ಸಚಿವ ಯು ಟಿ ಖಾದರ್ ಕ್ಷೇತ್ರದಲ್ಲಿ ಅಕ್ರಮ ಮರಳು ದಂಧೆಕೋರರ ಅಟ್ಟಹಾಸ
ಮಂಗಳೂರು ಫೆಬ್ರವರಿ 02: ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಕ್ಷೇತ್ರ ದಲ್ಲಿ ಅಕ್ರಮ ಮರಳು ಮಾಫಿಯಾ ದಂಧೆ ಮಿತಿ ಮೀರುತ್ತಿದೆ.
ದಿನ ದಿಂದ ದಿನಕ್ಕೆ ಈ ಅಕ್ರಮ ದಂಧೆ ಕೋರರ ಅಟ್ಟಾಹಾಸ ಹೆಚ್ಚಾಗುತ್ತಿದೆ. ಸಚಿವರ ಕ್ಷೇತ್ರದಲ್ಲಿ ಸರ್ಕಾರ ಭರವಸೆಯಿಂದ ಕಾದು ಸುಸ್ತಾದ ಉಳಿಯ ಪಾವೂರು ಎಂಬಲ್ಲಿನ ಜನ ತಮ್ಮ ಗ್ರಾಮ, ಕ್ಕೆ ತಾವೇ ಸೇತುವೆ ನಿರ್ಮಿಸಿದ್ದರು .
ಮಂಗಳೂರು ವಿಧಾನಸಭಾಕ್ಷೇತ್ರ ವ್ಯಾಪ್ತಿಯ ಪಾವೂರು ಗ್ರಾಮಕ್ಕೆ ಒಳಪಡುವ ಉಳಿಯ, ನೇತ್ರಾವತಿ ನದಿಯ ಮಧ್ಯೆ ನೂರು ಎಕರೆಯಷ್ಟು ಇರುವ ಒಂದು ಸಣ್ಣ ದ್ವೀಪ ಪ್ರದೇಶ. ಈ ದ್ವೀಪದಲ್ಲಿ ಸುಮಾರು 50 ಮನೆಗಳಿದ್ದು, 200ಕ್ಕೂ ಹೆಚ್ಚು ನಿವಾಸಿಗಳಿದ್ದಾರೆ.

ದಶಕಗಳಿಂದ ಇಲ್ಲೊಂದು ಸೇತುವೆ ನಿರ್ಮಾಣ ಮಾಡಬೇಕೆಂದು ನಡೆಸಿಕೊಂಡು ಬಂದ ಹೋರಾಟಕ್ಕೆ ಲೆಕ್ಕವಿಲ್ಲ . ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಊರ ಜನರು ತಾವೇ ಹಣ ಸಂಗ್ರಹಿಸಿ ತಾತ್ಕಾಲಿಕ ಸೇತುವೆ ನಿರ್ಮಿಸಿದ್ದರು. ಆದರೆ ನಿನ್ನೆ ತಡರಾತ್ರಿ ಅಕ್ರಮ ಮರಳು ದಂಧೆಕೋರರು ಸೇತುವೆಯನ್ನು ಧ್ವಂಸ ಮಾಡಿದ್ದಾರೆ.
ಪರಿಸರದಲ್ಲಿ ಅಕ್ರಮ ಮರಳುಗಾರಿಕೆ ಬಗ್ಗೆ ದೂರು ನೀಡಿರೋದಕ್ಕೆ ಗ್ರಾಮದ ಜನರನ್ನೇ ಅಕ್ರಮ ದಂಧೆ ಕೋರರು ಟಾರ್ಗೆಟ್ ಮಾಡಿದ್ದಾರೆ. ದುಷ್ಕರ್ಮಿಗಳು ಕಾಲ್ಸೆತುವೆ ಮಾತ್ರವಲ್ಲದೆ. ಅಲ್ಲೆ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಗ್ರಾಮದ ಜನರ ಆಟೋ,ಬೈಕ್ ಗಳನ್ನು ಧ್ವಂಸ ಮಾಡಿದ್ದಾರೆ.

ನಿನ್ನೆ ತಡರಾತ್ರಿ ದುಷ್ಕರ್ಮಿಗಳು ಕೃತ್ಯ ನಡೆಸಿದ್ದಾರೆ.ನದಿಯಿಂದ ಅಕ್ರಮ ಮರಳು ತೆಗೆಯೋದರ ಬಗ್ಗೆ ಸ್ಥಳೀಯರು ಅಧಿಕಾರಿಗಳಿಗೆ ದೂರು ನೀಡಿದ್ದು,ನಿನ್ನೆ ಬೆಳಗ್ಗೆ ಅಧಿಕಾರಿಗಳು 5 ಬೋಟ್ ವಶಪಡಿಸಿಕೊಂಡಿದ್ದರು.ಇದರ ದ್ವೇಷವನ್ನು ಗ್ರಾಮದ ಜನರ ಮೇಲೆ ತೀರಿಸಿರುವ ದಂಧೆಕೋರರು,ಜನರೇ ನಿರ್ಮಿಸಿದ ಸೇತುವೆಯನ್ನು ಧ್ವಂಸ ಮಾಡಿದ್ದಾರೆ .
ಸೇತುವೆ ಪಕ್ಕ ನಿಲ್ಲಿಸಿದ್ದ ಆಟೋ ರಿಕ್ಷಾ ಬೈಕ್ ಗಳನ್ನು ಪುಡಿ ಪುಡಿ ಮಾಡಿದ್ದಾರೆ.ಸಚಿವ ಯುಟಿ ಖಾದರ್ ಕ್ಷೇತ್ರದಲ್ಲೇ ಈ ಕೃತ್ಯ ನಡೆದಿದ್ದು ಅವ್ಯಾಹತವಾಗಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ಬಗ್ಗೆ ಪ್ರಶ್ನೆ ಎತ್ತಿದ್ದಕ್ಕೆ,ದಂಧೆಕೋರರು ದಾಳಿ ನಡೆಸಿದ್ದು ಗ್ರಾಮದ ಜನರನ್ನು ಆತಂಕಕ್ಕೆ ದೂಡಿದೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications