ದಕ್ಷಿಣ ಕನ್ನಡ ಜಿಪಂನಲ್ಲಿ ಧೂಳು ಹಿಡಿಯುತ್ತಿವೆ ಅಂಗವಿಕಲರ ವಾಹನಗಳು!
ಮಂಗಳೂರು, ಜುಲೈ. 11: ರಾಜ್ಯ ಸರ್ಕಾರದಿಂದ ಅಂಗವಿಕಲರಿಗಾಗಿ ಮಂಜೂರಾಗಿರುವ ವಾಹನಗಳು ವಿತರಣೆಯಾಗದೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿದೆ.
ಜಿಲ್ಲೆಯ 91 ಅಂಗವಿಕಲರಿಗಾಗಿ ರಾಜ್ಯ ಸರ್ಕಾರದಿಂದ ವಾಹನಗಳೂ ಬಂದಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಂದಾಗಿ ವಾಹನಗಳು ವಿತರಣೆಯಾಗದೇ ತುಕ್ಕು ಹಿಡಿಯುತ್ತಿವೆ.
ಜಿಲ್ಲೆಯ 91 ಫಲಾನುಭವಿಗಳಿಗೆ 2017-18 ರ ಸಾಲಿನಲ್ಲಿ 91 ದ್ವಿಚಕ್ರ ವಾಹನಗಳು ಮಂಜೂರಾಗಿ ಕಳೆದ ಮಾರ್ಚ್ ತಿಂಗಳಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ಬಂದಿವೆ . ಆದರೆ ಅವುಗಳನ್ನು ಈ ವರೆಗೆ ವಿತರಿಸಲಾಗಿಲ್ಲ.

ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದ ಕೆಳ ಅಂತಸ್ಥಿನಲ್ಲಿ ಈ ವಾಹನಗಳು ಧೂಳು ಹಿಡಿಯುತ್ತಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಕೆಲ ವಾಹನಗಳು ತುಕ್ಕು ಹಿಡಿಯುತ್ತಿವೆ.
ಈ ದ್ವಿಚಕ್ರ ವಾಹನಗಳು ಇಲಾಖೆಗೆ ಬಂದ ಕಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅವುಗಳ ವಿತರಣೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ವಿಧಾನ ಸಭಾ ಚುನಾವಣೆಯ ಬಳಿಕ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ವಾಹನ ವಿತರಣೆಗೆ ಅಡ್ಡಿಯಾಗಿತ್ತು.
ಆದರೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿದಿದೆ.ನೂತನ ಮೈತ್ರಿ ಸರ್ಕಾರ ರಚನೆಯಾಗಿದೆ ಆದರೂ ಫಲಾನುಭವಿಗಳಿಗೆ ಈ ದ್ವಿಚಕ್ರ ವಾಹನಗಳು ವಿತರಣೆಯಾಗಿಲ್ಲ.

ಈ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಫಲಾನುಭವಿಗಳಿಗೆ ವಿತರಿಸಬೇಕೆಂಬ ಅಧಿಕಾರಿಗಳ ಧೋರಣೆಯಿಂದಾಗಿ ಈ ವಾಹನಗಳು ಉಪಯೋಗಕ್ಕಿಲ್ಲದೇ ಧೂಳು ಹಿಡಿಯುತ್ತಿವೆ.
ಆದರೆ ಈ ವಾಹನಗಳತ್ತ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ. ಜಿಲ್ಲಾಉಸ್ತುವಾರಿ ಸಚಿವರಿಗೆ ಈ ವಿಚಾರವೇ ಗೊತ್ತಿಲ್ಲ. ಅದರೆ ಅಂಗವಿಕಲ ಫಲಾನುಭವಿಗಳು ಮಾತ್ರ ವಾಹನಗಳಿಗಾಗಿ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಸರ್ಕಾರ ಈ ವಾಹನಗಳ ವಿತರಣೆಗೆ ಗಮನ ಹರಿಸುವುದೋ ಕಾದು ನೋಡಬೇಕಿದೆ.
-
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಮಾರ್ಚ್ 15 ದಿನ ಭವಿಷ್ಯ: ಈ ರಾಶಿಯವರಿಗೆ ಒಲಿಯಲಿದೆ ಅದೃಷ್ಟ; ನಿಮ್ಮ ಜಾತಕ ಹೇಗಿದೆ ತಿಳಿಯಿರಿ -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ












Click it and Unblock the Notifications