ರಾಮಮಂದಿರ ಉದ್ಘಾಟನೆ ಆಹ್ವಾನ ವಿವಾದ: ನಿಜಾಂಶ ತಿಳಿಸಿ ತಿರುಗೇಟು ನೀಡಿದ ಪೇಜಾವರ ಶ್ರೀ
ಮಂಗಳೂರು, ಡಿಸೆಂಬರ್ 30: ಕರೆದಿಲ್ಲ ಅಂದರೆ ಕರೆದಿಲ್ಲ ಅನ್ನೋದೇ ದೊಡ್ಡ ಆಕ್ಷೇಪ. ಕರೆದ ಬಳಿಕ ನಾವು ತಿರಸ್ಕರಿಸುತ್ತೇವೆ ಅನ್ನೋದೇ ದೊಡ್ಡ ಹೆಗ್ಗಳಿಕೆ. ರಾಮ ಭಾರತೀಯರೆಲ್ಲರಿಗೂ ಸೇರಿದವನು. ಯಾರಿಗೆ ಬರಬೇಕೆಂದು ಅಪೇಕ್ಷೆ ಇದೆ ಅವರೆಲ್ಲರೂ ಬರಬಹುದು. ಆಹ್ವಾನ ಇಲ್ಲದೆಯೂ ರಾಮಮಂದಿರಕ್ಕೆ ಬರಬಹುದು. ತಿರಸ್ಕಾರ ಮಾಡೋದು ಅವರವರಿಗೆ ಬಿಟ್ಟದ್ದು. ಕಾಮಾಲೆ ಕಣ್ಣಿಗೆ ಕಾಣೋದೆಲ್ಲಾ ಹಳದಿ. ರಾಜಕೀಯ ಟೀಕೆಗಳಿಗೆ ಉತ್ತರ ಕೊಡುವುದಿಲ್ಲ ಎಂದು ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದ್ದಾರೆ.
ರಾಮಮಂದಿರದ ಉದ್ಘಾಟನೆ ವೇಳೆ ಸ್ವಾಮೀಜಿಗಳಿಗೆ ಆಹ್ವಾನ ನೀಡುವಲ್ಲಿ ತಾರತಮ್ಯ ಎಸಗಲಾಗಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಲ್ಲಿರುವ ಸ್ಥಳಾವಕಾಶ ಅಲ್ಪವಾದದ್ದು. ಅಬ್ಬಬ್ಬಾಂದ್ರೆ 7-8 ಸಾವಿರ ಜನ ಸೇರಬಹುದು. ಲೋಕದಲ್ಲಿ ಮಹಾತ್ಮರು ಗೌರವಾನಿತ್ವರು ಬಹಳ ಮಂದಿ ಇದ್ದಾರೆ. ಯಾರನ್ನು ಕರೆದರೂ ಆಕ್ಷೇಪ ಇರುವಂತಹದ್ದೇ. ಪರಿಸ್ಥಿತಿ ಅವಕಾಶವನ್ನು ಗಮನಿಸಿಕೊಂಡು ಸಮಾಧಾನಪಡಬೇಕು. ಪ್ರಾತಿನಿಧ್ಯವನ್ನು ಆಧರಿಸಿ ಆಹ್ವಾನವನ್ನು ನೀಡಿದ್ದೇವೆ. ಆಹ್ವಾನ ನೀಡದಿರುವ ಬಗ್ಗೆ ಮಂದಿರ, ಟ್ರಸ್ಟ್, ವ್ಯಕ್ತಿಗೆ ಸ್ವಾರ್ಥ, ಲಾಭ ಯಾವುದೂ ಇಲ್ಲ. ಎಲ್ಲರನ್ನೂ ಸಮಾಧಾನಪಡಿಸಲು ಸಾಧ್ಯವಿಲ್ಲ. ಎಲ್ಲರೂ ಈ ವಿಚಾರವನ್ನು ಗಮನದಲ್ಲಿಟ್ಟುಕೊಂಡು ಶಾಂತರಾಗಬೇಕು ಎಂದರು.

