ಧರ್ಮಸ್ಥಳದಲ್ಲಿ ಪಂಚ ಮಹಾವೈಭವದ ಮುಖ್ಯ ವೇದಿಕೆ ಕುಸಿತ:ನಾಲ್ವರಿಗೆ ಗಾಯ
ಮಂಗಳೂರು, ಫೆಬ್ರವರಿ 14:ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಪಂಚ ಮಹಾವೈಭವ ವೇದಿಕೆಯ ಮೇಲ್ಛಾವಣಿ ಕುಸಿದು ಬಿದ್ದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಏಕಾಏಕಿ ಪೆಂಡಾಲ್ ನ ಒಂದು ಕಡೆ ಕುಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಪೆಂಡಾಲ್ ನಲ್ಲಿ ಕೆಳಗೆ ಹಲವಾರು ಮಂದಿ ಸಿಲುಕಿರುವ ಶಂಕೆ ಇದ್ದ ಕಾರಣ ಅಗ್ನಿಶಾಮಕದಳ ಹಾಗೂ ಸ್ಥಳೀಯರು ತೆರವು ಕಾರ್ಯಾಚರಣೆ ನಡೆಸಿ ಅಪಾಯದಲ್ಲಿ ಸಿಲುಕಿದ್ದವರನ್ನು ರಕ್ಷಿಸಿದರು.

ಪೆಂಡಾಲ್ ಭಾರ ಒಂದೆಡೆ ಜಾಸ್ತಿ ಆಗಿ ಕುಸಿದಿದೆ ಎಂದು ಹೇಳಲಾಗಿದೆ. ಪೆಂಡಾಲ್ ಕುಸಿದ ಹಿನ್ನೆಲೆಯಲ್ಲಿ ಪಂಚಮಹಾವೈಭವ ಕಾರ್ಯಕ್ರಮ ಮುಖ್ಯ ವೇದಿಕೆಯಲ್ಲಿ ರದ್ದಾಗಿದ್ದು, ದೃಶ್ಯ ರೂಪಕವನ್ನು ಅಮೃತವರ್ಷಿಣಿ ವೇದಿಕೆಗೆ ಸ್ಥಳಾಂತರಿಸಲಾಗಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಗೆ ಮಹಾಮಸ್ತಕಾಭಿಷೇಕ ನಡೆಯುತ್ತಿದ್ದು, ಭರತ ಬಾಹುಬಲಿಯ ಜೀವನ ಸಾರುವ ದೃಶ್ಯ ರೂಪಕಕ್ಕಾಗಿ ಪಂಚ ಮಹಾವೈಭವ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿತ್ತು.

ಪೆಂಡಾಲ್ ಬಿದ್ದ ಸಮಯದಲ್ಲಿ ಪೆಂಡಾಲ್ ಒಳಗಡೆ ವಿಶ್ರಾಂತಿ ತೆಗೆದುಕೊಳ್ಳುತ್ತಿದ್ದ ಕೆಲವು ಮಂದಿಗೆ ಗಾಯಗಳಾಗಿವೆ. ಪೆಂಡಾಲ್ ಬಿದ್ದ ದೃಶ್ಯವನ್ನು ಚಿತ್ರೀಕರಿಸಲು ತೆರಳಿದ್ದ ಮಾಧ್ಯಮ ಪ್ರತಿನಿಧಿಗಳ ಮೇಲೂ ನೆರೆದಿದ್ದ ಮಂದಿ ಆಕ್ರೋಶವನ್ನು ತೋರ್ಪಡಿಸಿದ್ದಾರೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications