'ರಾಜ್ಯ ಸರಕಾರದ ವಿರುದ್ಧ ಟೀಕಿಸಲು ಪ್ರತಿಪಕ್ಷಕ್ಕೆ ಯಾವುದೇ ವಿಷಯ ಸಿಗುತ್ತಿಲ್ಲ'
ಮಂಗಳೂರು, ಸೆಪ್ಟೆಂಬರ್ 18 : ರಾಜ್ಯ ಸರಕಾರದ ವಿರುದ್ಧ ಟೀಕಿಸಲು ಪ್ರತಿಪಕ್ಷಗಳಿಗೆ ಯಾವುದೇ ವಿಷಯ ಸಿಗುತ್ತಿಲ್ಲ. ಚುನಾವಣೆ ಸಮಯದಲ್ಲಿ ಗಲಭೆಗೆ ಸಂಚು ಹೂಡವುದು ಬಿಜೆಪಿಗರ ಜಾಯಾಮಾನ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ .ಖಾದರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ನಗರದ ಸರ್ಕಿಟ್ ಹೌಸ್ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಚಾಮರಾಜನಗರದದಲ್ಲಿ ದೇವಸ್ಥಾನವೊಂದರ ಭಗವಾಧ್ವಜಕ್ಕೆ ಬೆಂಕಿ ಹಚ್ಚಿ ಮತೀಯ ಗಲಭೆ ಸೃಷ್ಟಿಸಲು ನಡೆಸಿದ ಸಂಚಿನಲ್ಲಿ ಬಿಜೆಪಿಗರು ಭಾಗಿಯಾಗಿದ್ದಾರೆ. ಬಿಜೆಪಿಗರಿಗೆ ಚುನಾವಣೆಗೆ ಹೋಗಲು ವಿಷಯವೇ ಇಲ್ಲ. ಹಾಗಾಗಿ ಇಂತಹ ಸಂಚು ನಡೆಸುತ್ತಿದೆ. ಆದರೆ, ರಾಜ್ಯದ ಜನತೆ ಇದಕ್ಕೆ ಮನ್ನಣೆ ನೀಡುತ್ತಿಲ್ಲ" ಎಂದರು.

ಪ್ರತಿಪಕ್ಷ ಬಿಜೆಪಿಗೆ ಸರಕಾರದ ವಿರುದ್ಧ ಆರೋಪಿಸಲು ವಿಷಯಗಳೇ ಇಲ್ಲ. ಸಚಿವ ಕೆ.ಜೆ.ಜಾರ್ಜ್ರ ರಾಜೀನಾಮೆ ಕೇಳಿ ನಗೆಪಾಟಲಿಗೀಡಾಗುತ್ತಿದೆ. ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಸಚಿವ ಕೆ.ಜೆ.ಜಾರ್ಜ್ರನ್ನು ಆರೋಪಿ ಎಂದು ಗುರುತಿಸಿಲ್ಲ.
ಸಿಬಿಐ ತನಿಖೆ ನಡೆಸಿ 3 ತಿಂಗಳೊಳಗೆ ವರದಿ ಸಲ್ಲಿಸಲು ಆದೇಶಿಸಿದೆ. ಬಿಜೆಪಿಗರಿಗೆ ಸಿಬಿಐ ಮೇಲೆ ವಿಶ್ವಾಸವಿರುವಾಗ 3 ತಿಂಗಳು ಕಾಯ್ದು. ಮುಂದೇನು ಮಾಡಬೇಕು ಎಂಬುದರ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಿ ಎಂದರು.
ಬಿಜೆಪಿ ನಾಯಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಸರಕಾರದ ಮೇಲೆ ವಿನಾಕಾರಣ ಆರೋಪ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ












Click it and Unblock the Notifications