ಮಂಗಳೂರು: ಭಿಕ್ಷೆ ಬೇಡಿದ ಹಣದಿಂದ ಅನ್ನದಾನಕ್ಕೆ ಲಕ್ಷಾಂತರ ರೂ. ದೇಣಿಗೆ ನೀಡಿದ ವೃದ್ಧೆ!
ಮಂಗಳೂರು, ಏಪ್ರಿಲ್ 23: ನಾನು, ನನ್ನ ಕುಟುಂಬ ಅಂತಾ ಸ್ವಾರ್ಥ ಜೀವನ ನಡೆಸುವ ಈ ಕಾಲಘಟ್ಟದಲ್ಲಿ ಮಂಗಳೂರಿನ ಇಳಿವಯಸ್ಸಿನ ವೃದ್ಧೆ ತಾನು ಭಿಕ್ಷೆ ಬೇಡಿ ಸಂಗ್ರಹಿಸಿದ ಒಂದು ಲಕ್ಷ ರೂಪಾಯಿ ಹಣವನ್ನು ದೇವಸ್ಥಾನದ ಅನ್ನದಾನಕ್ಕೆ ನೀಡಿ ಮಾದರಿಯಾಗಿದ್ದಾರೆ.
80ರ ಹರೆಯದ ಇಳಿವಯಸ್ಸಿನ ಅಶ್ವತ್ಥಮ್ಮ ಸಮಾಜದಿಂದ ಬಂದ ಹಣವನ್ನು ಸಮಾಜಕ್ಕೇ ನೀಡಿ ಗಮನ ಸೆಳೆದಿದ್ದಾರೆ. ಕಳೆದ ಹಲವಾರು ವರ್ಷಗಳಿಂದ ಮಂಗಳೂರಿನ ಪ್ರಸಿದ್ಧ ಪೊಳಲಿ ರಾಜರಾಜೇಶ್ವರಿ ದೇವಸ್ಥಾನದ ಮುಂಭಾಗ ಭಿಕ್ಷೆ ಬೇಡುತ್ತಿರುವ 80ರ ಹರೆಯ ಅಶ್ವತ್ಥಮ್ಮ ತಾನು ಭಿಕ್ಷೆ ಬೇಡಿ ಬಂದ ಹಣದಲ್ಲಿ ಒಂದು ಲಕ್ಷ ರೂಪಾಯಿಯನ್ನು ಪೊಳಲಿ ದೇವಸ್ಥಾನದ ಅನ್ನದಾನಕ್ಕೆ ನೀಡಿದ್ದಾರೆ.
ಮೂಲತಃ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಗಂಗೊಳ್ಳಿ ಸಮೀಪದ ಕಂಚಿಗೋಡು ನಿವಾಸಿಯಾಗಿರುವ ಅಶ್ವತ್ಥಮ್ಮರ ಪತಿ 18 ವರ್ಷಗಳ ಹಿಂದೆ ಮೃತರಾಗಿದ್ದಾರೆ. ಇವರ ಮಕ್ಕಳೂ ಇಹಲೋಕ ತ್ಯಜಿಸಿದ್ದಾರೆ. ಧಾರ್ಮಿಕ ಪ್ರಜ್ಞೆ ಹೊಂದಿರುವ ಅಶ್ವತ್ಥಮ್ಮ ಆ ಬಳಿಕ ದೇವಸ್ಥಾನದ ಮುಂದೆ ಭಿಕ್ಷಾಟನೆ ಮಾಡಲು ನಿರ್ಧಾರ ಮಾಡಿದ್ದಾರೆ. ಆದರೆ ಭಿಕ್ಷೆ ಬೇಡಿದ ಹಣವನ್ನು ಎಳ್ಳಷ್ಟೂ ಸ್ವಂತಕ್ಕೆ ಉಪಯೋಗಿಸದ ಅಶ್ವತ್ಥಮ್ಮ ಈವರೆಗೆ ಆರು ಲಕ್ಷ ರೂಪಾಯಿಗೂ ಅಧಿಕ ಹಣವನ್ನು ದೇವಸ್ಥಾನ, ಆಶ್ರಮಗಳಿಗೆ ದೇಣಿಗೆಯಾಗಿ ನೀಡಿದ್ದಾರೆ.

