ರಾಜಕೀಯ ಶಿಕ್ಷಣಕ್ಕೆ ಸ್ಪೀಕರ್ ಖಾದರ್ ಚಿಂತನೆ: ರಾಜಕೀಯ ಆಸಕ್ತರಿಗೆ ಒಂದು ವರ್ಷದ ತರಬೇತಿ
ಮಂಗಳೂರು, ಜೂನ್ 29: ರಾಜಕೀಯದಲ್ಲಿ ಆಸಕ್ತರಿರುವ ಪದವೀಧರಿಗೆ ರಾಜಕೀಯ ತರಬೇತಿ ನೀಡುವ ಉದ್ದೇಶದಿಂದ ತರಬೇತಿ ಸಂಸ್ಥೆ ಸ್ಥಾಪಿಸುವ ಚಿಂತನೆ ಸರ್ಕಾರದ ಮುಂದಿದೆ ಎಂದು ವಿಧಾನಸಭೆಯ ಸ್ಪೀಕರ್ ಯು.ಟಿ.ಖಾದರ್ ಹೇಳಿದರು.
ಮಂಗಳೂರಿನಲ್ಲಿ ಮಾತನಾಡಿದ ಅವರು, ರಾಜಕೀಯದ ಬಗ್ಗೆ ಆಸಕ್ತ ಪದವೀಧರರಿಗೆ ತರಬೇತಿ ಪಡೆಯಲು ರಾಜ್ಯದಲ್ಲಿ ಪೊಲಿಟಿಕಲ್ ಸೆಂಟರ್ನ ಕೊರತೆಯಿದೆ. ಆದ್ದರಿಂದ ಈ ಕೊರತೆ ನೀಗಿಸಲು ತರಬೇತಿ ಸಂಸ್ಥೆಯೊಂದನ್ನು ಸ್ಥಾಪಿಸುವ ಚಿಂತನೆಯಿದೆ. ಪದವೀಧರರಿಗೆ ಒಂದು ವರ್ಷದ ಕೋರ್ಸ್ ಇದಾಗಿದ್ದು, ಆರು ತಿಂಗಳು ಪ್ರ್ಯಾಕ್ಟಿಕಲ್ ತರಗತಿಯಿದ್ದರೆ, ಇನ್ನಾರು ತಿಂಗಳು ಇಂಟರ್ ಶಿಪ್ ಇರುತ್ತದೆ. ಅದಕ್ಕೆ ರೂಪುರೇಷೆಗಳನ್ನು ಸಿದ್ಧಪಡಿಸಲು ಚರ್ಚೆ ನಡೆದಿದ್ದು, ಒಂದು ಹಂತಕ್ಕೆ ಬಂದಿದೆ. ಸರಕಾರದೊಂದಿಗೆ, ವಿಧಾನಸಭಾ ಸಭಾಧ್ಯಕ್ಷರೊಂದಿಗೆ ಮಾತನಾಡಿಕೊಂಡು ಈ ತರಬೇತಿ ಸಂಸ್ಥೆಯನ್ನು ಸ್ಥಾಪಿಸಲಾಗುತ್ತದೆ ಎಂದು ಹೇಳಿದ್ದಾರೆ.

ದೇಶದ ಪುಣೆಯಲ್ಲಿ ಇಂತಹ ರಾಜಕೀಯ ತರಬೇತಿ ನೀಡುವ ಸಂಸ್ಥೆಯೊಂದು ಇದೆ. ಅವರೊಂದಿಗೆ ಈ ಬಗ್ಗೆ ಚರ್ಚೆ ನಡೆಸಿ ಸಿಲೆಬಸ್ ಅನ್ನು ಮಾಡಲಾಗುತ್ತದೆ. ತರಬೇತಿ ಪಡೆದವರೆಲ್ಲಾ ರಾಜಕೀಯ ಪ್ರವೇಶಿಸಬೇಕು ಎಂದಲ್ಲ. ಅವರು ಎನ್ಜಿಒ ಕೂಡಾ ಆರಂಭಿಸಬಹುದು. ಸರಕಾರದ ಸಂಸ್ಥೆಗಳಲ್ಲೂ ಅವರಿಗೆ ಅವಕಾಶ ಇರಲಿದೆ. ತಾಲೂಕು ಪಂಚಾಯಿತಿ, ಗ್ರಾಮ ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಸ್ಪರ್ಧಿಸಲು ಅವಕಾಶವಿದೆ ಎಂದು ಹೇಳಿದರು.
ಜುಲೈ ಮೂರರಂದು ಅಧಿವೇಶನ ಆರಂಭಗೊಳ್ಳಲಿದೆ. ಜುಲೈ 7 ರಂದು ನೂತನ ಸರ್ಕಾರದ ಮುಂಗಡ ಪತ್ರ ಮಂಡನೆಯಾಗಲಿದೆ. ಅಧಿವೇಶನದಲ್ಲಿ ಶಾಸಕರೆಲ್ಲರೂ ಭಾಗವಹಿಸಬೇಕು ಎಂದು ಯುಟಿ ಖಾದರ್ ಹೇಳಿದರು.
