ಶರತ್ ಮಡಿವಾಳ ಹತ್ಯೆ ಪ್ರಕರಣ, ಬಂಧಿತರ ಸಂಖ್ಯೆ 10ಕ್ಕೆ ಏರಿಕೆ

ಮಂಗಳೂರು, ಆಗಸ್ಟ್ 23: ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಬಿ.ಸಿ.ರೋಡ್ ನಲ್ಲಿ ನಡೆದ ಆರ್.ಎಸ್.ಎಸ್ ಕಾರ್ಯಕರ್ತ ಶರತ್ ಮಡಿವಾಳ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಜಬ್ಬಾರ್ ಎಂದು ಗುರುತಿಸಲಾಗಿದೆ.

ಬಂಧಿತ ಜಬ್ಬಾರ್ ನನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಲಯ ಜಬ್ಬಾರ್ ನನ್ನು 7 ದಿನಗಳ ಕಾಲ ಪೋಲೀಸ್ ಕಸ್ಟಡಿಗೆ ನೀಡಿದೆ. ಈ ಮೂಲಕ ಶರತ್ ಮಡಿವಾಳ ಕೊಲೆ ಪ್ರಕರಣದಲ್ಲಿ ಬಂಧಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ.

One more arrested in connection with Sharath Madival murder case

ಶರತ್ ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದ ಶರೀಫ್ ಇದೀಗ ಪೋಲೀಸ್ ವಶದಲ್ಲಿದ್ದು, ವಿಚಾರಣೆಯ ಬಳಿಕ ಇಂದು ಆತನನ್ನು ಪೋಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.

ಶರತ್ ಹತ್ಯೆ ಸಂಬಂಧಿಸಿದಂತೆ ದಕ್ಷಿಣಕನ್ನಡ ಜಿಲ್ಲಾ ಪೋಲೀಸರು ಈಗಾಗಲೇ 10 ಜನ ಆರೋಪಿಗಳನ್ನು ಬಂಧಿಸಿದ್ದು, ಇನ್ನೂ ಹಲವರಿಗಾಗಿ ಪೋಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ.

ಜುಲೈ 4 ರಂದು ರಾತ್ರಿ ಸುಮಾರು 9 ಗಂಟೆಯ ವೇಳೆಗೆ ಬಿ.ಸಿ.ರೋಡ್ ನಲ್ಲಿರುವ ತನ್ನ ಲಾಂಡ್ರಿಯ ಕೆಲಸ ಮುಗಿಸಿ ಹೊರಬರುತ್ತಿದ್ದ ಶರತ್ ಮಡಿವಾಳ ಅವರನ್ನು ಬೈಕಿನಲ್ಲಿ ಬಂದ ಮೂವರಿದ್ದ ತಂಡ ಮಾರಕಾಸ್ತ್ರಗಳಿಂದ ಕಡಿದು ಹತ್ಯೆ ಮಾಡಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+