ಕೆಫೆ ಕಾಫಿ ಡೇ ಮಾಲೀಕ ಸಿದ್ದಾರ್ಥ ಆತ್ಮಹತ್ಯೆಗೆ ವರ್ಷ; ಕಾರಣ ಇನ್ನೂ ನಿಗೂಢ...
ಮಂಗಳೂರು, ಜುಲೈ 29: ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ಅಳಿಯ, ಕೆಫೆ ಕಾಫಿ ಡೇ ಸಂಸ್ಥಾಪಕ ವಿ.ಜಿ. ಸಿದ್ದಾರ್ಥ ಅವರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಇಂದಿಗೆ ಒಂದು ವರ್ಷ. ಆದರೆ ವರ್ಷ ಉರುಳಿದರೂ ಅವರ ಆತ್ಮಹತ್ಯೆಯ ಕಾರಣ ಮಾತ್ರ ಇನ್ನೂ ಅಸ್ಪಷ್ಟವಾಗಿಯೇ ಉಳಿದಿದೆ.
ಕಳೆದ ವರ್ಷ ಜುಲೈ 29ರಂದು ಸಂಜೆ ಕಾರಿನಲ್ಲಿ ಹೊರಟಿದ್ದ ಸಿದ್ದಾರ್ಥ ಅವರು ಮಂಗಳೂರಿನ ಉಳ್ಳಾಲ ರಸ್ತೆಯ ನೇತ್ರಾವತಿ ಸೇತುವೆ ಬಳಿ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಸುದ್ದಿ ತಿಳಿಯುತ್ತಿದ್ದಂತೆ ನಿರಂತರ ಎರಡು ದಿನಗಳ ಕಾಲ ಅವರಿಗಾಗಿ ಸೇತುವೆ ಬಳಿ ತೀವ್ರ ಶೋಧ ಕಾರ್ಯ ಮುಂದುವರೆದಿತ್ತು. ಜುಲೈ 31ರಂದು ಹೊಯ್ಗೆ ಬಜಾರ್ ಸಮೀಪ ಅವರ ಮೃತದೇಹ ಪತ್ತೆಯಾಗಿತ್ತು. ಅವರ ಸಾವು, ಸಾವಿನ ಕಾರಣಗಳ ಕುರಿತು ಹಲವು ಅನುಮಾನಗಳು ವ್ಯಕ್ತವಾದವು...

ನೇತ್ರಾವತಿ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಿದ್ಧಾರ್ಥ್
ಸಿದ್ಧಾರ್ಥ್ ಅವರ ಮೃತದೇಹ ಪತ್ತೆಯಾಗುತ್ತಿದ್ದಂತೆ, ನಗರ ಸಹಾಯಕ ಪೊಲೀಸ್ ಆಯುಕ್ತರ ನೇತೃತ್ವದ ತನಿಖಾ ತಂಡವು ಈ ಪ್ರಕರಣವನ್ನು ವಿವಿಧ ಆಯಾಮಗಳಿಂದ ತನಿಖೆ ನಡೆಸಿ ಆಗಸ್ಟ್ 26, 2019ರಂದು ಅಂತಿಮ ವರದಿ ಸಲ್ಲಿಸಿತ್ತು. ಸಿದ್ದಾರ್ಥ ಅವರು ಉಸಿರುಗಟ್ಟಿ ಸಾವನ್ನಪ್ಪಿದ್ದು, ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿ ತಿಳಿಸಿತ್ತು. ಅದಾದ ನಂತರ ಅವರ ಆತ್ಮಹತ್ಯೆ ಹಿಂದಿನ ಕಾರಣಗಳ ಬಗ್ಗೆ ತನಿಖೆ ಶುರುವಾಗಿತ್ತು. ಆದರೆ ಇಂದಿಗೂ ಅವರ ಆತ್ಮಹತ್ಯೆ ಹಿಂದಿದ್ದ ಬಲವಾದ ಕಾರಣ ಪತ್ತೆಯಾಗಿಲ್ಲ.

ಐಟಿ ಇಲಾಖೆ ಕಿರುಕುಳದ ಆರೋಪ
ಕಾರಣಗಳನ್ನು ಕೆದಕುತ್ತಾ ಹೋದಂತೆ, ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳ ಒಡೆಯರಾಗಿದ್ದ ಸಿದ್ಧಾರ್ಥ ಅವರು ಇತ್ತೀಚೆಗೆ ಹಣಕಾಸಿನ ಮುಕ್ಕಟ್ಟಿಗೆ ಸಿಲುಕಿದ್ದರು. ಹಾಗಾಗಿ ಸಿದ್ಧಾರ್ಥ ಅವರು ಆತ್ಮಹತ್ಯೆಗೆ ಶರಣಾಗಿರಬಹುದು ಎಂಬ ಶಂಕೆಯನ್ನು ವ್ಯಕ್ತಪಡಿಸಲಾಗಿತ್ತು.
ನಂತರ ಐಟಿ ಇಲಾಖೆಯ ಕಿರುಕುಳವೇ ಸಿದ್ಧಾರ್ಥ ಅವರ ಆತ್ಮಹತ್ಯೆಗೆ ಕಾರಣ ಎನ್ನುವ ಮಾತುಗಳು, ಆರೋಪಗಳು ಕೇಳಿಬಂದವು. ಆದರೆ ಆದಾಯ ತೆರಿಗೆ ಇಲಾಖೆ ಅವರಿಗೆ ಕಿರುಕುಳ ನೀಡಲಾಗಿತ್ತು ಎಂಬ ಆರೋಪದ ವಿಚಾರವಾಗಿ ಐಟಿ ಇಲಾಖೆ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಇತ್ತೀಚೆಗೆ ವರದಿಯಾಗಿದೆ.

