ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮಯ್ಯ ಉಡುಪಿ ಪ್ರವಾಸ ಮೊಟಕು; ಬೆಂಗಳೂರಿಗೆ ವಾಪಸ್

|
Google Oneindia Kannada News

ಮಂಗಳೂರು, ಡಿಸೆಂಬರ್ 23 : ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಉಡುಪಿ ಪ್ರವಾಸವನ್ನು ರದ್ದುಗೊಳಿಸಿದ್ದಾರೆ. ಮಂಗಳೂರಿನಲ್ಲಿರುವ ಅವರು ಅಲ್ಲಿಯೇ ವಿಶ್ರಾಂತಿ ಪಡೆಯಲಿದ್ದು, ಬಳಿಕ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.

ಸೋಮವಾರ ಸಿದ್ದರಾಮಯ್ಯ ಮಂಗಳೂರಿಗೆ ಭೇಟಿ ನೀಡಿದ್ದಾರೆ. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ವೇಳೆ ಗಾಯಗೊಂಡವರನ್ನು ಆಸ್ಪತ್ರೆಯಲ್ಲಿ ಭೇಟಿ ಮಾಡಿದರು.

ಮಂಗಳೂರು ಗೋಲಿಬಾರ್: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ ಮಂಗಳೂರು ಗೋಲಿಬಾರ್: ಸಿಐಡಿ ತನಿಖೆಗೆ ವಹಿಸಿದ ರಾಜ್ಯ ಸರ್ಕಾರ

ಪೊಲೀಸರ ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು ಯುವಕರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದರು. ಕೆಪಿಸಿಸಿ ವತಿಯಿಂದ ಪರಿಹಾರದ ಚೆಕ್ ವಿತರಣೆ ಮಾಡಿದರು. ಗೋಲಿಬಾರ್ ನಡೆದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು.

ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ ಮಂಗಳೂರು ಗೋಲಿಬಾರ್; ಮೃತಪಟ್ಟವರಿಗೆ 10 ಲಕ್ಷ ಪರಿಹಾರ

Siddaramaiah

ಮಂಗಳೂರಿನಿಂದ ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡುವ ಕಾರ್ಯಕ್ರಮ ನಿಗದಿಯಾಗಿತ್ತು. ಆದರೆ, ಹೆಚ್ಚು ಓಡಾಟದಿಂದ ಬಳಲಿರುವ ಅವರು ಮಂಗಳೂರಿನಲ್ಲಿ ಕೆಲವು ತಾಸು ವಿಶ್ರಾಂತಿ ಪಡೆದು ಬೆಂಗಳೂರಿಗೆ ವಿಶೇಷ ವಿಮಾನದಲ್ಲಿ ವಾಪಸ್ ಆಗಲಿದ್ದಾರೆ.

ಮಂಗಳೂರು ಪೊಲೀಸರ ದೌರ್ಜನ್ಯದ ಭೀಕರ ಅನುಭವ ಹಂಚಿಕೊಂಡ ಕೇರಳ ಪತ್ರಕರ್ತರುಮಂಗಳೂರು ಪೊಲೀಸರ ದೌರ್ಜನ್ಯದ ಭೀಕರ ಅನುಭವ ಹಂಚಿಕೊಂಡ ಕೇರಳ ಪತ್ರಕರ್ತರು

ಸಿದ್ದರಾಮಯ್ಯ ಆಂಜಿಯೋಪ್ಲಾಸ್ಟಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದರು. ವೈದ್ಯರು ಅವರಿಗೆ 15 ದಿನಗಳ ಕಡ್ಡಾಯ ವಿಶ್ರಾಂತಿಗೆ ಸೂಚನೆ ನೀಡಿದ್ದರು. ಆದರೆ, ಸಿದ್ದರಾಮಯ್ಯ ವೈದ್ಯರ ಸಲಹೆ ಪಡೆದು ಮಂಗಳೂರಿಗೆ ಭೇಟಿ ನೀಡಿದ್ದರು.

ಸಿದ್ದರಾಮಯ್ಯ ಉಡುಪಿಗೆ ಭೇಟಿ ನೀಡಿ ಪೇಜಾವರ ಶ್ರೀಗಳ ಆರೋಗ್ಯ ವಿಚಾರಿಸಬೇಕಿತ್ತು. ಆದರೆ, ಅವರು ಆಯಾಸಗೊಂಡಿರುವುದರಿಂದ ಉಡುಪಿ ಭೇಟಿಯನ್ನು ರದ್ದುಗೊಳಿಸಿದ್ದಾರೆ.

English summary
Karnataka opposition leader Siddaramaiah cancelled Udupi tour. He will take rest in Mangaluru circuit house and travel to Bengaluru.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X