ಕಲ್ಲಡ್ಕ ಪ್ರಭಾಕರ್ ವಿರುದ್ಧ ಜಾಮೀನು ರಹಿತ ಪ್ರಕರಣದ ಬಗ್ಗೆ ಮಾತನಾಡಿದ ಅವರು, ಒಬ್ಬರ ಕಡೆಯಿಂದ ಏನೂ ತಪ್ಪು ಆಗದಿದ್ದರೂ ತಪ್ಪು ಎಂದು ಭಾರೀ ಪ್ರತಿಭಟನೆ. ಇನ್ನೊಂದು ಕಡೆಯಿಂದ ಏನೇ ತಪ್ಪಾದರೂ ಕಣ್ಮುಚ್ಚಿ, ಬಾಯಿಮಚ್ಚಿ ಇರುವುದು. ಇಂತಹ ನಡೆ ಸರಿಯಲ್ಲ. ಕಲ್ಲಡ್ಕ ಪ್ರಭಾಕರ ಭಟ್ಟರ ಹೇಳಿಕೆ ವ್ಯಕ್ತಿಗತವಾಗಿದ್ದು. ನಾನು ಆ ಬಗ್ಗೆ ಯಾವುದೇ ಅಭಿಪ್ರಾಯ ಕೊಡುವುದು ಸರಿಯಲ್ಲ ಎಂದು ಸ್ವಾಮೀಜಿ ಹೇಳಿದರು.
ಮಂಗಳೂರಿನಲ್ಲಿ ವಿಶ್ವೇಶತೀರ್ಥ ನಮನ ಕಾರ್ಯಕ್ರಮ
ಉಡುಪಿ ಪೇಜಾವರದ ಹಿರಿಯ ಶ್ರೀ ಹರಿಪಾದ ಸೇರಿ ನಾಲ್ಕು ವರ್ಷ ಪೂರ್ಣವಾದ ಹಿನ್ನಲೆಯಲ್ಲಿ ಮಂಗಳೂರಿನ ಮಲ್ಲಿಕಾ ಬಡವಾಣೆಯ ಮಂಜೂಪ್ರಾಸಾದ ನಿಲಯದಲ್ಲಿ ಪೇಜಾವರ ವಿಶ್ವೇಶತೀರ್ಥ ನಮನ ಕಾರ್ಯಕ್ರಮ ನಡೆದಿದೆ. ಈ ಕಾರ್ಯಕ್ರಮದಲ್ಲಿ ಪೇಜಾವರ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ, ಶಿರೂರು ಮಠದ ಶ್ರೀ ವೇದವರ್ಧನ ಸ್ವಾಮೀಜಿ, ಚಿತ್ರಾಪುರ ಮಠದ ವಿದ್ಯೇಂದ್ರತೀರ್ಥ ಸ್ವಾಮೀಜಿ ಭಾಗವಹಿಸಿದ್ದಾರೆ. ಕಲ್ಕೂರ ಪ್ರತಿಷ್ಠಾನದ ಪ್ರದೀಪ್ ಕುಮಾರ್ ಕಲ್ಕೂರ ಅವರ ಮಂಜೂಪ್ರಾಸಾದ ನಿಲಯದಲ್ಲಿ ಈ ಕಾರ್ಯಕ್ರಮ ನಡೆದಿದೆ.
