ರಾಜಕೀಯ ಶಿಕ್ಷಣಕ್ಕೆ ಸ್ಪೀಕರ್ ಖಾದರ್ ಚಿಂತನೆ: ರಾಜಕೀಯ ಆಸಕ್ತರಿಗೆ ಒಂದು ವರ್ಷದ ತರಬೇತಿ
ಮಂಗಳೂರು, ಜೂನ್ 29: ರಾಜಕೀಯದಲ್ಲಿ ಆಸಕ್ತರಿರುವ ಪದವೀಧರಿಗೆ ರಾಜಕೀಯ ತರಬೇತಿ ನೀಡುವ ಉದ್ದೇಶದಿಂದ ತರಬೇತಿ ಸಂಸ್ಥೆ ಸ್ಥಾಪಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಆಸಕ್ತ ಪದವೀಧರರಿಗೆ ತರಬೇತಿ ಪಡೆಯಲು ರಾಜ್ಯದಲ್ಲಿ ಪೊಲಿಟಿಕಲ್ ಸೆಂಟರ್ನ ಕೊರತೆಯಿದೆ. ಆದ್ದರಿಂದ ಈ ಕೊರತೆ ನೀಗಿಸಲು ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸುವ ಚಿಂತನೆಯಿದೆ. ಪದವೀಧರರಿಗೆ ಒಂದು ವರ್ಷದ ಕೋರ್ಸ್ ಇದಾಗಿದ್ದು, ಆರು ತಿಂಗಳು ಪ್ರ್ಯಾಕ್ಟಿಕಲ್ ತರಗತಿಯಿದ್ದರೆ, ಇನ್ನಾರು ತಿಂಗಳು ಇಂಟರ್ ಶಿಪ್ ಇರುತ್ತದೆ. ಅದಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಲು ಚರ್ಚೆ ನಡೆದಿದ್ದು, ಒಂದು ಹಂತಕ್ಕೆ ಬಂದಿದೆ. ಸರಕಾರದೊಂದಿಗೆ, ವಿಧಾನಸಭಾ ಸಭಾಧ್ಯಕ್ಷರೊಂದಿಗೆ ಮಾತನಾಡಿಕೊಂಡು ಈ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಪುಣೆಯಲ್ಲಿ ಇಂತಹ ರಾಜಕೀಯ ತರಬೇತಿ ನೀಡುವ ಸಂಸ್ಥೆಯೊಂದು ಇದೆ. ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಸಿಲೆಬಸ್ ಅನ್ನು ಮಾಡಲಾಗುತ್ತದೆ. ತರಬೇತಿ ಪಡೆದವರೆಲ್ಲಾ ರಾಜಕೀಯ ಪ್ರವೇಶಿಸಬೇಕು ಎಂದಲ್ಲ. ಅವರು ಎನ್ಜಿಒ ಕೂಡಾ ಆರಂಭಿಸಬಹುದು. ಸರಕಾರದ ಸಂಸ್ಥೆಗಳಲ್ಲೂ ಅವರಿಗೆ ಅವಕಾಶ ಇರಲಿದೆ. ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ ಎಂದು ಹೇಳಿದರು.
ಜುಲೈ ಮೂರರಂದು ಅಧಿವೇಶನ ಆರಂಭಗೊಳ್ಳಲಿದೆ. ಜುಲೈ 7 ರಂದು ನೂತನ ಸರ್ಕಾರದ ಮುಂಗಡ ಪತ್ರ ಮಂಡನೆಯಾಗಲಿದೆ. ಅಧಿವೇಶನದಲ್ಲಿ ಶಾಸಕರೆಲ್ಲರೂ ಭಾಗವಹಿಸಬೇಕು ಎಂದು ಯುಟಿ ಖಾದರ್ ಹೇಳಿದರು.
ಆಸಕ್ತಿ ಇರುವ ಡಿಗ್ರಿ ಕಲಿತರು ಈ ರಾಜಕೀಯ ತರಬೇತಿಗೆ ಬರಬಹುದು. ಒಂದು ವರ್ಷದ ತರಬೇತಿ ನಡೆಯಲಿದೆ. ಈಗಾಗಲೇ ಖಾಸಗಿ ವಿದ್ಯಾಸಂಸ್ಥೆಯಾದ ಸ್ಕೂಲ್ ಆಫ್ ಗಾರ್ಮೆಂಟ್ ಪೂಣೆಯಲ್ಲಿ ತರಬೇತಿ ನೀಡುತ್ತಿದೆ. ರಾಜಕೀಯದಲ್ಲಿ ಆಸಕ್ತಿ ಇರುವವರಿಗೆ ಅನುಭವ ಪಡೆದುಕೊಳ್ಳಬಹುದು. ಪ್ರಾಥಮಿಕ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ ಎಂದರು.
ಎಂಪಿ, ಎಂಎಲ್ಎ ಆಗೋಕೆ ಈ ತರಬೇತಿ ಅಲ್ಲ. ಸರ್ಕಾರಿ ಹುದ್ದೆ ಸೇರಿದಂತೆ ಜನಪ್ರತಿನಿಧಿಯಾಗೋಕೆ ತರಬೇತಿ ಪಡೆಯಬಹುದು. ರಾಜ್ಯದಲ್ಲಿ ಎಲ್ಲರಿಗೂ ಉಪಯುಕ್ತವಾಗುವ ಪ್ರದೇಶದಲ್ಲಿ ತರಬೇತಿ ಮಾಡಲಿದ್ದೇವೆ. ಅಧ್ಯಯನಕಾರರು, ರಾಜಕೀಯ ಮುತ್ಸದ್ಧಿಗಳಿಂದ ತರಬೇತಿ ನಡೆಯಲಿದೆ. ತರಬೇತಿ ಪಡೆದವರು ಉತ್ಸುಕರಾಗಿದ್ದರೆ ದೊಡ್ಡ ಮಟ್ಟ ದ ತರಬೇತಿಯನ್ನು ಹೈದರಾಬಾದ್ ದೆಹಲಿಯಲ್ಲಿ ನೀಡುತ್ತೇವೆ ಎಂದು ಯು.ಟಿ ಖಾದರ್ ಹೇಳಿದರು.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications