ಅಯೋಧ್ಯೆ ರಾಮಮಂದಿರದಲ್ಲಿ ಸೇವೆಗಳಿಲ್ಲ,ಅಶಕ್ತರಿಗೆ ದಾನ ಮಾಡುವುದೇ ರಾಮ ಸೇವೆ- ಪೇಜಾವರ ಶ್ರೀ
ಮಂಗಳೂರು, ಜೂನ್ 26: ಜನವರಿ ಮಕರ ಸಂಕ್ರಾಂತಿ ಬಳಿಕ ರಾಮ ಮಂದಿರ ಲೋಕಾರ್ಪಣೆಯಾಗಲಿದೆ. ಅಯೋಧ್ಯೆ ರಾಮ ಮಂದಿರದಲ್ಲಿ ಯಾವುದೇ ಸೇವೆಗಳಿಲ್ಲ. ರಾಮನ ಹೆಸರಲ್ಲಿ ಭಕ್ತರು ಮಾಡುವ ದಾನಗಳೇ ರಾಮನ ಸೇವೆ ಎಂದು ಮಂಗಳೂರಿನಲ್ಲಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ಮಂಗಳೂರಿನ ಹಿರಿಯ ವಿದ್ವಾಂಸ ಕಲ್ಕೂರ ಪ್ರದೀಪ್ ಭಟ್ ಅವರ ಮನೆಯಲ್ಲಿ ತುಲಾಭಾರ ಸೇವೆ ಸ್ವೀಕರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಯೋಧ್ಯೆ ರಾಮಮಂದಿರ ನಿರ್ಮಾಣ ಭರದಿಂದ ಸಾಗುತ್ತಿದೆ. ಪ್ರಥಮ ಹಂತದ ಕಾಮಗಾರಿ ಈಗಾಗಲೇ ಮುಕ್ತಾಯದ ಹಂತದಲ್ಲಿದೆ. ಮುಂದಿನ ಮಕರ ಸಂಕ್ರಾಂತಿ ಕಳೆದ ಬಳಿಕ ಮಂದಿರ ಲೋಕಾರ್ಪಣೆಯಾಗಲಿದೆ ಎಂದರು.

ರಾಮ ಪ್ರತಿಮೆ ನಿರ್ಮಾಣ ಕಾರ್ಯ ಕೂಡಾ ಭರದಿಂದ ಸಾಗುತ್ತಿದೆ. ನಮ್ಮ ಕನಸು ರಾಮಮಂದಿರ ಅಲ್ಲ, ರಾಮ ರಾಜ್ಯದ ಕನಸು. ಈ ಕನಸಿನ ಸಾಕಾರ ಮಾಡೋದು ರಾಮ ದೇವರಿಗೆ ಕೊಡುವ ಕಾಣಿಕೆ. ಬದುಕಿನಲ್ಲಿ ಒಂದು ಬಾರಿ ಅಶಕ್ತರಿಗೆ ದಾನ ಮಾಡೋಣ. ಅಯೋಧ್ಯೆಯಲ್ಲಿ ರಾಮನ ಮುಂದೆ ದಾನವನ್ನು ಅರ್ಪಿಸೋಣ ಎಂದು ಪೇಜಾವರ ಶ್ರೀ ಹೇಳಿದರು.
ಬಡವರಿಗೆ ಉಚಿತ ಚಿಕಿತ್ಸೆ, ಅರ್ಹ ವಿದ್ಯಾರ್ಥಿಗೆ ಚಿಕಿತ್ಸೆಯೋ ಅಥವಾ ದತ್ತು ಪಡೆಯುವ ಮೂಲಕ ರಾಮಸೇವೆ ಮಾಡೋಣ. ಈ ಮೂಲಕ ರಾಮ ರಾಜ್ಯದ ಕನಸನ್ನು ನನಸು ಮಾಡೋಣ. ಭಾರತದಂತಹ ನೆಲದಲ್ಲಿ ಗೋಹತ್ಯೆ ಆಗಬಾರದು. ಸರ್ಕಾರ ಗೋಹತ್ಯೆ ನಿಷೇಧವನ್ನು ಹಿಂಪಡೆಯುವ ದುಸ್ಸಾಹಸಕ್ಕೆ ಕೈ ಹಾಕಬಾರದು. ಹಿಂದೂ ಸಂಘಟನೆಗಳು ಗೋಹತ್ಯೆಯನ್ನು ತಡೆಯಬೇಕು. ಆದರೆ ಪೊಲೀಸರ ಮೂಲಕ ಈ ಹತ್ಯೆಯನ್ನು ತಡೆಯಬೇಕು ಎಂದು ಕರೆ ನೀಡಿದರು.
ಕದ್ರಿಯ ಮಂಜುಪ್ರಸಾದ ಇಂದು ವೃಕ್ಷ, ಬೀಜ, ಸಸಿಗಳಿಂದ ಮಾಡಿರುವ ವಿಶೇಷ ತುಲಾಭಾರಕ್ಕೆ ಸಾಕ್ಷಿಯಾಯಿತು. ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಅವರು ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿಯವರಿಗೆ ವೃಕ್ಷ, ಬೀಜ, ಸಸಿಗಳಿಂದ ತುಲಾಭಾರ ಮಾಡಿ ಈ ವಿನೂತನ ಪರಂಪರೆಗೆ ನಾಂದಿ ಹಾಡಿದರು. ಹಲಸು, ಮಾವು, ಹರಿವೆ, ಅಲಸಂಡೆ, ಹಾಗಲ, ತುಂಬೆ ಮುಂತಾದ ಸಸಿಗಳಿಂದ ತುಲಾಭಾರ ನೆರವೇರಿತು. ಪ್ರದೀಪ್ ಕುಮಾರ್ ಕಲ್ಕೂರ ಅವರಲ್ಲದೆ ಭಕ್ತರೂ ತುಲಾಭಾರಕ್ಕೆ ಸಸಿಗಳಿಂದ ತಂದಿದ್ದರು. ತುಲಾಭಾರದ ಬಳಿಕ ಈ ಗಿಡಗಳನ್ನು ಭಕ್ತರಿಗೆ ಹಂಚಲಾಯಿತು. ತುಲಾಭಾರ ಸೇವೆಯ ಬಳಿಕ ಭಕ್ತರಿಗೆ ಸ್ವಾಮೀಜಿ ಆಶೀರ್ವಚನ ನೀಡಿದ್ದಾರೆ.

ಜುಲೈ 2ರಿಂದ ಮೈಸೂರಿನ ಕುವೆಂಪು ನಗರದಲ್ಲಿ ಚಾತುರ್ಮಾಸ ಕೈಗೊಳ್ಳಲಿದ್ದೇನೆ. ಮೈಸೂರಿನಲ್ಲಿ ಮಳೆಗಾಲದ ನಾಲ್ಕು ತಿಂಗಳು ಚಾತುರ್ಮಾಸ ಕೈಗೊಳ್ಳಲಿದ್ದೇನೆ. ಪರಿಸರ ರಕ್ಷಣೆ ಮಾಡುವ ದೊಡ್ಡ ಹೊಣೆ ನಮಗಿದೆ. ಮರಗಳಿಂದ ಹಣ್ಣು-ನೆರಳು ಸಿಗುತ್ತದೆ. ಮುಖ್ಯವಾಗಿ ಪ್ರಾಣವಾಯು ಈ ಪರಿಸರದಿಂದ ಸಿಗುತ್ತದೆ. ಕೋವಿಡ್ ಸಂದರ್ಭದಲ್ಲಿ ಈ ಪ್ರಾಣ ವಾಯುವಿನ ಮಹತ್ವವನ್ನು ಅರಿತಿದ್ದೇವೆ ಆದರೆ ನಾವು ನಮ್ಮ ಕೈಯಾರೆ ಪ್ರಾಣವಾಯುವನ್ನು ಹಾಳು ಮಾಡುತ್ತಿದ್ದೇವೆ. ದ್ವಿ ಚಕ್ರವಾಹನ ಬಳಸುವವರು ಎರಡು ಗಿಡಗಳನ್ನು ನೆಡೆಬೇಕು.
ನಾಲ್ಕು ಚಕ್ರವಾಹನ ಬಳಸುವವರು ನಾಲ್ಕು ಗಿಡ ನೆಡಬೇಕು. ಎಸಿ ಬಳಸುವವರು ಮತ್ತಷ್ಟು ಗಿಡಗಳನ್ನು ನೆಡಬೇಕು. ಮರ ನೆಡದವರಿಗೆ ಬದುಕುವ ಹಕ್ಕಿಲ್ಲ, ಸಾಯುವ ಹಕ್ಕೂ ಇಲ್ಲ. ಕಲ್ಕೂರ ಪ್ರತಿಷ್ಠಾನ ಗಿಡಗಳಿಂದ ತುಲಾಭಾರ ನಡೆಸಿರೋದು ಸಂತೋಷದ ವಿಚಾರ. ನಾವು ಪರಿಸರದ ರಕ್ಷಣೆಯನ್ನು ಮಾಡೋಣ ಎಂದು ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications