ಮಂಗಳೂರಿನಲ್ಲಿ ಒಲಿಂಪಿಕ್ಸ್ ಮಾದರಿಯ ಈಜುಕೊಳ ಲೋಕಾರ್ಪಣೆ
ಮಂಗಳೂರು, ಡಿಸೆಂಬರ್. 20 : ಒಲಿಂಪಿಕ್ಸ್ ಮಾದರಿಯಲ್ಲಿ ಸುಮಾರು 8 ಕೋಟಿ ರೂ ವೆಚ್ಚದಲ್ಲಿ ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ನಿರ್ಮಾಣವಾಗಿರುವ ನೂತನ ಈಜುಕೊಳ ಸೋಮವಾರ ಲೋಕಾರ್ಪಣೆಗೊಂಡಿದೆ.
ಸುಮಾರು 8 ಕೋಟಿ ರೂ. ವೆಚ್ಚದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟಕ್ಕನುಗುಣವಾಗಿ 25 ಮೀ. ಅಗಲ, 50 ಮೀ ಉದ್ದ ವಿಸ್ತೀರ್ಣದಲ್ಲಿ ಈಜುಕೊಳ ನಿರ್ಮಿಸಲಾಗಿದೆ. 8 ಲೇನ್ ಗಳನ್ನು ಹೊಂದಿರುವ ಈಜುಕೊಳದಲ್ಲಿ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದ ಈಜು ಸ್ಪರ್ಧೆಗಳನ್ನು ಕೈಗೊಳ್ಳಬಹುದಾಗಿದೆ.[ಮಂಗಳೂರು ಮುಸ್ಲಿಂ ಮಹಿಳಾ ಸಮಾವೇಶದಲ್ಲಿ ಮೋದಿ ವಿರುದ್ಧ ಆಕ್ರೋಶ]
ಓಝೋನ್ ಶುದ್ಧೀಕರಣ ವ್ಯವಸ್ಥೆ, ಗ್ಯಾಲರಿ, ವಿಶ್ರಾಂತಿ ಕೊಠಡಿ ಹಾಗೂ ವಾಹನ ನಿಲುಗಡೆ ಪ್ರದೇಶಗಳನ್ನು ಹೊಂದಿದೆ. ಪಕ್ಕದಲ್ಲೇ ಮಕ್ಕಳ ಈಜುಕೊಳ ಸಹಿತ ಪರಿಪೂರ್ಣವಾಗಿ ಮೂಲ ಸೌಕರ್ಯಗಳನ್ನು ಅಳವಡಿಸಲಾಗಿದೆ.
ಈಜುಕೊಳದಲ್ಲಿ ಮುಂಜಾನೆ 6 ರಿಂದ ರಾತ್ರಿ 8 ರವರೆಗೆ ಅವಕಾಶ ನೀಡಲಿದ್ದು, ಮಧ್ಯಾಹ್ನ 1 ರಿಂದ 3ರವರೆಗೆ ವಿರಾಮದ ಅವಧಿ ಕಲ್ಪಿಸಿದೆ. ಮಕ್ಕಳ ಸುರಕ್ಷೆಗಾಗಿ ಪೂರ್ಣಕಾಲಿಕ ಲೈಫ್ ಗಾರ್ಡ್ಗಳನ್ನು ನೇಮಿಸಿಕೊಳ್ಳಲಾಗಿದೆ.
ಯಾವ ಅಹಿತಕರ ಘಟನೆಯೂ ನಡೆಯದಂತೆ ಎಲ್ಲಾ ರೀತಿಯ ಭದ್ರತಾ ಕ್ರಮಗಳನ್ನು ಅಳವಡಿಸಿಕೊಳ್ಳಲಾಗಿದೆ. ಪ್ರವೇಶ ಶುಲ್ಕ ಇನ್ನಷ್ಟೇ ನಿಗದಿಪಡಿಸಬೇಕಿದೆ. ಮಕ್ಕಳ ಈಜುಕೊಳ ಸಹಿತ ಒಟ್ಟು ವೆಚ್ಚ 8.25 ಕೋಟಿ ರೂ.ವೆಚ್ಚ ತಗುಲಿದೆ.