ಆಸಕ್ತಿ ಇರುವ ಡಿಗ್ರಿ ಕಲಿತರು ಈ ರಾಜಕೀಯ ತರಬೇತಿಗೆ ಬರಬಹುದು. ಒಂದು ವರ್ಷದ ತರಬೇತಿ ನಡೆಯಲಿದೆ. ಈಗಾಗಲೇ ಖಾಸಗಿ ವಿದ್ಯಾಸಂಸ್ಥೆಯಾದ ಸ್ಕೂಲ್ ಆಫ್ ಗಾರ್ಮೆಂಟ್ ಪೂಣೆಯಲ್ಲಿ ತರಬೇತಿ ನೀಡುತ್ತಿದೆ. ರಾಜಕೀಯದಲ್ಲಿ ಆಸಕ್ತಿ ಇರುವವರಿಗೆ ಅನುಭವ ಪಡೆದುಕೊಳ್ಳಬಹುದು. ಪ್ರಾಥಮಿಕ ಹಂತದಲ್ಲಿ ಈ ಬಗ್ಗೆ ಚರ್ಚೆಯಾಗುತ್ತಿದೆ ಎಂದರು.
ಎಂಪಿ, ಎಂಎಲ್ಎ ಆಗೋಕೆ ಈ ತರಬೇತಿ ಅಲ್ಲ. ಸರ್ಕಾರಿ ಹುದ್ದೆ ಸೇರಿದಂತೆ ಜನಪ್ರತಿನಿಧಿಯಾಗೋಕೆ ತರಬೇತಿ ಪಡೆಯಬಹುದು. ರಾಜ್ಯದಲ್ಲಿ ಎಲ್ಲರಿಗೂ ಉಪಯುಕ್ತವಾಗುವ ಪ್ರದೇಶದಲ್ಲಿ ತರಬೇತಿ ಮಾಡಲಿದ್ದೇವೆ. ಅಧ್ಯಯನಕಾರರು, ರಾಜಕೀಯ ಮುತ್ಸದ್ಧಿಗಳಿಂದ ತರಬೇತಿ ನಡೆಯಲಿದೆ. ತರಬೇತಿ ಪಡೆದವರು ಉತ್ಸುಕರಾಗಿದ್ದರೆ ದೊಡ್ಡ ಮಟ್ಟ ದ ತರಬೇತಿಯನ್ನು ಹೈದರಾಬಾದ್ ದೆಹಲಿಯಲ್ಲಿ ನೀಡುತ್ತೇವೆ ಎಂದು ಯು.ಟಿ ಖಾದರ್ ಹೇಳಿದರು.
-
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
Karnataka Weather: ಕರ್ನಾಟಕದಲ್ಲಿ ಹೆಚ್ಚಿದ ಬಿಸಿಲ ಧಗೆ: ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ ದಾಖಲು, ಬೀದರ್ನಲ್ಲಿ ಚಳಿ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Expenses: ಬೆಂಗಳೂರು ಎಷ್ಟು ದುಬಾರಿ, ಅಮೆಜಾನ್ ಉದ್ಯೋಗಿ ಹಂಚಿಕೊಂಡ ವಾರಾಂತ್ಯದ ವೆಚ್ಚದ ವಿಡಿಯೋ ವೈರಲ್ -
Gold Rate: ಸತತ ಇಳಿಕೆಯ ನಂತರ ಚಿನ್ನದ ಬೆಲೆ ಮತ್ತೆ ಏರಿಕೆ: ಬೆಂಗಳೂರಿನಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ವಿವರ ಇಲ್ಲಿದೆ ನೋಡಿ -
Vijay Divorce: ನನ್ನ ಸಮಸ್ಯೆಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳಬೇಡಿ: ಡಿವೋರ್ಸ್ ಬಗ್ಗೆ ಕೊನೆಗೂ ಮೌನ ಮುರಿದ ನಟ ದಳಪತಿ ವಿಜಯ್ -
Horoscope March 8: ಈ ರಾಶಿಯವರಿಗೆ ಉದ್ಯೋಗದಲ್ಲಿ ಒಳಿತು, ಹೂಡಿಕೆಗಳಿಂದ ಲಾಭ, ದಿನ ಭವಿಷ್ಯ -
Kamal Haasan: ನಿಮ್ಮ ಕೆಲಸ ಎಷ್ಟಿದೆಯೋ ಅಷ್ಟು ನೋಡಿಕೊಳ್ಳಿ; ಭಾರತ ಸಾರ್ವಭೌಮ ರಾಷ್ಟ್ರ: ಟ್ರಂಪ್ಗೆ ಕಮಲ್ ಹಾಸನ್ ತಿರುಗೇಟು -
ಚಿಕ್ಕಬಳ್ಳಾಪುರದ ಜಿಲ್ಲೆಯ ಸತ್ಯಸಾಯಿ ಗ್ರಾಮಕ್ಕೆ ನಟ ರಿಷಬ್ ಶೆಟ್ಟಿ ಭೇಟಿ: ಮಾನವೀಯ ಕಾರ್ಯಗಳಿಗೆ ಶ್ಲಾಘನೆ -
Kiccha Sudeep: ಸುದೀಪ್ ನಂ 1 ಅಂತ ಗೂಗಲ್ನಲ್ಲಿ ಬರುತ್ತಾ, ನಟ ಆದ್ರೆ ತಲೆ ಮೇಲೆ ಕೊಂಬು ಇದ್ಯಾ: ಡಾಗ್ ಸತೀಶ್, ವೈರಲ್ ವಿಡಿಯೋ -
IMD Weather Forecast: ಭಾರತ vs ನ್ಯೂಜಿಲೆಂಡ್ ಟಿ20 ವಿಶ್ವಕಪ್ ಫೈನಲ್: ಅಹಮದಾಬಾದ್ನಲ್ಲಿ ಹವಾಮಾನ ಹೇಗಿದೆ, ಮಳೆ ಭೀತಿ ಇದೆಯೇ -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು












Click it and Unblock the Notifications