ಹಫ್ತಾ ದಂಧೆ: ಮಂಗಳೂರು ಮಂಗಳಮುಖಿಯರ ನಡುವೆ ಮಾರಾಮಾರಿ
ಮಂಗಳೂರು, ಫೆಬ್ರವರಿ 7: ಮಂಗಳಮುಖಿಯರನ್ನು ಒಗ್ಗೂಡಿಸಿ ಒಂದೇ ಸೂರಿನಡಿ ಅವರ ಸಮಸ್ಯೆಗಳಿಗೆ ಪರಿಹಾರ ಕಾಣುವ ಸಲುವಾಗಿ ಆರಂಭವಾದ ಪರಿವರ್ತನ ಚಾರಿಟೇಬಲ್ ಟ್ರಸ್ಟ್ ನಲ್ಲಿ ಇದೀಗ ಮಂಗಳಮುಖಿಯರ ನಡುವೆ ಹಣ ವಸೂಲಾತಿ ವಿಚಾರದಲ್ಲಿ ಉಂಟಾದ ಜಗಳಗಳು ಮಾರಾಮಾರಿಗೆ ತಿರುಗಿದೆ.
ರಾಜ್ಯದಲ್ಲೇ ಪ್ರಥಮಬಾರಿಗೆ ಈ ಸಂಘದ ಮಂಗಳಮುಖಿಯರಿಗಾಗಿ ಆಧಾರ್ ಕಾರ್ಡ್ ಮಾಡಿಕೊಡಲಾಗಿತ್ತು. ಇದಲ್ಲದೆ ಮಂಗಳಮುಖಿಯರಿಗೆ ಹಫ್ತಾ ತೆಗೆದುಕೊಳ್ಳಬಾರದು ಎಂದು ಅನೇಕ ಬಾರಿ ಸಂಘದ ಮುಖ್ಯಸ್ಥರು ಹೇಳಿದ್ದಾರೆ. ಆದರೆ, ಆ ಮಾತಿಗೆ ಕಿಮ್ಮತ್ತು ನೀಡದ ಮಂಗಳಮುಖಿಯರು ತಮ್ಮ ದಂಧೆಯನ್ನು ಮುಂದುವರಿಸಿದ್ದು ಮಾರಾಮಾರಿಗೆ ಕಾರಣವಾಗಿದೆ.

ವಸೂಲಿಗಳ ವಿಚಾರದಲ್ಲಿ ಈ ಪರಿವರ್ತನ ಚಾರಿಟೇಬಲ್ ಟ್ರಸ್ಟ್ ನಲ್ಲಿ ರಾಣಿ ಎನ್ನುವ ಮಂಗಳಮುಖಿ ಬಹಳ ಪ್ರಾಮುಖ್ಯತೆ ಪಡೆದಿದ್ದಾರೆ. ಈ ನಿಮಿತ್ತ ಅವರದೇ ಸಂಘದ ಇನ್ನೋರ್ವ ಮಂಗಳಮುಖಿ ಪ್ರಿಯಾ ಎಂಬುವರಿಗೆ ಮಾಸಿಕ 6000 ರು. ಹಫ್ತಾ ನೀಡಬೇಕು ಎಂದು ಬೆದರಿಸಿದ್ದಾರೆ.

ಇದಕ್ಕೆ ಪ್ರಿಯಾ ನಿರಾಕರಿಸಿದಾಗ ರಾಣಿಯವರು ತಮ್ಮ ಉಳಿದ ಸಂಘದ ಸದಸ್ಯರೊಂದಿಗೆ ಹೇಳಿ ಪ್ರಿಯಾ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಸಂದರ್ಭ ಗಾಯಗೊಂಡ ಪ್ರಿಯಾ ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಹಿಂದೆಯೂ ರಾಣಿಯವರಿಗೆ ಸಂಘದ ಮುಖ್ಯಸ್ಥರು ಹಫ್ತಾ ತೆಗೆದುಕೊಳ್ಳಬಾರದೆಂದು ಎಚ್ಚರಿಸಿದ್ದರು ಅದ್ಯಾವುದಕ್ಕೂ ಕ್ಯಾರೆ ಎನ್ನದೆ ರಾಣಿ ಹಫ್ತಾ ಕೇಳುವ ನೆಪದಲ್ಲಿ ನಿರಾಕರಿಸಿದ ಪ್ರಿಯಾ ಮೇಲೆ ಹಲ್ಲೆ ನಡೆಸಿದ್ದಾರೆ.
ಈ ಹಿನ್ನೆಲೆಯಲ್ಲಿ ಪ್ರಿಯಾ ಅವರು ಪಣಂಬೂರು ಠಾಣೆಯ ಪೊಲೀಸರಿಗೆ ಮಾಹಿತಿ ತಿಳಿಸಿದ್ದು ಅವರು ರಾಣಿಯವರ ಜತೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದ್ದಾರೆ. ಪ್ರಸ್ತುತ ರಾಣಿಯವರು ಬೆಂಗಳೂರಿನಲ್ಲಿದ್ದು ಬಂದ ನಂತರ ಪೊಲೀಸರು ತನಿಖೆ ನಡೆಸುವುದಾಗಿ ಪ್ರಿಯಾ ಅವರಿಗೆ ಭರವಸೆ ನೀಡಿದ್ದಾರೆ.

ಮಂಗಳಮುಖಿಯರಿಗೂ ಸಾಮಾನ್ಯ ಜನರಂತೆ ಬದುಕುವ ಹಕ್ಕಿದೆ , ಹೊಟ್ಟೆಪಾಡಿಗಾಗಿ ಭಿಕ್ಷಾಟನೆ ಮಾಡುತ್ತಾರೆ. ಈ ಎಲ್ಲಾ ವಾದಗಳೂ ಸರಿ. ಆದರೆ, ಅವರಲ್ಲೇ ಹಣ ವಸೂಲಿ, ಸುಲಿಗೆಯಂಥ ಕಾನೂನು ವಿರೋಧಿ ದಂಧೆಗಳು ಹುಟ್ಟಿಕೊಂಡರೆ, ಅವರಿಗಾಗಿ ರೂಪಿಸಲಾಗಿರುವ ಕಾರ್ಯಕ್ರಮಗಳು ಅರ್ಥ ಕಳೆದುಕೊಳ್ಳಲಿವೆ. ಹಾಗಾದಲ್ಲಿ, ಅದರ ಘೋರ ಪರಿಣಾಮವನ್ನು ಆ ಸಮುದಾಯವೇ ಅನುಭವಿಸಬೇಕಾಗುತ್ತದೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications