ಜನ-ಮನ ಸೂರೆಗೊಂಡ ಮಂಗಳೂರಿನ ಗೂಡು ದೀಪ ಸ್ಪರ್ಧೆ
ಮಂಗಳೂರು, ಅಕ್ಟೋಬರ್ 18 : ಈಗ ಎಲ್ಲೆಲ್ಲೂ ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮ. ದೀಪಾವಳಿ ಬೆಳಕಿನ ಹಬ್ಬ. ಈ ದೀಪಾವಳಿಯ ಸಂಭ್ರಮದ ಪ್ರತೀಕವೇ ಈ ಗೂಡು ದೀಪಗಳು ಅಥವಾ ಆಕಾಶ ಬುಟ್ಟಿಗಳು. ಇದನ್ನು ವ್ಯೊಮ ದ್ವೀಪ ಎಂದು ಕರೆಯಲಾಗುತ್ತದೆ.
ಕಗ್ಗತ್ತಲ ರಾತ್ರಿಯಲ್ಲಿ ಬಣ್ಣ-ಬಣ್ಣದ ಬೆಳಕಿನ ಚಿತ್ತಾರ ಮೂಡಿಸುವ ಗೂಡು ದೀಪಗಳನ್ನು ನೊಡುವುದೇ ಕಣ್ಣಿಗೆ ಹಬ್ಬ. ಈ ಹಿಂದೆ ಪ್ರತಿ ಮನೆಗಳಲ್ಲಿ ಹಬ್ಬದ ಸಂದರ್ಭದಲ್ಲಿ ಈ ಗೂಡು ದೀಪಗಳನ್ನು ರಚಿಸಲಾಗುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಜಾಗತೀಕರಣದ ಭರಾಟೆಯಲ್ಲಿ ರೆಡಿಮೇಡ್ ಗೂಡು ದೀಪಗಳು ಮಾರುಕಟ್ಟೆಗೆ ಲಗ್ಗೆ ಇಟ್ಟಿವೆ.
ಅಂಧಕಾರದಲ್ಲಿ ಬೆಳಕಿನ ಚಿತ್ತಾರ ಮೂಡಿಸುವ ಈ ಗೂಡು ದೀಪಗಳ ಪರಂಪರೆ ಕ್ಷೀಣಿಸುತ್ತಿದೆ. ಆದ್ದರಿಂದ, ಜನರನ್ನು ಮತ್ತೆ ಗೂಡು ದೀಪಗಳತ್ತ ಆಕರ್ಷಿಸುವಂತೆ ಮಾಡುವ ಪ್ರಯತ್ನ ಮಂಗಳೂರಿನಲ್ಲಿ ನಡೆದಿದೆ. ಇದಕ್ಕಾಗಿ ಗೂಡು ದೀಪ ರಚನೆ ಮಾಡುವ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ.
2017ನೇ ಸಾಲಿನ ಗೂಡುದೀಪ ಸ್ಪರ್ಧೆಯಲ್ಲಿ 450 ಕ್ಕೂ ಅಧಿಕ ಗೂಡು ದೀಪಗಳು ಪಾಲ್ಗೊಂಡಿದ್ದವು. ಮಂಗಳೂರಿನ ನಮ್ಮಕುಡ್ಲ ಸಂಸ್ಥೆ ಕಳೆದ 17 ವರ್ಷಗಳಿಂದ ಈ ಸ್ಪರ್ಧೆಯನ್ನು ಆಯೋಜಿಸುತ್ತಿದೆ. ಸ್ಪರ್ಧೆಯ ಚಿತ್ರಗಳು ಇಲ್ಲಿವೆ....

17 ವರ್ಷಗಳಿಂದ ಸ್ಪರ್ಧೆ
ಸಾಂಪ್ರಾದಾಯಿಕ ಸೊಗಡನ್ನು ಪ್ರೇರೇಪಿಸುವ ಹಾಗು ಗೂಡು ದೀಪ ರಚಿಸುವ ಪರಂಪರೆಯನ್ನು ಮುಂದುವರೆಸುವ ನಿಟ್ಟಿನಲ್ಲಿ ಮಂಗಳೂರಿನ ನಮ್ಮಕುಡ್ಲ ಸಂಸ್ಥೆ ಕಳೆದ 17 ವರ್ಷಗಳಿಂದ ಗೂಡು ದೀಪ ರಚನೆ ಮಾಡುವ ಸ್ಪರ್ಧೆ ಏರ್ಪಡಿಸುತ್ತಿದೆ. ಶ್ರೀ ಕ್ಷೇತ್ರ ಗೋಕರ್ಣ ನಾಥೇಶ್ವರ ದೇವಾಲಯದ ಆವರಣದಲ್ಲಿ ಪ್ರತಿ ವರ್ಷ ಈ ಗೂಡು ದೀಪ ಸ್ಪರ್ಧೆ ಏರ್ಪಡಿಸಲಾಗುತ್ತದೆ.

450 ಗೂಡುಗಳು ಪಾಲ್ಗೊಂಡಿದ್ದವು
ಪಾರಂಪರಿಕ, ಆಧುನಿಕ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಈ ಗೂಡು ದೀಪ ರಚಿಸುವ ಸ್ಪರ್ಧೆ ನಡೆಯುತ್ತದೆ. ಈ ಬಾರಿ ನಡೆದ ಗೂಡುದೀಪ ಸ್ಪರ್ಧೆಯಲ್ಲಿ 450 ಕ್ಕೂ ಅಧಿಕ ಗೂಡು ದೀಪಗಳು ಪಾಲ್ಗೊಂಡಿದ್ದವು. ಇವುಗಳನ್ನು ನೋಡಲು ನೂರಾರು ಜನರು ಸೇರಿದ್ದರು.

ವಿಶಿಷ್ಟ ಗೂಡು ದೀಪಗಳು
ಈ ಗೂಡು ದೀಪ ಸ್ಪರ್ಧೆಯಲ್ಲಿ ಸಾಂಪ್ರದಾಯಿಕ, ಆಧುನಿಕ ಶೈಲಿ, ಮಾದರಿ ಎಂಬ ಮೂರು ವಿಭಾಗಗಳಲ್ಲಿ ಗೂಡು ದೀಪಗಳನ್ನು ಪ್ರದರ್ಶನಕ್ಕೆ ಇಡಲಾಗಿತ್ತು. ಸಾಂಪ್ರಾದಾಯಿಕ ವಿಭಾಗದಲ್ಲಿ ಧಾನ್ಯ ಕಾಳುಗಳು, ತರಕಾರಿ, ತೆಂಗಿನ ಗರಿ, ಹೂವಿನ ,ರುದ್ರಾಕ್ಷಿ, ಹರಳು, ಬಳೆ, ಬಿದಿರು, ಕಸೂತಿ ಕಲೆಯ ವೈಶಿಷ್ಟ್ಯಗಳನ್ನೊಳಗೊಂಡ ವಿಶಿಷ್ಟ ಗೂಡು ದೀಪಗಳು ಪ್ರದರ್ಶನಗೊಂಡವು.

ಆಧುನಿಕ ಶೈಲಿ
ಆಧುನಿಕ ಶೈಲಿಯ ಗೂಡು ದೀಪಗಳಲ್ಲಿ ಚಿಪ್ಪು, ಪಿವಿಸಿ ಪೈಪ್, ಪೆನ್ಸಿಲ್, ಬಳಪ, ಹಣತೆ, ಬಲೂನ್, ತರಕಾರಿ, ಸ್ಟ್ರಾ, ಸೇರಿದಂತೆ ಇನ್ನಿತರ ವಸ್ತುಗಳನ್ನು ಬಳಸಿ ರೂಪಿಸಿದ ಗೂಡು ದೀಪಗಳಿದ್ದವು. ಗಡಿಯಾರ, ಥೈಲ್ಯಾಂಡ್ ನ ವಿಶ್ವ ಪ್ರಸಿದ್ದ ವಾಟ್ ಮಾಹಾಥಟ್ ದೇವಾಲಯ, ಅಯೋಧ್ಯೆ ಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಶ್ರೀ ರಾಮ ಮಂದಿರದ ಮಾದರಿಗಳು ಗಮನ ಸೆಳೆದವು.

ಜಾನಪದ ಕಲೆ ಉಳಿಸುವ ಪ್ರಯತ್ನ
ಜಾಗತೀಕರಣ ಮತ್ತು ವಿದೇಶಿ ಸಂಸ್ಕೃತಿಯ ದಾಳಿಯಲ್ಲಿ ಸಾಂಪ್ರಾದಾಯಿಕ ಮತ್ತು ಜನಪದೀಯ ಕಲೆ ಮತ್ತು ಸಂಸ್ಕೃತಿ ಮೂಲೆ ಗುಂಪಾಗುತ್ತಿವೆ. ಇಂದಿನ ದಿನಗಳಲ್ಲಿ ಇಂತಹ ಕಾರ್ಯಕ್ರಮಗಳ ಮೂಲಕ ಅಲ್ಪ ಪ್ರಮಾಣದಲ್ಲಿ ಜನರನ್ನು ಮೂಲ ಸಂಸ್ಕೃತಿಯೆಡೆಗೆ ಸೆಳೆಯುವಲ್ಲಿ ಸ್ಥಳಿಯ ಸಂಘ ಸಂಸ್ಥೆಗಳು ಯಶಸ್ವಿಯಾಗುತ್ತಿವೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications