ಬರಗಾಲದಲ್ಲೂ ಪಾಳು ಬಿದ್ದ ಕ್ವಾರಿಯಲ್ಲಿ ಉಕ್ಕಿತು ಜಲಧಾರೆ
ಮಂಜೇಶ್ವರದ ಪೈವಳಿಕೆ ಗ್ರಾ. ಪಂ. ವ್ಯಾಪ್ತಿಯ ಬಾಯಾರು ಪದವಿನಿಂದ ಸುಮಾರು 6 ಕಿ.ಮೀ ದೂರವಿರುವ ಚೆನ್ನಿಮೂಲೆ ಎಂಬಲ್ಲಿ ಪಾಳು ಬಿದ್ದ ಕಲ್ಲಿನ ಕ್ವಾರಿಯೊಂದಿತ್ತು. ಇದರಲ್ಲಿ ಬುಲ್ಡೋಜರ್ ಮೂಲಕ ಮಣ್ಣು ತೆಗೆದಾಗ ನೀರು ಸಿಕ್ಕಿದೆ.
ಮಂಗಳೂರು, ಏಪ್ರಿಲ್ 25: ಬಿರು ಬೇಸಿಗೆಯಲ್ಲಿ ನೀರಿಲ್ಲದೆ ಜನರು ಪರದಾಡುತ್ತಿರುವಾಗ ಪಾಳು ಬಿದ್ದ ಕಲ್ಲಿನ ಕ್ವಾರಿಯಲ್ಲಿ ನೀರು ಉಕ್ಕಿದರೆ ಎಷ್ಟು ಸಂಭ್ರಮವಾಗಬಹುದು? ಇಲ್ಲೂ ಆಗಿದ್ದು ಅದೇ.
ಕಾಸರಗೋಡಿನ ಮಂಜೇಶ್ವರದ ಪೈವಳಿಕೆ ಗ್ರಾ. ಪಂ. ವ್ಯಾಪ್ತಿಯ ಬಾಯಾರು ಪದವಿನಿಂದ ಸುಮಾರು 6 ಕಿ.ಮೀ ದೂರವಿರುವ ಚೆನ್ನಿಮೂಲೆ ಎಂಬಲ್ಲಿ ಪಾಳು ಬಿದ್ದ ಕಲ್ಲಿನ ಕ್ವಾರಿಯೊಂದಿತ್ತು. ಇದರಲ್ಲಿ ಬುಲ್ಡೋಜರ್ ಮೂಲಕ ಮಣ್ಣು ತೆಗೆದಾಗ ನೀರು ಒರತೆ ಕಾಣಿಸಿದೆ. ಇದು ಗ್ರಾಮಸ್ಥರಲ್ಲಿ ಸಂತಸದ ಜತೆಗೆ ಆಚ್ಚರಿಗೂ ಕಾರಣವಾಗಿದೆ.[ಅಂಥಿಂಥ ಉಪ್ಪಿನಕಾಯಿ ನೀನಲ್ಲ, ನಿನ್ನಂಥ ಉಪ್ಪಿನಕಾಯಿ ಇನ್ನಿಲ್ಲ!]

ಮೂರು ವರ್ಷಗಳ ಹಿಂದೆ ಚೆನ್ನಿ ಮೂಲೆಯಲ್ಲಿ ಕೆಂಪು ಕಲ್ಲಿನ ಕ್ವಾರಿಯೊಂದನ್ನು ಆರಂಭಿಸಲಾಗಿತ್ತು. 20 ಅಡಿ ಆಳದಲ್ಲಿ ಮಣ್ಣು ಸಿಕ್ಕ ಸಂದರ್ಭ ಕ್ವಾರೆಯನ್ನು ಅರ್ಧದಲ್ಲಿ ನಿಲ್ಲಿಸಿ ಅಲ್ಲಿಯೇ ಸಮೀಪದ ಇನ್ನೊಂದು ಜಾಗದಲ್ಲಿ ಕೆಂಪು ಕಲ್ಲಿನ ಕ್ವಾರೆ ಆರಂಭಿಸಲಾಗಿತ್ತು.
