ಪೇಜಾವರ ಶ್ರೀಗಳು ಹಿಂದೂಗಳ ಕ್ಷಮೆಯಾಚಿಸಬೇಕು - ಪ್ರವೀಣ್ ವಾಲ್ಕೆ
ಮಂಗಳೂರು , ಜೂನ್ 29: ಉಡುಪಿ ಶ್ರೀಕೃಷ್ಣ ಮಠದಲ್ಲಿ ಇಫ್ತಾರ್ ಕೂಟ ಆಯೋಜಿಸಿದ ಕಾರಣ ಮಠದ ಪಾವಿತ್ರ್ಯತೆಗೆ ಧಕ್ಕೆ ಉಂಟಾಗಿದೆ. ಪೇಜಾವರ ಶ್ರೀಗಳು ಹಿಂದೂ ಸಮಾಜದೆದುರು ಬಹಿರಂಗ ಕ್ಷಮೆಯಾಚಿಸಬೇಕು ಎಂದು ಶ್ರೀರಾಮ ಸೇನೆ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರವೀಣ್ ವಾಲ್ಕೆ ಹೇಳಿದ್ದಾರೆ.
ಮಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಾಲ್ಕೆ, "ಇಫ್ತಾರ್ ಕೂಟ ಆಯೋಜನೆ ವಿರೋಧಿಸಿ ಜುಲೈ 2 ರಂದು ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುವುದು," ಎಂದು ಹೇಳಿದರು.













Click it and Unblock the Notifications