ಕದ್ರಿ ದೇಗುಲ ವಿವಾದ, ಕ್ರೈಸ್ತರು, ಕುಡ್ಲ ಸಂಸ್ಕೃತಿ ರಕ್ಷಿಸಿ, ಸಿಎಂಗೆ ಪತ್ರ
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಕೆ ಬಗ್ಗೆ ಸ್ಥಳೀಯರಾದ ಬ್ಲೇನಿ ಡಿಸೋಜ ಎಂಬವರು ಮೇಯರ್ ಹಾಗೂ ಮುಜರಾಯಿ ಇಲಾಖೆಗೆ ಆಕ್ಷೇಪಣಾ ಪತ್ರ ಬರೆದಿರುವುದು ವಿವಾದಕ್ಕೆ ಕಾರಣವಾಗಿದ್ದು ಗೊತ್ತಿರಬಹುದು.
ದೇವಸ್ಥಾನದಲ್ಲಿ ಧ್ವನಿವರ್ಧಕ ಬಳಸುವುದರಿಂದ ಸುತ್ತಮುತ್ತಲಿನ ಮನೆಗಳಲ್ಲಿ ಇರುವವರಿಗೆ ತೊಂದರೆ ಆಗುತ್ತಿದೆ ಎಂದು ಆರೋಪಿಸಿದ್ದರು. ಇದಕ್ಕೆ ಪ್ರತಿಯಾಗಿ ತಮ್ಮನ್ನು ತೌ ಜಾತ್ಯಾತೀತ ಕನ್ನಡಿಗರು ಎಂದು ಕರೆದುಕೊಂಡಿರುವ ಯುವಕರ ಗುಂಪೊಂದು ಕ್ರೈಸ್ತರು, ಹಿಂದೂಗಳು, ಕುಡ್ಲ ಸಂಸ್ಕೃತಿ ರಕ್ಷಿಸುವಂತೆ ಕೋರಿ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿಗಳು
ಕರ್ನಾಟಕ ಸರ್ಕಾರ
ಮಾನ್ಯರೇ,
ಮಂಗಳೂರು ಕದ್ರಿ ಗ್ರಾಮದಲ್ಲಿರುವ ಶ್ರೀಮಂಜುನಾಥ ದೇವಸ್ಥಾನವು ಸುಮಾರು ಹತ್ತು ಶತಮಾನಗಳಷ್ಟು ಪುರಾತನ ದೇವಸ್ಥಾನವಾಗಿದ್ದು ಸದರಿ ದೇವಾಲಯದಲ್ಲಿ ಸಾವಿರಾರು ವರ್ಷಗಳಿಂದ ನಿತ್ಯವೂ ಪೂಜೆ, ಪುನಸ್ಕಾರ, ಮಂತ್ರಘೋಷ, ಮಹಾ ಮಂಗಳಾರತಿ, ಘಂಟಾ ನಾದಗಳು ಮೊಳಗುತ್ತಿವೆ. ಮೊಸರು ಕುಡಿಕೆ, ದೀಪಾವಳಿ, ಭಜನೆ, ನೇಮ ವಾರ್ಷಿಕ ಜಾತ್ರೆ, ಯಕ್ಷಗಾನ ಮುಂತಾದವುಗಳೂ ತಲೆತಲಾಂತರದಿಂದ ನಡೆದುಕೊಂಡುಬರುತ್ತಿವೆ.

ಆದರೆ ಆ ನಂತರದಲ್ಲಿ ಸದರಿ ದೇವಾಲಯವಿರುವ ಕದ್ರಿ ಗ್ರಾಮಕ್ಕೆ ಎಲ್ಲಿಂದಲೋ ಕೆಲವು ಕ್ರಿಶ್ಚಿಯನ್ ಸಮುದಾಯದವರು ಬಂದು ನೆಲೆಸಿರುತ್ತಾರೆ.ಅವರುಗಳು ಏಕದೇವೋಪಾಸಕರಾಗಿರುವುದರಿಂದಾಗಿ ಹಿಂದೂ ದೇವರುಗಳಿಗೆ ನಡೆಯುವ ಹಲವಾರು ಬಗೆಯ ಪೂಜೆ ಪುನಸ್ಕಾರಗಳು ಕಿರಿಕಿರಿಯನ್ನುಂಟುಮಾಡುತ್ತಿದೆಯಷ್ಟೇ ಅಲ್ಲದೇ ಕೆಲವು ವಿಶೇಷ ದಿನಗಳಲ್ಲಿ ಎಂದರೆ ಮೊಸರು ಕುಡಿಕೆ, ದೀಪಾವಳಿ, ಭಜನೆ, ನೇಮ, ವಾರ್ಷಿಕ ಜಾತ್ರೆ, ಯಕ್ಷಗಾನ ಮುಂತಾದವುಗಳು ನಡೆಯುವ ಸಮಯದಲ್ಲಿ ತೀವ್ರ ತರದ ತೊಂದರೆಯಾಗುವುದುಂಟು.
ಕೆಲವೊಮ್ಮೆ ಧ್ವನಿವರ್ಧಕದಿಂದ ಹೊರಬರುವ ದೇವರ ನಾಮಗಳ ಶಬ್ದದಿಂದಾಗಿ ಅವರ ಕಿವಿಯ ತಮಟೆಯನ್ನಷ್ಟೇ ಅಲ್ಲದೇ ಎದೆಯನ್ನೂ ಸೀಳಿ ಹೃದಯವನ್ನೇ ಸ್ತಂಭನಗೊಳಿಸಿಬಿಡುತ್ತದೆ.
ಆದುದರಿಂದ ದೇವಾಲಯ ನಿರ್ಮಾಣವಾಗಿ ಹಲವಾರು ಶತಮಾನಗಳ ನಂತರ ಎಲ್ಲಿಂದಲೋ ಅಲ್ಲಿಗೆ ಬಂದು ದೇವಾಲಯದ ಸುತ್ತ ಮುತ್ತ ನೆಲೆಸಿರುವ ಕ್ರಿಶ್ಚಿಯನ್ ಧರ್ಮದವರನ್ನು ಆದಷ್ಟು ಬೇಗ ಅಲ್ಲಿಂದ ಬಹು ದೂರದ ಜಾಗಗಳಿಗೆ ಸ್ಥಳಾಂತರಿಸಿ ಅವರ ಪ್ರಾಣಗಳನ್ನು ಕಾಪಾಡುವುದರ ಜೊತೆಗೆ ಸಾವಿರಾರು ವರ್ಷಗಳ ಪುರಾತನ ದೇವಾಲಯದಲ್ಲಿ ನಡೆಯುತ್ತಿರುವ ಆಚರಣೆಗಳು ನಿರಾತಂಕವಾಗಿ ನೆರವೇರಲು ಅವಕಾಶ ಮಾಡಿಕೊಡಬೇಕೆಂದು ಎಲ್ಲಾ ಜಾತ್ಯತೀತ ಮನಸ್ಸುಗಳ ಪರವಾಗಿ ಕೋರುತ್ತಿದ್ದೇವೆ.
ವಂದನೆಗಳೊಂದಿಗೆ
ತಮ್ಮ ವಿಶ್ವಾಸಿ
ಪ್ರವೀಣ್ ಕುಮಾರ್ ಮಾವಿನಕಾಡು ಮತ್ತು ಅಪಾರ ಜಾತ್ಯತೀತ ಕನ್ನಡಿಗರು.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!












Click it and Unblock the Notifications