ಇದೇ ಹಳೇ ಕ್ವಾರಿ ಇದ್ದ ಜಾಗದಲ್ಲಿ ದಿನಗಳ ಹಿಂದೆ ಜೆಸಿಬಿ ಮೂಲಕ ಗುಂಡಿಯನ್ನು ತೋಡಿದಾಗ ನೀರಿನ ಸಣ್ಣ ಒರತೆ ಕಾಣಿಸಿದೆ. ಸುಮಾರು 7ರಿಂದ ಹತ್ತು ಅಡಿ ಆಳವಿರುವ ಗುಂಡಿಯಲ್ಲಿ ನೀರು ಸಿಕ್ಕಿರುವುದು ಸಂತಸ ತಂದಿದೆ ಎನ್ನುತ್ತಾರೆ ಕ್ವಾರಿ ಮಾಲಕ ಮಹಮ್ಮದ್ ಬಂದ್ಯೋಡು.[ಹೊಸ ಸ್ಕೂಟಿ ಜತೆ ಮಂಗಳೂರಲ್ಲಿ ವಿಷಕಾರಿ ಹಾವು ಫ್ರೀ]

ಬೇಸಿಗೆ ಸಮಯ ಕ್ವಾರಿಯಲ್ಲಿ ದುಡಿಯುವ ಕಾರ್ಮಿಕರಿಗೂ ಬಹಳಷ್ಟು ನೀರಿನ ಅವಶ್ಯಕತೆ ಸೃಷ್ಟಿಯಾಗಿತ್ತು. ಸಮೀಪದ ಜಲನಿಧಿ ಟ್ಯಾಂಕಿನಲ್ಲಿಯೂ ನೀರು ಇಲ್ಲವಾಗಿದೆ. ಇಂತಹ ಸಂದರ್ಭದಲ್ಲಿ ನೀರು ಸಿಕ್ಕಿದ್ದು, ಕಡಿಯುವ ನೀರು ಮತ್ತು ಅಡುಗೆ ಅವಶ್ಯಕತೆಯನ್ನು ನೆರವೇರಿಸಲು ಸಹಕಾರಿಯಾಗಿದೆ. ಹೆಚ್ಚಿನ ನೀರು ಸಿಕ್ಕಿರುವುದರಿಂದ ಸಮೀಪದ ಮನೆ ಮಂದಿಯೂ ಇಲ್ಲಿಂದಲೇ ನೀರು ಕೊಂಡೊಯ್ಯುತ್ತಿದ್ದಾರೆ.
ಸ್ಥಳೀಯಾಡಳಿತ ಆಸಕ್ತಿ ವಹಿಸಿದಲ್ಲಿ ಸಣ್ಣಗುಂಡಿಯನ್ನು ಬಾವಿ ರೂಪದಲ್ಲಿ ಅಗಲೀಕರಿಸಿ ಅವಶ್ಯಕತೆಯ ನೀರನ್ನು ಪೂರೈಸಬಹುದು ಎನ್ನುತ್ತಾರೆ ಕ್ವಾರಿ ಮಾಲಕರು. ಎತ್ತರದ ಪ್ರದೇಶದಲ್ಲಿರುವ ಈ ಕಲ್ಲಿನ ಕ್ವಾರೆಯಲ್ಲಿ ಹೇಗೆ ನೀರು ಸಿಕ್ಕಿದೆ ಎನ್ನುವುದು ಮಾತ್ರ ಜನರ ಅಚ್ಚರಿಗೆ ಕಾರಣವಾಗಿದೆ !
ನೀರಿನ ಒರತೆ ಕಾಣಿಸಿಕೊಂಡ ಕಲ್ಲಿನ ಕೋರೆಯನ್ನು ಮಳೆಗಾಲದ ಸಂದರ್ಭ ನೀರು ಶೇಖರಿಸುವ ಇಂಗು ಗುಂಡಿಯಾಗಿ ಪರಿವರ್ತಿಸಲಾಗುವುದು. ಸುಮಾರು 20 ಅಡಿ ಆಳವಿರುವ ಹೊಂಡದಲ್ಲಿ ನೀರು ಇಂಗಿಸಿದರೆ ಹೆಚ್ಚು ಪ್ರಯೋಜನಕಾರಿಯಾಗಬಲ್ಲುದು ಎನ್ನುತ್ತಾರೆ ಕ್ವಾರಿಯ ಮಾಲಕರು.
ಜಿಲ್ಲೆಯಲ್ಲಿನ ಇತರ ಪಾಳು ಬಿದ್ದ ಕ್ವಾರಿಗಳಲ್ಲಿಯೂ ಇದೇ ರೀತಿ ಹೊರ ರಕ್ಷಣಾ ಗೋಡೆ ನಿರ್ಮಿಸಿ ನೀರು ಶೇಖರಿಸಿ, ಇಂಗಿಸುವ ಕ್ರಮವನ್ನು ಅನುಸರಿಸಿದರೆ ಬೇಸಿಗೆ ಕಾಲದಲ್ಲಿ ನೀರಿನ ಕ್ಷಾಮ ಇಲ್ಲವಾಗಿಸಬಹುದಾಗಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications