ಪರಮವೀರ ಚಕ್ರ ಪುರಸ್ಕೃತ ಯೋಗಿಂದರ್ ಸಿಂಗ್ ಮಂಗಳೂರಿಗೆ
ಮಂಗಳೂರು, ಆಗಸ್ಟ್, 03 : ಪರಮವೀರ ಚಕ್ರ ಪುರಸ್ಕೃತ ಗ್ರೆನೇಡಿಯರ್ ಸುಭೇಧಾರ್ ಯೋಗಿಂದರ್ ಸಿಂಗ್ ಯಾದವ್ ಅವರು ಮಂಗಳೂರಿಗೆ ಆಗಮಿಸಲಿದ್ದು, 'ವರ್ಡ್ಸ್ ಆಫ್ ಎ ರಿಯಲ್ ಹೀರೋ' ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.
ಯುವ ಬ್ರಿಗೇಡ್ ನೇತೃತ್ವದಲ್ಲಿ ಮಂಗಳೂರಿನ ಉರ್ವ ಕೆನರಾ ಹೈಸ್ಕೂಲ್ ಕ್ಯಾಂಪಸ್ನ ಮಿಜಾರು ಗೋವಿಂದ ಪೈ ಮೆಮೋರಿಯಲ್ ಹಾಲ್ನಲ್ಲಿ ಆಗಸ್ಟ್ 9 ರ ಭಾನುವಾರದಂದು ಬೆಳಗ್ಗೆ 11 ಗಂಟೆಗೆ ಸಮಾರಂಭ ಜರುಗಲಿದೆ. ಇದರಲ್ಲಿ ಯುವ ಬ್ರಿಗೇಡ್ ಮಾರ್ಗದರ್ಶಕ ಚಕ್ರವರ್ತಿ ಸೂಲಿಬೆಲೆ ಮತ್ತು ದ.ಕ. ಸಂಸದ ನಳಿನ್ ಕುಮಾರ್ ಕಟೀಲು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.[ಮಂಗಳೂರು : ರೈಲು ಅಪಘಾತ ತಪ್ಪಿಸಿದ ರೈತ]

1999ರಲ್ಲಿ ಸಿಂಗ್ ಅವರು, 'ಘಾತಕ್' ಎಂದು ಕರೆಯಲ್ಪಡುವ ಸೇನಾ ತುಕುಡಿಯ ಮುಂಚೂಣಿಯಲ್ಲಿದ್ದರು. ಕಾರ್ಗಿಲ್ ಭೂಮಿಯ ಟೈಗರ್ಹಿಲ್ ರಣರಂಗದಲ್ಲಿ ಶತ್ರುಗಳ ಮೂರು ಬಂಕರ್ ಗಳನ್ನು ಪುಡಿಗಟ್ಟುವ ಜವಾಬ್ದಾರಿಯನ್ನು ಈ ತಂಡಕ್ಕೆ ನೀಡಲಾಗಿತ್ತು. ಆಯತಾಕಾರದ ಕಣಿವೆಯಂತಹ ದುರ್ಗಮ ಹಿಮಚ್ಛಾದಿತ ಪ್ರದೇಶದಲ್ಲಿ ಹೆಜ್ಜೆ ಇಟ್ಟು ಶತ್ರುವಿನ ಬಂಕರ್ ಗಳತ್ತ ಮುನ್ನುಗ್ಗಿದ ಅವರ ಶೌರ್ಯ ಎಲ್ಲೆಡೆ ಪ್ರಶಂಸೆಗೊಳಗಾಗಿತ್ತು.
ವೀರಾವೇಶದಿಂದ ನುಗ್ಗುವಾಗ ಕೊನೆಯ ಕ್ಷಣದಲ್ಲಿ ಮೂರು ಬುಲೆಟ್ಗಳು ಯೋಗಿಂದರ್ ಸಿಂಗ್ ಅವರ ಭುಜ ಹಾಗೂ ತೊಡೆ ಸಂದನ್ನು ಹೊಕ್ಕಿದ್ದವು. ಅಂತಹ ಸಂದರ್ಭದಲ್ಲಿಯೂ ಯೋಗಿಂದರ್ ಸಿಂಗ್ 60 ಅಡಿ ಮೇಲಕ್ಕೆ ತೆವಳಿಕೊಂಡು ಸಾಗಿ ಶತ್ರುವಿನ ಮೊದಲ ಬಂಕರ್ ಸ್ಫೋಟಿಸಿದ್ದರು. ಅನಂತರ ಇಬ್ಬರು ಸಹ ಯೋಧರೊಂದಿಗೆ ಇನ್ನೊಂದು ಬಂಕರ್ ನಾಶಗೊಳಿಸಿದ್ದರು. ಹೀಗಾಗಿ ಟೈಗರ್ ಹಿಲ್ನ್ನು ತಮ್ಮ ಕೈವಶ ಮಾಡಿಕೊಳ್ಳುವಲ್ಲಿ ಭಾರತೀಯ ಸೇನೆ ಯಶಸ್ವಿಯಾಗಿತ್ತು.