ಈ ಕಾರ್ಯಕ್ರಮದಲ್ಲಿ ಮಾತನಾಡಿದ ಪೇಜಾವರ ಶ್ರೀ, "ರಾಮಮಂದಿರದ ಕನಸು ನನಸಾಯ್ತು. ರಾಮ ರಾಜ್ಯದ ಕನಸು ನನಸಾಗಬೇಕಿದೆ. ರಾಮ ರಾಜ್ಯದಲ್ಲಿ ದುರ್ಭೀಕ್ಷೆಯಿಲ್ಲ. ಆದ್ದರಿಂದ ದೀನದಲಿತರು, ದುರ್ಬಲರಿಗೆ ಮನೆಕಟ್ಟಿ ಕೊಡುವ ಕೆಲಸ ಮಾಡೋಣ. ರಾಮ ಮಂದಿರದ ಟ್ರಸ್ಟ್ಗೆ ಯಾವಾಗ ನಮ್ಮನ್ನು ಸೇರಿಸಿದರೋ ಅಂದಿನಿಂದ ನಾವು ಈ ಕಾರ್ಯವನ್ನು ಮಾಡುತ್ತಿದ್ದೇವೆ. ಉಡುಪಿಯಲ್ಲಿ ಅನೇಕರಿಗೆ ಮಾರ್ಗದರ್ಶನ ಮಾಡಿದ್ದೇವೆ. ಈ ನಿಟ್ಟಿನಲ್ಲಿ ನೂರಾರು ಮನೆಗಳ ನಿರ್ಮಾಣಕ್ಕೆ ಯೋಜನೆ ಹಾಕಿಕೊಳ್ಳಲಾಗಿದೆ" ಎಂದು ಹೇಳಿದರು.
"ಅಯೋಧ್ಯೆ ರಾಮಮಂದಿರದಲ್ಲಿ ಸೇವಾ ಲಿಸ್ಟ್ ಇಲ್ಲ. ಶ್ರೀ ರಾಮನೇ ದೇಶ ಸೇವೆ ಹೇಗೆ ಮಾಡಬೇಕೆಂದು ತೋರಿಸಿಕೊಟ್ಟಿದ್ದಾನೆ. ರಾಮಭಕ್ತಿ ಬೇರೆಯಲ್ಲ, ದೇಶಭಕ್ತಿ ಬೇರೆಯಲ್ಲ. ಈ ಹಿನ್ನೆಲೆಯಲ್ಲಿ ದೇಶ ಸೇವೆಯಲ್ಲ ರಾಮ ಸೇವೆ ಬೇರೆಯಲ್ಲ. ಆದ್ದರಿಂದ ರಾಮ ಸೇವೆ ಮಾಡ ಬಯಸುವವರು ದೇಶ ಸೇವೆ ಮಾಡೋಣ. ಈ ಹಿನ್ನೆಲೆಯಲ್ಲಿ ಅಭಿಯಾನವನ್ನಾಗಿ ಮಾಡುತ್ತೇವೆ. ಇದನ್ನೊಂದು ಟ್ರಸ್ಟ್ ನಂತೆ ಮಾಡಿ ಜಿಲ್ಲೆ ಜಿಲ್ಲೆಗಳಲ್ಲಿ ಸಮಿತಿಗಳನ್ನು ಮಾಡಿ ಯಾವ ಟ್ರಸ್ಟ್ಗೂ ಡೊನೇಷನ್ ಕೊಡದೆ ಈ ಮನೆ ನಿರ್ಮಾಣ ಕಾರ್ಯ ಮಾಡಲಾಗುತ್ತದೆ" ಎಂದು ಹೇಳಿದ್ದಾರೆ.
ಕಾರ್ಯಕ್ರಮದಲ್ಲಿ ಡಾ.ಮೋಹನ್ ಆಳ್ವ, ಸಾಹಿತಿ ಲಕ್ಷ್ಮೀಶ್ ತೋಳ್ಪಾಡಿ, ಉದ್ಯಮಿ ಶಿವರಾಮ್ ಬಂಡಾರಿ ಸೇರಿದಂತೆ ಹಲವು ಮಂದಿಗೆ ಪೇಜಾವರ ಶ್ರೀ ಜೀವಮಾನ ಶ್ರೇಷ್ಠ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಕಾರ್ಯಕ್ರಮದ ಮೊದಲು ಪೇಜಾವರ ಶ್ರೀ ದೇಸಿ ತಳಿಗಳಿಗೆ ಗೋಪೂಜೆ ಮಾಡಿದ್ದಾರೆ.
-
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ












Click it and Unblock the Notifications