ಅಲ್ಪಸಂಖ್ಯಾತರ ಭವನಕ್ಕೆ ಕಲ್ಲೆಸೆದು ಪರಾರಿ ಆದವರ ಬಂಧನ
ಬೆಂಗಳೂರು, ಆ. 19: ಮಂಗಳೂರಿನ ಪಾಂಡೇಶ್ವರದಲ್ಲಿರುವ ಅಲ್ಪಸಂಖ್ಯಾತರ ಭವನಕ್ಕೆ ಕಲ್ಲೆಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರು ಆರೋಪಿತರನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ. ಗೂಡುಗುಡ್ಡೆ ನಿವಾಸಿ ಧನರಾಜ್ ಶೆಟ್ಟಿ(21), ಎಮ್ಮೆಕೆರೆ ನಿವಾಸಿ ಸುಶಾಂತ್(20), ಕಂದುಕ ನಿವಾಸಿ ಕಾರ್ತಿಕ್ ಶೆಟ್ಟಿ(26), ಹೊಯ್ಗೆ ಬಝಾರ್ ನಿವಾಸಿಗಳಾದ ಸಾಗರ್ ಬಂಗೇರ(20), ಮನೀಶ್ ಪುತ್ರನ್(20) ಸೇರಿದಂತೆ ಅಪ್ರಾಪ್ತ ಬಾಲಕ ಬಂಧಿತರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕನಿಗೆ ನ್ಯಾಯಾಲಯ ಜಾಮೀನು ನೀಡಿದೆ. ಉಳಿದ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಕಳೆದ ಆ.13ರಂದು ಮೌಲಾನ ಆಝಾದ್ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಭವನಕ್ಕೆ ಕಲ್ಲೆಸೆದು ದುಷ್ಕರ್ಮಿಗಳು ಪರಾರಿಯಾಗಿದ್ದರು.

ಪ್ರಕರಣಕ್ಕೆ ಸಂಬಂಧಿಸಿ ಕಟ್ಟಡದಲ್ಲಿನ ಸಿಸಿಟಿವಿ ಕ್ಯಾಮಾರಾದಲ್ಲಿ ಸೆರೆಯಾಗಿದ್ದ ದೃಶ್ಯಗಳನ್ನು ಪರಿಶೀಲಿಸಿ ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.












Click it and Unblock the Notifications