ಮಂಗಳೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಿದ್ದರಾಮ್ಯಯ ಭೇಟಿಗೆ ಧರ್ಮಸ್ಥಳಕ್ಕೆ ತೆರಳಿದ ಪರಮೇಶ್ವರ್

By ಕಿರಣ್ ಸಿರ್ಸೀಕರ್
|
Google Oneindia Kannada News

ಮಂಗಳೂರು, ಜೂನ್ 24: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಲು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಧರ್ಮಸ್ಥಕ್ಕೆ ತೆರಳಿದ್ದಾರೆ.

ಧರ್ಮಸ್ಥಳ ಸಮೀಪದ ಶಾಂತಿವನ ಪ್ರಕೃತಿ ಚಿಕಿತ್ಸಾ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರನ್ನು ಭೇಟಿಯಾಗಲು ಪರಮೇಶ್ವರ್ ಅಲ್ಲಿಗೆ ತೆರಳಿದ್ದಾರೆ.

ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸಚಿವರ ಸ್ಥಾನಮಾನ?ಸಿದ್ದರಾಮಯ್ಯಗೆ ಕ್ಯಾಬಿನೆಟ್ ದರ್ಜೆ ಸಚಿವರ ಸ್ಥಾನಮಾನ?

ಬೆಂಗಳೂರಿನಿಂದ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪರಮೇಶ್ವರ್, ಅಲ್ಲಿಂದ ನೇರ ಧರ್ಮಸ್ಥಳಕ್ಕೆ ತೆರಳಿದರು.

Parameshwara went to Dharmasthala to meet Siddaramaiah

ಈ ಸಂದರ್ಭ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಪರಮೇಶ್ವರ್, "ಸಿದ್ದರಾಮಯ್ಯರನ್ನು ಭೇಟಿಯಾಗಲು ಬಂದಿದ್ದೇನೆ, ಇದೊಂದು ಖಾಸಗಿ ಭೇಟಿ," ಎಂದು ಹೇಳಿದರು. ನಾನು ಸಿದ್ದರಾಮಯ್ಯನವರನ್ನು ನೋಡಲು ಬಂದಿದ್ದೇನೆ ಎಂದವರು ಸ್ಪಷ್ಟಪಡಿಸಿದರು.

ಮೈತ್ರಿ ಸರಕಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಮೈತ್ರಿ ಸರಕಾರ ಸದೃಢವಾಗಿದೆ. ಮೈತ್ರಿ ಸರಕಾರದ ಬಜೆಟ್ ಮಂಡನೆ ಮಾಡಲಿದ್ದೇವೆ," ಎಂದು ಹೇಳಿದರು.

ಇಂದು ಸಂಜೆ ವೇಳೆಗೆ ಧರ್ಮಸ್ಥಳ ಪ್ರಕೃತಿ ಚಿಕಿತ್ಸಾಲಯದಲ್ಲಿರುವ ಸಿದ್ದರಾಮಯ್ಯ ಅವರನ್ನು ಪರಮೇಶ್ವರ್ ಭೇಟಿಯಾಗಿ ಚರ್ಚೆ ನಡೆಸಲಿದ್ದಾರೆ.

English summary
Deputy Chief Minister Dr. G. Parameshwara has gone to Dharmasthala to meet Former Chief Minister Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X