ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ ಖಂಡಿಸಿ ಪಿಎಫ್ಐ ಆಕ್ರೋಶ
ಮಂಗಳೂರು, ಸೆಪ್ಟೆಂಬರ್ 7: ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ಪಿ.ಎಫ್.ಐ ಪ್ರಮುಖರ ಮೇಲೆ ಎನ್.ಐ.ಎ ದಾಳಿಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ರಾಜ್ಯ ಕಾರ್ಯದರ್ಶಿ ಎ.ಕೆ.ಅಶ್ರಫ್, ಎನ್ಐಎ ದಾಳಿಯನ್ನು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದಾರೆ.
ಮಂಗಳೂರಿನ ಪಿಎಫ್ಐ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎ.ಕೆ ಅಶ್ರಫ್, ಪ್ರವೀಣ್ ನೆಟ್ಟಾರ್ ಕೊಲೆ ಕೇಸ್ ನೆಪದಲ್ಲಿ ಬಿಜೆಪಿ ಎನ್ಐಎ ದುರ್ಬಳಕೆ ಮಾಡುತ್ತಿದೆ. ಪಿಎಫ್ ಐ ನಾಯಕರು ಎನ್ನುವ ಕಾರಣಕ್ಕೆ ಮುಸ್ಲಿಂ ಮುಖಂಡರನ್ನು ಟಾರ್ಗೆಟ್ ಮಾಡಲಾಗುತ್ತಿದೆ. ಶಿವಮೊಗ್ಗದ ಹರ್ಷ ಮತ್ತು ಪ್ರವೀಣ್ ಕೇಸ್ ಎನ್ಐಎಗೆ ವಹಿಸಲಾಗಿದೆ. ಆದರೆ ಇದರಲ್ಲಿ ಸರಕಾರ ದ್ವಿಮುಖ ನೀತಿ ಅನುಸರಿಸುತ್ತಿದೆ. ಬೆಳಗಾವಿಯ ಅರ್ಬಾಝ್, ಶಮೀರ್ ಕೇಸ್ ನಲ್ಲಿ ಸಂಘಪರಿವಾರ ಇದೆ. ಆದರೆ ಇದನ್ನ ಯಾಕೆ ಸರಕಾರ ಎನ್ಐಎಗೆ ವಹಿಸಿಲ್ಲ. ಬೆಳ್ಳಾರೆಯ ಮಸೂದ್ ಮತ್ತು ಸುರತ್ಕಲ್ ಫಾಜಿಲ್ ಕೇಸ್ ಯಾಕೆ ಎನ್ಐಎಗೆ ವಹಿಸಿಲ್ಲ? ಎಂದು ಎ.ಕೆ ಅಶ್ರಫ್ ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ನಡೆದ ಮುಸ್ಲಿಂ ಯುವಕರ ಹತ್ಯೆಯಲ್ಲಿ ಸಂಘಪರಿವಾರದ ಕೈವಾಡ ಇದೆ. ಆದರೆ ಮುಸ್ಲಿಂ ಯುವಕರು ಆರೋಪಿಗಳಾಗಿರುವ ಕೇಸ್ ಗಳನ್ನ ಮಾತ್ರ ಎನ್ಐಎಗೆ ವಹಿಸಲಾಗುತ್ತಿದೆ. ಇದು ಬಿಜೆಪಿ ಸರ್ಕಾರ ಎನ್ಐಎ ಎಂಬ ತನಿಖಾ ಸಂಸ್ಥೆಯನ್ನ ದುರ್ಬಳಕೆ ಮಾಡಲಾಗುತ್ತಿದೆ. ನಿನ್ನೆ 30ಕ್ಕೂ ಅಧಿಕ ಕಡೆ ಎನ್ಐಎ ದಾಳಿ ನಡೆಸಿದೆ. ಬಿಜೆಪಿ ವಿರುದ್ದ ಅವರ ಕಾರ್ಯಕರ್ತರ ಅಸಮಾಧಾನ ಸರಿ ಪಡಿಸಲು ಎನ್ಐಎಗೆ ವಹಿಸಲಾಗಿದೆ.

ಕೆಲ ಪಿಎಫ್ ಐ ಕಾರ್ಯಕರ್ತರು ಮತ್ತು ನಾಯಕರ ಮನೆಗಳ ಜೊತೆ ಮುಸ್ಲಿಂ ಯುವಕರ ಮನೆಗಳಿಗೆ ದಾಳಿ ನಡೆಸಲಾಗಿದೆ. ಪಿಎಫ್ಐ ಹೆಸರೇಳಿ ಮುಸ್ಲಿಮರನ್ನು ದಮನಿಸುವ ಕಾರ್ಯ ಮಾಡಲಾಗುತ್ತಿದೆ ಎಂದು ