ಸಿದ್ದರಾಮಯ್ಯ ಕಾಂಗ್ರೆಸ್ ಪಕ್ಷಕ್ಕೆ ಶನಿ ಇದ್ದಂತೆ-ಜನಾರ್ದನ ಪೂಜಾರಿ
ಸಿದ್ದರಾಮಯ್ಯ ಕಾಂಗ್ರೆಸ್ ಗೆ ಶನಿ ಇದ್ದಂತೆ. ಅವರು ಪಕ್ಷ ತೊರೆಯದೇ ಇದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ ಅಂತ ಜನಾರ್ದನ ಪೂಜಾರಿ ಮಂಗಳೂರಿನಲ್ಲಿ ಹೇಳಿದ್ದಾರೆ.
ಮಂಗಳೂರು, ಜನವರಿ 30: ಎಸ್ ಎಂ ಕೃಷ್ಣಾ ರಾಜೀನಾಮೆ ಕಾಂಗ್ರೆಸ್ ನಾಯಕರಲ್ಲಿ ಅಪಸ್ವರಕ್ಕೆ ಖಾರಣವಾಗಿದೆ. ಮಂಗಳೂರಿನಲ್ಲಿ ಮಾತನಾಡಿದ ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಕಾಂಗ್ರೆಸ್ ಪಕ್ಷ ಗಂಡಾಂತರಕ್ಕೆ ಸಿಲುಕಲಿದೆ ಎಂದು ಹೇಳಿದ್ದಾರೆ.
"ಎಸ್. ಎಂ ಕೃಷ್ಣ ರಾಜೀನಾಮೆಯಿಂದ ಕಾಂಗ್ರೆಸ್ಸಿಗೆ ಬಲು ದೊಡ್ಡ ನಷ್ಟವಾಗಿದೆ. ಪಕ್ಷದಲ್ಲಿ ಅವರನ್ನು ಕಡೆಗಣನೆ ಮಾಡಿದ್ದು ಸರಿಯಲ್ಲ. ಕೃಷ್ಣ ನಿನ್ನೆ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದರಲ್ಲಿ ಯಾವ ತಪ್ಪೂ ಇಲ್ಲ," ಎಂದಿದ್ದಾರೆ. ಆದರೆ ಕೃಷ್ಣ ರಾಜಿನಾಮೆ ನೀಡಿದ್ದು ಸರಿಯಲ್ಲ ಎಂದು ಪೂಜಾರಿ ವಿಶ್ಲೇಷಿಸಿದ್ದಾರೆ.

"ನೀವು ತಪ್ಪು ಮಾಡಿದಿರಿ. ನೀವು ಪಕ್ಷ ತೊರೆದಿದ್ದು ಸರಿ ಅಲ್ಲ. ನಾವಿಬ್ಬರು ಜೊತೆಯಾಗಿ ಹೋರಾಟ ಮಾಡಬಹುದಿತ್ತು," ಎಂದು ಕೃಷ್ಣರನ್ನು ಉದ್ದೇಶಿಸಿ ಪೂಜಾರಿ ಹೇಳಿದ್ದಾರೆ. "ರಾಜ್ಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ದುರಂಹಕಾರ ಮಿತಿ ಮೀರಿದೆ. ಸಿಧ್ಧರಾಮಯ್ಯ ಕಾಂಗ್ರೆಸ್ ಗೆ ಶನಿ ಇದ್ದಂತೆ. ಅವರು ಪಕ್ಷ ತೊರೆಯದೇ ಇದ್ದರೆ ಕಾಂಗ್ರೆಸ್ ಗೆ ಉಳಿಗಾಲವಿಲ್ಲ," ಎಂದು ಸಿದ್ಧರಾಮಯ್ಯ ವಿರುದ್ಧ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.
"ಜಾಫರ್ ಶರೀಫ್, ಪ್ರಕಾಶ್ ಹುಕ್ಕೇರಿ ಪಕ್ಷ ಬಿಡಬಾರದ. ಯಾರೂ ಹಿರಿಯ ನಾಯಕರು ಪಕ್ಷ ತೊರೆಯಬಾರದು. ಎಲ್ಲರೂ ಜೊತೆಯಾಗಿ ಹೋರಾಟ ಮಾಡೋಣ. ಮುಖ್ಯಮಂತ್ರಿಯ ಸೊಕ್ಕನ್ನು ಮುರಿಯೋಣ," ಎಂದು ಈ ಸಂದರ್ಭದಲ್ಲಿ ಜನಾರ್ಧನ ಪೂಜಾರಿ ಕರೆ ನೀಡಿದರು.
"ಎಸ್ ಎಂ ಕೃಷ್ಣ ಅವರೆ ನೀವು ಆತುರದಲ್ಲಿದ್ದೀರಿ. ನೀವು ಸೋನಿಯಾ ಗಾಂಧಿ ಮಾತನ್ನೂ ಕೇಳಲಿಲ್ಲ. ನೀವು ಸೋನಿಯಾ ಮಾತನ್ನು ಅರ್ಥವೂ ಮಾಡಿಕೊಳ್ಳಲಿಲ್ಲ. ನೀವು ಬೇರಾವುದೇ ಪಕ್ಷ ಸೇರಬೇಡಿ ಎಂದು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ವಿರೋಧ ಪಕ್ಷಗಳು ನಿಮ್ಮನ್ನು ಸಂಪೂರ್ಣ ಮುಗಿಸಿ ಬಿಡುತ್ತಾರೆ. ವಿರೋಧ ಪಕ್ಷಕ್ಕೆ ನೀವು ದೊಡ್ಡ ಆಸ್ತಿಯಾಗುತ್ತೀರಿ. ಆದ್ರೆ ನಿಮಗೆ ಭವಿಷ್ಯದಲ್ಲಿ ಅದೇ ಮುಳ್ಳಾಗಲಿದೆ," ಎಂದು ಪೂಜಾರಿ ಕಿವಿ ಮಾತನ್ನೂ ಹೇಳಿದರು.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications