Get Updates
Get notified of breaking news, exclusive insights, and must-see stories!

ದಕ್ಷಿಣ ಕನ್ನಡ ಜಿಪಂನಲ್ಲಿ ಧೂಳು ಹಿಡಿಯುತ್ತಿವೆ ಅಂಗವಿಕಲರ ವಾಹನಗಳು!

ಮಂಗಳೂರು, ಜುಲೈ. 11: ರಾಜ್ಯ ಸರ್ಕಾರದಿಂದ ಅಂಗವಿಕಲರಿಗಾಗಿ ಮಂಜೂರಾಗಿರುವ ವಾಹನಗಳು ವಿತರಣೆಯಾಗದೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನಲ್ಲಿ ಧೂಳು ಹಿಡಿಯುತ್ತಿರುವುದು ಬೆಳಕಿಗೆ ಬಂದಿದೆ.

ಜಿಲ್ಲೆಯ 91 ಅಂಗವಿಕಲರಿಗಾಗಿ ರಾಜ್ಯ ಸರ್ಕಾರದಿಂದ ವಾಹನಗಳೂ ಬಂದಿದ್ದರೂ ಅಧಿಕಾರಿಗಳ ಬೇಜವಾಬ್ದಾರಿಂದಾಗಿ ವಾಹನಗಳು ವಿತರಣೆಯಾಗದೇ ತುಕ್ಕು ಹಿಡಿಯುತ್ತಿವೆ.

ಜಿಲ್ಲೆಯ 91 ಫಲಾನುಭವಿಗಳಿಗೆ 2017-18 ರ ಸಾಲಿನಲ್ಲಿ 91 ದ್ವಿಚಕ್ರ ವಾಹನಗಳು ಮಂಜೂರಾಗಿ ಕಳೆದ ಮಾರ್ಚ್ ತಿಂಗಳಲ್ಲೇ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಗೆ ಬಂದಿವೆ . ಆದರೆ ಅವುಗಳನ್ನು ಈ ವರೆಗೆ ವಿತರಿಸಲಾಗಿಲ್ಲ.

Persons with disabilities not got scooters in Dakshina Kannada district

ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದ ಕೆಳ ಅಂತಸ್ಥಿನಲ್ಲಿ ಈ ವಾಹನಗಳು ಧೂಳು ಹಿಡಿಯುತ್ತಿದ್ದು, ಮಳೆಗಾಲದ ಹಿನ್ನೆಲೆಯಲ್ಲಿ ಕೆಲ ವಾಹನಗಳು ತುಕ್ಕು ಹಿಡಿಯುತ್ತಿವೆ.

ಈ ದ್ವಿಚಕ್ರ ವಾಹನಗಳು ಇಲಾಖೆಗೆ ಬಂದ ಕಲವೇ ದಿನಗಳಲ್ಲಿ ವಿಧಾನಸಭೆ ಚುನಾವಣೆ ಘೋಷಣೆಯಾದ ಹಿನ್ನಲೆಯಲ್ಲಿ ಅವುಗಳ ವಿತರಣೆ ಸಾಧ್ಯವಾಗಿಲ್ಲ ಎಂದು ಹೇಳಲಾಗಿದೆ. ವಿಧಾನ ಸಭಾ ಚುನಾವಣೆಯ ಬಳಿಕ ವಿಧಾನ ಪರಿಷತ್ ಚುನಾವಣೆಯ ನೀತಿ ಸಂಹಿತೆ ವಾಹನ ವಿತರಣೆಗೆ ಅಡ್ಡಿಯಾಗಿತ್ತು.

ಆದರೆ ಎಲ್ಲಾ ಚುನಾವಣಾ ಪ್ರಕ್ರಿಯೆ ಮುಗಿದಿದೆ.ನೂತನ ಮೈತ್ರಿ ಸರ್ಕಾರ ರಚನೆಯಾಗಿದೆ ಆದರೂ ಫಲಾನುಭವಿಗಳಿಗೆ ಈ ದ್ವಿಚಕ್ರ ವಾಹನಗಳು ವಿತರಣೆಯಾಗಿಲ್ಲ.

Persons with disabilities not got scooters in Dakshina Kannada district

ಈ ವಾಹನಗಳನ್ನು ಜಿಲ್ಲಾ ಉಸ್ತುವಾರಿ ಸಚಿವರೇ ಫಲಾನುಭವಿಗಳಿಗೆ ವಿತರಿಸಬೇಕೆಂಬ ಅಧಿಕಾರಿಗಳ ಧೋರಣೆಯಿಂದಾಗಿ ಈ ವಾಹನಗಳು ಉಪಯೋಗಕ್ಕಿಲ್ಲದೇ ಧೂಳು ಹಿಡಿಯುತ್ತಿವೆ.

ಆದರೆ ಈ ವಾಹನಗಳತ್ತ ಅಧಿಕಾರಿಗಳೂ ತಲೆ ಕೆಡಿಸಿಕೊಂಡಿಲ್ಲ. ಜಿಲ್ಲಾಉಸ್ತುವಾರಿ ಸಚಿವರಿಗೆ ಈ ವಿಚಾರವೇ ಗೊತ್ತಿಲ್ಲ. ಅದರೆ ಅಂಗವಿಕಲ ಫಲಾನುಭವಿಗಳು ಮಾತ್ರ ವಾಹನಗಳಿಗಾಗಿ ಜಾತಕ ಪಕ್ಷಿಗಳಂತೆ ಕಾದು ಕುಳಿತಿದ್ದಾರೆ. ಇನ್ನಾದರೂ ಸರ್ಕಾರ ಈ ವಾಹನಗಳ ವಿತರಣೆಗೆ ಗಮನ ಹರಿಸುವುದೋ ಕಾದು ನೋಡಬೇಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+