ಮಳವೂರಿಯಲ್ಲಿ ಮಹಿಳೆಯ ಅತ್ಯಾಚಾರಕ್ಕೆ ಯತ್ನ:ಯುವಕನ ಬಂಧನ
ಮಂಗಳೂರು, ಫೆಬ್ರವರಿ 03: ಮರದಿಂದ ತೆಂಗಿನಕಾಯಿ ಕಿತ್ತುಕೊಡುವ ನೆಪದಲ್ಲಿ ಮಹಿಳೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಯುವಕನನ್ನು ಪೊಲೀಸರು ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ಮಳವೂರಿ ಎಂಬಲ್ಲಿ ಈ ಘಟನೆ ನಡೆದಿದ್ದು, ಯುವಕನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತನನ್ನು ಮಂಗಳೂರಿನ ಮರಕಡ ನಿವಾಸಿ ವೆಂಕಟೇಶ್ (28) ಎಂದು ಗುರುತಿಸಲಾಗಿದೆ. ಮುಂಜಾನೆ ಮನೆಯ ಅಂಗಳದಲ್ಲಿ ಸಂತ್ರಸ್ತ ಮಹಿಳೆ ಕೆಲಸದಲ್ಲಿ ನಿರತಳಾಗಿದ್ದ ಸಂದರ್ಭದಲ್ಲಿ ಅಲ್ಲಿಗೆ ಆಗಮಿಸಿದ ವೆಂಕಟೇಶ್, 'ನಾನು ತೆಂಗಿನಕಾಯಿ ತೆಗೆಯುವ ಕೆಲಸ ಮಾಡುತ್ತಿದ್ದು, ನಿಮ್ಮಲ್ಲಿರುವ ತೆಂಗಿನಕಾಯಿಗಳನ್ನು ತೆಗೆಯುತ್ತೇನೆ' ಎಂದು ಹೇಳಿ, ಮರವನ್ನು ಏರಿ ತೆಂಗಿನಕಾಯಿಗಳನ್ನು ತೆಗೆದಿದ್ದ.
ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಂಶುಪಾಲ ಅರೆಸ್ಟ್
ಬಳಿಕ ಮಹಿಳೆ ತೆಂಗಿನಕಾಯಿಗಳನ್ನು ಗೋಣಿಚೀಲದಲ್ಲಿ ಸಂಗ್ರಹಿಸಲು ಮುಂದಾದಾಗ ವೆಂಕಟೇಶ್ ಹಿಂದಿನಿಂದ ತಬ್ಬಿಕೊಂಡು ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
ವಕೀಲೆ ಮೇಲೆ ಸೆಕ್ಯೂರಿಟಿ ಗಾರ್ಡ್ನಿಂದ ಅತ್ಯಾಚಾರಕ್ಕೆ ಯತ್ನ
ಏಕಾಏಕಿ ಆಘಾತಕ್ಕೆ ಒಳಗಾದ ಮಹಿಳೆ ಜೋರಾಗಿ ಕಿರುಚಿದಾಗ ನೆರೆಮನೆಯವರು ಸ್ಥಳಕ್ಕೆ ಆಗಮಿಸಿದ್ದಾರೆ. ಈ ಸಂದರ್ಭದಲ್ಲಿ ವೆಂಕಟೇಶ್ ಅಲ್ಲಿಂದ ತಕ್ಷಣ ಪರಾರಿಯಾಗಿದ್ದಾನೆ ಎಂದು ಸಂತ್ರಸ್ತ ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.