ವೆಚ್ಚ
ನಾವು ಆರಂಭದಲ್ಲಿ ಅಂದಾಜು 4.5 ಕೋಟಿ ರೂ. ವೆಚ್ಚದಲ್ಲಿ ಕಾಮಗಾರಿ ಪೂರ್ಣಗೊಳ್ಳಬಹುದು ಎಂದು ಅಂದಾಜಿಸಿದ್ದೆವು. ಆದರೆ, ಇದೀಗ ಸುಮಾರು 7 ರಿಂದ 8 ಕೋಟಿ ರೂ. ವರೆಗೆ ವೆಚ್ಚವಾಗಿದೆ ಎಂದು ಕಾಲೇಜಿನ ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ರಿಚರ್ಡ್ ಗೋನ್ಸಾಲ್ವೆಸ್ ತಿಳಿಸಿದರು

20 ಲಕ್ಷ ಲೀಟರ್ ನೀರಿನ ಸಾಮರ್ಥ್ಯ
ಈಜುಕೊಳವನ್ನು ವ್ಯಾಕ್ಯೂಮ್ ಮೂಲಕ ಸ್ವಚ್ಛಗೊಳಿಸುವ ಮತ್ತು ನೀರನ್ನು ಓಝೋನ್' ಘಟಕದಲ್ಲಿ ಸಂಸ್ಕರಿಸುವ ವ್ಯವಸ್ಥೆ ಅಳವಡಿಸಿಕೊಳ್ಳಲಾಗಿದೆ. 20 ಲಕ್ಷ ಲೀಟರ್ ನೀರಿನ ಅಗತ್ಯವಿರುವ ಈ ಘಟಕದಲ್ಲಿ ಪ್ರತೀ ಬಾರಿ ಸಂಸ್ಕರಣೆ ವೇಳೆ 25 ಸಾವಿರ ಲೀಟರ್ ನೀರು ಪೋಲಾಗುತ್ತದೆ.

ನೀರು ಉಳಿತಾಯಕ್ಕೆ ತಾಂತ್ರಿಕ ಅಳವಡಿಕೆ
ಇಲ್ಲಿ ನೀರಿನ ಉಳಿತಾಯವಾಗುವಂತೆ ತಾಂತ್ರಿಕತೆಯನ್ನು ಅಳವಡಿಸಿಕೊಳ್ಳಲಾಗಿದೆ. ಆದರೆ, ಪಾಲಿಕೆಯ ಈಜುಕೊಳದಲ್ಲಿ ಪೂರ್ಣ ನೀರು ಚರಂಡಿ ಪಾಲಾಗುತ್ತಿದೆ ಎಂದು ಪ್ರಾಂಶುಪಾಲ ರೆ.ಫಾ. ಸ್ವೀಬರ್ಟ್ ಡಿ ಸಿಲ್ವಾ ತಿಳಿಸಿದ್ದಾರೆ.

ಹಲವು ಗಣ್ಯರು ಭಾಗಿ
ಉದ್ಘಾಟನಾ ಸಮಾರಂಭದಲ್ಲಿ ಸಚಿವ ಯು.ಟಿ.ಖಾದರ್, ಮಾಜಿ ಸಚಿವ ಅಭಯಚಂದ್ರ ಜೈನ್, ಶಾಸಕರಾದ ಕ್ಯಾ. ಗಣೇಶ್ ಕಾರ್ಣಿಕ್, ಜೆ.ಆರ್. ಲೋಬೊ, ಬಿಷಪ್ ಡಾ. ಹೆನ್ರಿ ಡಿ.ಸೋಜ, ಕಾರ್ಯಕ್ರಮ ಸಂಚಾಲಕ ಎನ್.ಜಿ.ಮೋಹನ್ ಮೊದಲಾದವರಿದ್ದರು
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications