಠಿ ವೇಳೆ ಸಹಸ್ರಾರು ಭಕ್ತರ ಸಮ್ಮುಖ ಶ್ರದ್ಧಾಭಕ್ತಿಯಿಂದ ಎಳೆಯುವ ಬ್ರಹ್ಮರಥಕ್ಕೆ 400ಕ್ಕೂ ಅಧಿಕ ವರ್ಷಗಳ ಇತಿಹಾಸವಿದೆ. ಈ ತೇರನ್ನು ಈ ಬಾರಿಯ ಜಾತ್ರೆಯಲ್ಲಿ ಕೊನೆಯ ಬಾರಿಗೆ ಎಳೆಯಲಾಗುತ್ತಿದ್ದು, ಬಳಿಕ ಅದು ಇತಿಹಾಸದ ಪುಟಗಳನ್ನು ಸೇರಲಿದೆ.
ಹಳೆಯ ಬ್ರಹ್ಮರಥ ಎಷ್ಟು ಪ್ರಾಚೀನ ಎಂದು ನಿಖರವಾಗಿ ತಿಳಿದಿಲ್ಲ. ದಾಖಲೆಗಳ ಪ್ರಕಾರ 400 ವರ್ಷಗಳ ಹಿಂದೆ ಕೆಳದಿ ಸಂಸ್ಥಾನದ ಹಿರಿಯ ವೆಂಕಟಪ್ಪ ನಾಯಕ ರಥ ನಿರ್ಮಿಸಿ ಕೊಟ್ಟಿದ್ದ ಎಂದು ಹೇಳಲಾಗುತ್ತದೆ. ಪ್ರತಿಮಾಶಾಸ್ತ್ರ, ಚಿತ್ರಕಲೆ, ಜ್ಯಾಮಿತಿಕ ಅಂಶ, ಪೌರಾಣಿಕ ಸನ್ನಿವೇಶಗಳ ಹಿನ್ನೆಲೆ ತಿಳಿದ ಶಿಲ್ಪಿಗಳಿಂದ ಈ ರಥದ ರಚನೆಯಾಗಿದೆ. ವಿವಿಧ ಶಿಲ್ಪಶಾಸ್ತ್ರ ಗ್ರಂಥಗಳಲ್ಲಿ ಹೇಳಿರುವ ವಿಧಿ-ವಿಧಾನ, ನಿಯಮ ಅನುಸರಿಸಿ ರಚಿಸಿದ್ದಾಗಿದೆ.

ಶಿಥಿಲಾವಸ್ಥೆಯ ಹಂತಕ್ಕೆ ತಲುಪಿದೆ
ಬ್ರಹ್ಮರಥದಲ್ಲಿ ಪ್ರಪಂಚದ ಎಲ್ಲ ರೀತಿಯ ಜೀವರಾಶಿಗಳ ಚಿತ್ರಗಳ ಕೆತ್ತನೆಯಿದೆ. ಈ ಕೆತ್ತನೆಗಳು ಕಾಲಾಂತರದಲ್ಲಿ ನಶಿಸಿ ಹೋಗಿದ್ದು, ಬಹುತೇಕ ಚಿತ್ರಗಳು ಈಗ ಗೋಚರಿಸುತ್ತಿಲ್ಲ. ರಥದ ಮರದ ಚಕ್ರಗಳು ಇತರೆ ಬಿಡಿಭಾಗಗಳು ಬಿರುಕು ಪಡೆದು ಶಿಥಿಲಾವಸ್ಥೆಯ ಹಂತಕ್ಕೆ ತಲುಪಿದೆ.