ವರ್ಷದ ಬಹುತೇಕ ಸಮಯ ಅಯ್ಯಪ್ಪ ಮಾಲಾಧಾರಿಯಾಗಿಯೇ ಇರುವ ಅಶ್ವತ್ಥಮ್ಮ, ಅಯ್ಯಪ್ಪ ಸ್ವಾಮಿಯ ಪರಮ ಭಕ್ತೆಯಾಗಿದ್ದಾರೆ. ಅಯ್ಯಪ್ಪ ಸ್ವಾಮಿಯ ವೃತಾಚರಣೆಯನ್ನು ಶ್ರದ್ಧಾ- ಭಕ್ತಿಯಿಂದ ಮಾಡುತ್ತಾರೆ. ಅಯ್ಯಪ್ಪನ ವ್ರತ ನಿಯಮ ಸಾರುವ ಅನ್ನದಾನದ ಬಗ್ಗೆ ವಿಶೇಷ ಭಾವನೆ ಹೊಂದಿದ್ದಾರೆ. ಶಬರಿಮಲೆಯ ಪಂಪೆ, ಪಂದಳ, ಎರಿಮಲೆಯಲ್ಲೂ ಸುಮಾರು ಒಂದು ಲಕ್ಷಕ್ಕೂ ಅಧಿಕ ಭಕ್ತರಿಗೆ ಅನ್ನಪೂರ್ಣೆಯಾಗಿ ಅಶ್ವತ್ಥಮ್ಮ ಅನ್ನದಾನವನ್ನು ಮಾಡಿದ್ದಾರೆ.
ಅಶ್ವತ್ಥಮ್ಮ ಪೊಳಲಿ ರಾಜರಾಜೇಶ್ವರಿ ಕ್ಷೇತ್ರದಲ್ಲಿ ಜಾತ್ರೋತ್ಸವ ಸಂದರ್ಭದಲ್ಲಿ ಸೇರಿದಂತೆ ಕ್ಷೇತ್ರದಲ್ಲಿ ತನಗೆ ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ಕೂಡಿಟ್ಟು ಅನ್ನದಾನದ ನಿಧಿಗೆ ಸಮರ್ಪಣೆ ಮಾಡಿದ್ದಾರೆ. ಬೆಳಗ್ಗೆಯಿಂದ ಸಂಜೆಯವರೆಗೆ ಭಿಕ್ಷೆ ಬೇಡಿ ಸಂಗ್ರಹವಾದ ಹಣವನ್ನು ನಿತ್ಯ ಪಿಗ್ಮಿಗೆ ಕಟ್ಟಿ ಲಕ್ಷ ರೂಪಾಯಿ ಜಮೆಯಾದ ಬಳಿಕ ಆ ಹಣವನ್ನು ಅಶ್ವತ್ಥಮ್ಮ ದೇವಸ್ಥಾನದ ಅನ್ನದಾನಕ್ಕೆ ನೀಡುತ್ತಾರೆ.

ಅಶ್ವಥಮ್ಮ ಈವರೆಗೆ ಆರು ಲಕ್ಷ ರೂಪಾಯಿಗೂ ಅಧಿಕ ಹಣವನ್ನು ದೇವಸ್ಥಾನಗಳಿಗೆ ದೇಣಿಗೆಯಾಗಿ ನೀಡಿದ್ದಾರೆ. ಸಾಲಿಗ್ರಾಮ ಶ್ರೀ ಗುರುನರಸಿಂಹ ದೇವಸ್ಥಾನದ ಅನ್ನದಾನಕ್ಕೆ ಒಂದು ಲಕ್ಷ ರೂಪಾಯಿ, ಪೊಳಲಿ ಅಖಿಲೇಶ್ವರ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳಿಗೆ ಒಂದೂವರೆ ಲಕ್ಷ ರೂಪಾಯಿ ದೇಣಿಗೆ, ಗಂಗೊಳ್ಳಿ ದೇವಸ್ಥಾನದಲ್ಲಿ ಅನ್ನದಾನ ಸೇರಿದಂತೆ ನಾನಾ ದೇಗುಲ ಹಾಗೂ ಆಶ್ರಮಗಳಿಗೆ ಅಶ್ವತ್ಥಮ್ಮ ದೇಣಿಗೆ ನೀಡಿದ್ದಾರೆ.
ತನ್ನ ಅನ್ನದಾನದ ಸೇವೆಯ ಬಗ್ಗೆ ಮಾತನಾಡಿದ ಅಶ್ವತ್ಥಮ್ಮ, ಸಮಾಜ ನೀಡಿದ ಹಣವನ್ನು ಸಮಾಜಕ್ಕೆ ಅರ್ಪಿಸಿದ್ದೇನೆ. ಈವರೆಗೆ ದಾನ ನೀಡಿದ್ದನ್ನು ಲೆಕ್ಕ ಇಟ್ಟಿಲ್ಲ. ದೇವರು ಎಲ್ಲರನ್ನೂ ಚೆನ್ನಾಗಿಡಲಿ. ಹಸಿದ ಹೊಟ್ಟೆಯಲ್ಲಿ ಯಾರೂ ಇರಬಾರದೆಂಬುವುದೇ ನನ್ನ ಉದ್ದೇಶ ಎಂದು ಅಶ್ವತ್ಥಮ್ಮ ಹೇಳಿದ್ದಾರೆ.
Recommended Video
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್












Click it and Unblock the Notifications