ಸೈನ್ಯಕ್ಕೆ ಸೇರಲು ಬಯಸುವವರಿಗೆ ವಿಶೇಷ ಕಾರ್ಯಗಾರ:
ಭಾರತೀಯ ಸೈನ್ಯಕ್ಕೆ ಸೇರಲು ಬಯಸುವ ಯುವಕರಿಗೆ ಮಾರ್ಗದರ್ಶನ ನೀಡಲು ಯುವ ಬ್ರಿಗೇಡ್ ವತಿಯಿಂದ ಹೊಸ ಯೋಜನೆ ಸಿದ್ದಗೊಂಡಿದೆ. ಸೇನೆಗೆ ಸೇರಬಯಸುವ ಆಸಕ್ತ, ಸಶಕ್ತ ಯುವಕರಿಗೆ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಾಗಾರ ನಡೆಸಲು ಯೋಚಿಸಲಾಗಿದೆ.
ಇದರಂತೆ ಆಗಸ್ಟ್ 9 ರಂದು ಕೆನರಾ ಹೈಸ್ಕೂಲ್ ಕ್ಯಾಂಪಸ್ ನಲ್ಲಿ ಮಧ್ಯಾಹ್ನ 2.30ರಿಂದ ವಿಶೇಷ ಕಾರ್ಯಾಗಾರ ನಡೆಯಲಿದೆ. ಸೈನಿಕರಾಗಲು ಬೇಕಾದ ಮುಖ್ಯ ಅರ್ಹತೆಗಳ ಹಾಗೂ ಇತರ ವಿಷಯಗಳ ಬಗ್ಗೆ ಯುವ ಬ್ರಿಗೇಡ್ ನ ಮಹಾರಕ್ಷಕದ ರಾಜ್ಯ ಸಂಚಾಲಕ ಸುಮುಖ ಬೇಟಗೆರಿ ಅವರ ನೇತೃತ್ವದಲ್ಲಿ ಕಾರ್ಯಾಗಾರ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
-
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Gas Booking New Rules: ಎಲ್ಪಿಜಿ ಗ್ಯಾಸ್ ಬುಕ್ಕಿಂಗ್ನಲ್ಲಿ ಹೊಸ ನಿಯಮ, ಎಷ್ಟು ದಿನಕ್ಕೆ ಸಿಗುತ್ತೆ ಗ್ಯಾಸ್ ಸಿಲಿಂಡರ್ -
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
Summer Specail Train: ಮೈಸೂರಿನಿಂದ ಇಲ್ಲಿಗೆ ವಿಶೇಷ ಎಕ್ಸ್ಪ್ರೆಸ್ ರೈಲು, 3 ರಾಜ್ಯಗಳಿಗೆ ಅನುಕೂಲ -
April 12 Horoscope: 12 ರಾಶಿಗಳಿಗೆ ಇಂದು ಹಣ-ಪ್ರೇಮದಲ್ಲಿ ಅದೃಷ್ಟ ಯಾರಿಗೆ? ಸಂಪೂರ್ಣ ವಿವರ -
IPL 2026: ಗಿಲ್ ಮತ್ತು ಬಟ್ಲರ್ ಸ್ಫೋಟಕ ಬ್ಯಾಟಿಂಗ್, ಎಲ್ಎಸ್ಜಿ ಮಣಿಸಿದ ಗುಜರಾತ್ ಟೈಟಾನ್ಸ್ -
Asha Bhosle: ಭಾರತೀಯ ಸಿನಿಮಾ ರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ಇನ್ನಿಲ್ಲ, ಸಂಗೀತ ರಾಣಿ ಎಂದೇ ಖ್ಯಾತಿ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Vijay: ನಟ, ರಾಜಕಾರಣಿ ವಿಜಯ್ ಮಹತ್ವದ ಟ್ವೀಟ್ - ಅಪ್ರಬುದ್ಧ ರಾಜಕಾರಣಿ ಎಂದ ಡಿ.ಕೆ ಶಿವಕುಮಾರ್ Tamil Nadu Assembly Election -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್












Click it and Unblock the Notifications