ಆತ್ಮಹತ್ಯೆಗೆ ಮುನ್ನ ಪತ್ರ ಬರೆದಿದ್ದ ಸಿದ್ಧಾರ್ಥ್
ಆತ್ಮಹತ್ಯೆ ಮಾಡಿಕೊಳ್ಳುವ ನಾಲ್ಕು ದಿನಗಳ ಮುಂಚೆ ಸಿದ್ಧಾರ್ಥ್ ಅವರು ಇ ಮೇಲ್ ಮೂಲಕ ಪತ್ರ ಬರೆದಿದ್ದರು. ಅದರಲ್ಲಿ, "ಎಲ್ಲಾ ತಪ್ಪುಗಳಿಗೆ ನಾನೊಬ್ಬನೇ ಹೊಣೆಗಾರ. ನನ್ನ ತಂಡವಾಗಲೀ, ನನ್ನ ಆಡಿಟರ್ಗಳಾಗಲೀ, ಹಿರಿಯ ವ್ಯವಸ್ಥಾಪಕರುಗಳಿಗಾಲೀ ಕೆಲವೊಂದು ಕೊಡು ಕೊಳ್ಳುವಿಕೆ ಬಗ್ಗೆ ಮಾಹಿತಿ ಇಲ್ಲ. ಕಾನೂನು ನನ್ನನ್ನು ಮಾತ್ರವೇ ಪ್ರಶ್ನಿಸಬೇಕು. ನನ್ನ ಕುಟುಂಬವನ್ನೂ ಈ ವ್ಯವಹಾರದಿಂದ ದೂರ ಇಟ್ಟಿದ್ದೆ' ಎಂದು ವಿವರಿಸಿದ್ದರು.
ಆನಂತರ ಅವರ ಹಣಕಾಸಿನ ವ್ಯವಹಾರದ ಬಗ್ಗೆಯೂ ಸಂಪೂರ್ಣ ಮಾಹಿತಿಯನ್ನು ಕಲೆ ಹಾಕಲಾಗಿತ್ತು. ವ್ಯವಹಾರದಲ್ಲಿ ಸೋಲು ಕಂಡು ಸಿದ್ಧಾರ್ಥ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾತುಗಳು ಕೇಳಿಬಂದವು.
ಉದ್ಯಮಿಯಾಗಿ ವಿಫಲನಾಗಿದ್ದೆ ಎಂದಿದ್ದ ಸಿದ್ಧಾರ್ಥ್
ಅದೆ ಪತ್ರದಲ್ಲಿ ತಮ್ಮ ಭಾವನೆಗಳನ್ನೂ ವ್ಯಕ್ತಪಡಿಸಿದ್ದರು ಸಿದ್ಧಾರ್ಥ್. "ನನ್ನ ಉದ್ದೇಶ ತಪ್ಪು ದಾರಿಗೆ ಎಳೆಯುವುದಾಗಲೀ ಅಥವಾ ವಂಚಿಸುವುದಾಗಲೀ ಆಗಿರಲಿಲ್ಲ. ಒಬ್ಬ ಉದ್ಯಮಿಯಾಗಿ ನಾನು ವಿಫಲನಾಗಿದ್ದೆ. ಇದು ನನ್ನ ಪ್ರಾಮಾಣಿಕ ತಪ್ಪೊಪ್ಪುವಿಕೆಯಾಗಿದ್ದು ನೀವೆಲ್ಲ ನನ್ನ ಕ್ಷಮಿಸುತ್ತೀರಿ ಎಂದು ಭಾವಿಸಿದ್ದೇನೆ,'' ಎಂದು ಹೇಳಿದ್ದರು.

ಸಿದ್ಧಾರ್ಥ ನಂತರ ವರ್ಷದಲ್ಲಿ ಎಂಟು ಮಂದಿ ಸಾವು
ಸಿದ್ಧಾರ್ಥ ಅವರು ಉಳ್ಳಾಲ ಸೇತುವೆ ಬಳಿ ಆತ್ಮಹತ್ಯೆ ಮಾಡಿಕೊಂಡ ನಂತರ ಒಟ್ಟು ಈ ವರ್ಷದಲ್ಲಿ ಎಂಟು ಮಂದಿ ಅದೇ ಜಾಗದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸೇತುವೆ ಸೂಸೈಟ್ ಸ್ಪಾಟ್ ಎನ್ನುವ ಕುಖ್ಯಾತಿಯನ್ನೂ ಗಳಿಸಿದೆ. ಇದೀಗ ಈ ಸೇತುವೆಗೆ ರಕ್ಷಣಾತ್ಮಕ ಬೇಲಿ ನಿರ್ಮಿಸಿ ಸಿಸಿ ಟಿವಿ ಅಳವಡಿಸಲಾಗಿದೆ.
-
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್












Click it and Unblock the Notifications