ಇತಿಹಾಸ ಸೃಷ್ಟಿಸಲು ತೀರ್ಮಾನ
ಕಳೆದ 400 ವರ್ಷಗಳ ಐತಿಹಾಸಿಕ ಹಿನ್ನೆಲೆ ಹೊಂದಿದ ಬ್ರಹ್ಮರಥ ಶಿಥಿಲಾವಸ್ಥೆಗೆ ತಲುಪಿದ್ದು, ಇದರ ಬದಲಿಗೆ 1.99 ಕೋಟಿ ರೂಪಾಯಿ ವೆಚ್ಚದಲ್ಲಿ ನೂತನ ಬ್ರಹ್ಮರಥ ನಿರ್ಮಾಣಗೊಳ್ಳುತ್ತಿದೆ. ಈ ಬಾರಿ ಜಾತ್ರೆಯಲ್ಲಿ ಹಳೆಯ ತೇರನ್ನೇ ಎಳೆಯಲಾಗುತ್ತಿದೆ. ಐತಿಹಾಸಿಕ ರಥವನ್ನು ಕೊನೆಯ ಬಾರಿಗೆ ಎಳೆಯುವ ಮೂಲಕ ಇತಿಹಾಸವೊಂದು ಸೃಷ್ಟಿಸಲು ಭಕ್ತರು ತೀರ್ಮಾನಿಸಿದ್ದಾರೆ.

ಸ್ಯಂದನ ರಥ
ಆರು ಚಕ್ರ ಹೊಂದಿರುವ ಬ್ರಹ್ಮರಥವನ್ನು ಶಾಸ್ತ್ರೀಯವಾಗಿ ಸ್ಯಂದನ ರಥವೆನ್ನುವರು. ಅಡಿಪಾಯ, ಅಡಿಸ್ಥಾನ, ಮಂಟಪ, ಗೋಪುರ, ಶಿಖರ ಇವು ರಥದ ಪ್ರಮುಖ ಭಾಗಗಳು. ಅಡಿಪಾಯದಿಂದ ಮಂಟಪದವರೆಗಿನ ಒಟ್ಟು ಭಾಗ ಸ್ಥಿರ ರಥ. ಚಕ್ರದ ಎತ್ತರ 8 ಅಡಿ 6 ಅಂಗುಲ. ಒಂದು ಚಕ್ರದಲ್ಲಿ 5 ಬೃಹತ್ ಮರದ ತುಂಡುಗಳು ಇವೆ. ರಥದ ಚಕ್ರಗಳ ಅಗಲ 21 ಅಂಗುಲ. ರಥದ ಚಕ್ರದ ದಪ್ಪ 10 ಅಂಗುಲ ಎಂಬ ಲೆಕ್ಕವಿದೆ.

ನೂತನ ಬ್ರಹ್ಮರಥ ಸಿದ್ಧ
ದೇಗುಲದ ಪ್ರಶ್ನೆ ವೇಳೆ ಈಗಿನ ಬ್ರಹ್ಮರಥ ಶಿಥಿಲಾವಸ್ಥೆಗೆ ತಲುಪುತ್ತಿರುವುದರಿಂದ ನೂತನ ರಥ ಹೊಂದುವ ಕುರಿತು ಕಂಡುಬಂದಿತ್ತು. ಅದರಂತೆ ಬಿಡದಿ ರಿಯಾಲಿಟಿ ವೆಂಚರ್ ಫೋರ್ ಗ್ರೂಪ್ ಸಂಸ್ಥೆಯ ಪಾಲುದಾರರಾದ ಮುತ್ತಪ್ಪ ರೈ ಮತ್ತು ಅಜಿತ್ ರೈ ನೂತನ ಬ್ರಹ್ಮರಥ ನಿರ್ಮಿಸಿಕೊಡುತ್ತಿದ್ದಾರೆ. ಕೋಟೇಶ್ವರದ ರಾಷ್ಟ್ರ ಪ್ರಶಸ್ತಿ ವಿಜೇತ ಶಿಲ್ಪಿ ಲಕ್ಷ್ಮೀನಾರಾಯಣ ಆಚಾರ್ಯ ಬ್ರಹ್ಮರಥ ನಿರ್ಮಾಣ ಕಾರ್ಯದಲ್ಲಿ ನಿರತರಾಗಿದ್ದಾರೆ. ಮುಂದಿನ ಮಾರ್ಚ್ ತಿಂಗಳಲ್ಲಿ ನೂತನ ಬ್ರಹ್ಮರಥ ಸಿದ್ಧಗೊಂಡು ದೇಗುಲಕ್ಕೆ ಹಸ್ತಾಂತರಗೊಳ್ಳಲಿದೆ.
-
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ












Click it and Unblock the Notifications