ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಾಣಿಜ್ಯ ವಿಭಾಗದಲ್ಲಿ ದಕ್ಷಿಣ ಕನ್ನಡದ ಇಬ್ಬರು ರಾಜ್ಯಕ್ಕೆ ಪ್ರಥಮ

|
Google Oneindia Kannada News

ಮಂಗಳೂರು, ಏಪ್ರಿಲ್ 15:ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕಿ ಶಿಖಾ ಅವರು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಿದ್ದಾರೆ. ಈ ಬಾರಿಯೂ ಹುಡುಗಿಯರೇ ಮೇಲುಗೈ ಸಾಧಿಸಿದ್ದು, ಫಲಿತಾಂಶದ ಪ್ರಕಾರ ಕರಾವಳಿ ಜಿಲ್ಲೆಗಳಾದ ಉಡುಪಿಗೆ ಪ್ರಥಮ ಸ್ಥಾನ ಮತ್ತು ದಕ್ಷಿಣ ಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದುಕೊಂಡಿದೆ.

ಈ ಬಾರಿ ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಾಣಿಜ್ಯ ವಿಭಾಗದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ (596) ಹಾಗೂ ವಿಟ್ಲದ ಅಳಿಕೆ ಶ್ರೀ ಸತ್ಯ ಸಾಯಿ ಲೋಕಸೇವಾ ಪಿಯು ಕಾಲೇಜಿನ ಶ್ರೀಕೃಷ್ಣ ಶರ್ಮ ಕೆ. ರಾಜ್ಯಕ್ಕೆ ಮೊದಲ ಸ್ಥಾನ ಪಡೆದುಕೊಂಡಿದ್ದಾರೆ.

Olvita Ancil DSouza and Srikrishna Sharma Topper in Commerce

 ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ, ಉಡುಪಿಗೆ ಪ್ರಥಮ ಸ್ಥಾನ

ಅಂತೆಯೇ ವಾಣಿಜ್ಯ ವಿಭಾಗದ ಮಂಗಳೂರಿನ ಕೊಡಿಯಾಲ್ ಬೈಲಿನ ಕೆನರಾ ಕಾಲೇಜಿನ ಶ್ರೀಯಾ ಶೆಣೈ 595 ಅಂಕಗಳೊಂದಿಗೆ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಇದೀಗ ಒಲ್ವಿಟಾ ಆಯನ್ಸಿಲ್ಲಾ ಡಿಸೋಜಾ ಅವರನ್ನು ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ ಮೋಹನ್ ಆಳ್ವಾ ಅಭಿನಂದಿಸಿದ್ದಾರೆ.

ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ

 ದ್ವಿತೀಯ ಪಿಯುಸಿ ಫಲಿತಾಂಶ: ಕೃತಿ, ವರ್ಷಿಣಿ, ಸ್ವಾತಿ ಟಾಪರ್ಸ್ ದ್ವಿತೀಯ ಪಿಯುಸಿ ಫಲಿತಾಂಶ: ಕೃತಿ, ವರ್ಷಿಣಿ, ಸ್ವಾತಿ ಟಾಪರ್ಸ್

ಈ ಸಂದರ್ಭದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಒಲ್ವಿಟಾ ಆ್ಯನ್ಸಿಲ್ಲಾ ಡಿಸೋಜಾ, ವಾಣಿಜ್ಯ ವಿಭಾಗದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿರುವುದಕ್ಕೆ ಹರ್ಷ ವ್ಯಕ್ತಪಡಿಸಿದ್ದು ಮುಂದೆ ಸಿಎ ಓದುವುದಾಗಿ ತಿಳಿಸಿದ್ದಾರೆ. ಈ ಫಲಿತಾಂಶ ನಿರೀಕ್ಷಿಸಿರಲಿಲ್ಲ ಎಂದು ಹೇಳಿದ ಒಲ್ವಿಟಾ ಡಿಸೋಜಾ, ಪರೀಕ್ಷೆಗಾಗಿ ತುಂಬಾ ಕಷ್ಟಪಟ್ಟು ಓದುವ ಬದಲು ಪ್ಲಾನ್ ಮಾಡಿ ಯೋಜನೆ ಪ್ರಕಾರವಾಗಿ ಓದಿರುವುದು ಫಲ ನೀಡಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

English summary
Lok Sabha Elections 2019:Olvita Ancil D'Souza of Moodbidare Alvas student bagged 596 out 600 in commerce section. Srikrishna Sharma of Sri Sthya Sayi college Alake are toppers in commerce in the state.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X