ಝಾಕಿರ್ ನಾಯಕ್ ಬೆಂಬಲಿಸಿ ಮಂಗಳೂರಿನಲ್ಲಿ ಪ್ರತಿಭಟನೆ
ಮಂಗಳೂರು, ಜುಲೈ 14 : ಇಸ್ಲಾಂ ಪ್ರವಚನಕಾರ, ಇಸ್ಲಾಮಿಕ್ ರಿಸರ್ಚ್ ಫೌಂಡೇಷನ್ನ ಸಂಸ್ಥಾಪಕ ಮತ್ತು ಅಧ್ಯಕ್ಷ ಡಾ. ಝಾಕಿರ್ ನಾಯಕ್ ವಿರುದ್ಧದ ಪಕ್ಷಪಾತೀಯ ಮಾಧ್ಯಮ ವಿಚಾರಣೆಯನ್ನು ನಿಲ್ಲಿಸಿ ಎಂದು ಆಗ್ರಹಿಸಿ ಹಲವಾರು ಮುಸ್ಲಿಂ ಸಂಘಟನೆಗಳು ಶುಕ್ರವಾರ ಮಂಗಳೂರಿನಲ್ಲಿ ಶಾಂತಿಯುತ ಪ್ರತಿಭಟನೆಯನ್ನು ಹಮ್ಮಿಕೊಂಡಿವೆ.
ಮುಂಬೈನ ಇಸ್ಲಾಂ ಧಾರ್ಮಿಕ ವಿದ್ವಾಂಸ ಡಾ. ಝಾಕಿರ್ ನಾಯಕ್ ಅವರ ಬಗ್ಗೆ ಮಾಧ್ಯಮಗಳಲ್ಲಿ ನಡೆಸಲಾಗುತ್ತಿರುವ ಅಪಪ್ರಚಾರವನ್ನು ಖಂಡಿಸಿ ಜುಲೈ 15ರಂದು ಮುಸ್ಲಿಮ್ ಸಂಘಟನೆಗಳ ವೇದಿಕೆ ವತಿಯಿಂದ ಬೃಹತ್ ಪ್ರತಿಭಟನೆ ನಡೆಯಲಿದೆ. [ಝಾಕೀರ್ ನಾಯ್ಕ್ ತಲೆಗೆ ಬೆಲೆ ಕಟ್ಟಿದ ಸಾಧ್ವಿ ಪ್ರಾಚಿ]
ಜಗತ್ತಿನ ಪ್ರತಿಯೊಬ್ಬ ಮುಸ್ಲಿಂನು ಭಯೋತ್ಪಾದಕನಾಗಬೇಕು, ಮುಸ್ಲಿಂ ಮಹಿಳಾ ಆಯಾಗಳೊಂದಿಗೆ ಲೈಂಗಿಕ ಕ್ರಿಯೆ ನಡೆಸಲು ಪ್ರತಿ ಪುರುಷನಿಗೆ ಹಕ್ಕಿದೆ ಮುಂತಾದ ವಿವಾದಾತ್ಮಕ ಹೇಳಿಕೆ ನೀಡಿ ಝಾಕಿರ್ ವಿವಾದಕ್ಕೆ ಗುರಿಯಾಗಿದ್ದರು. ಬಾಂಗ್ಲಾ ದೇಶದಲ್ಲಿ ರಂಜಾನ್ ದಿನ ನಡೆದ ರಕ್ತದೋಕುಳಿಯ ಹಿಂದೆ ಝಾಕಿರ್ ಮಾತಿನ ಪ್ರಚೋದನೆಯಿತ್ತು ಎಂದು ಆರೋಪಿಸಲಾಗಿದೆ.

ಜು.15ರಂದು ಅಪರಾಹ್ನ 3 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಯಲಿದೆ. ಪ್ರತಿಭಟನಾ ಸಭೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಂಘಟನೆಗಳ ಒಕ್ಕೂಟದ ಸಂಚಾಲಕ ಅತಾವುಲ್ಲಾ ಜೋಕಟ್ಟೆ, ಪುತ್ತೂರು ಕೇಂದ್ರ ಜುಮಾ ಮಸೀದಿಯ ಖತೀಬ್ ಎಸ್.ಬಿ. ದಾರಿಮಿ, ಪಿಎಫ್ಐನ ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಜಮಾ ಅತೇ ಇಸ್ಲಾಮೀ ಹಿಂದ್ನ ಮುಹಮ್ಮದ್ ಕುಂಞಿ, ಸೌತ್ ಕರ್ನಾಟಕ ಸಲಫಿ ಮೂವ್ಮೆಂಟ್ನ ಇಸ್ಮಾಯಿಲ್ ಶಾಫಿ, ದ.ಕ. ಜಿಲ್ಲಾ ಸೆಂಟ್ರಲ್ ಕಮಿಟಿಯ ಹಮೀದ್ ಕಂದಕ್ ಭಾಗವಹಿಸಲಿದ್ದಾರೆ.
ಇವರಲ್ಲದೆ, ಜಮೀಯತುಲ್ ಫಲಾಹ್ನ ಹಾಜಿ ಅಬ್ದುಲ್ಲತೀಫ್, ಯುನಿವೆಫ್ ಕರ್ನಾಟಕದ ರಫೀವುದ್ದೀನ್ ಕುದ್ರೋಳಿ, ದ.ಕ. ಜಿಲ್ಲಾ ಎಸ್ಡಿಪಿಐ ಮುಖಂಡ ಹನೀಫ್ ಖಾನ್ ಕೊಡಾಜೆ, ಮುಸ್ಲಿಂ ಸಂಘಟನೆಗಳ ಒಕ್ಕೂಟದ ಕೆ. ಅಶ್ರಫ್, ಮುಸ್ಲಿಂ ಐಕ್ಯತಾ ವೇದಿಕೆಯ ಮುಸ್ತಫಾ ಕೆಂಪಿ, ಮಂಗಳೂರು ಸೆಂಟ್ರಲ್ ಕಮಿಟಿಯ ಅಝೀಝ್ ಕುದ್ರೋಳಿ, ಟ್ಯಾಲೆಂಟ್ ರಿಸರ್ಚ್ ಫೌಂಡೇಶನ್ನ ರಫೀಕ್ ಮಾಸ್ಟರ್, ಮುಸ್ಲಿಂ ಲೇಖಕರ ಸಂಘದ ಉಮರ್ ಯು.ಎಚ್., ಹೋಪ್ ಫೌಂಡೇಶನ್ನ ಸೈಫ್ ಸುಲ್ತಾನ್ ಮತ್ತಿತರರು ಭಾಗವಹಿಸಿ ಮಾತನಾಡಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
-
Ration: ಪಡಿತರ ಚೀಟಿದಾರರಿಗೆ ಭರ್ಜರಿ ಗುಡ್ ನ್ಯೂಸ್ ಕೊಟ್ಟ ಕೇಂದ್ರ ಸರ್ಕಾರ -
ಆರ್ಸಿಬಿ ಮತ್ತೆ ಚಾಂಪಿಯನ್ ಆಗೋದು ಫಿಕ್ಸ್, ಹ್ಯಾಜಲ್ವುಡ್ ಅಲಭ್ಯತೆ ತಂಡಕ್ಕೆ ವರದಾನ ಎಂದ ಆರ್.ಅಶ್ವಿನ್ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ












Click it and Unblock the Notifications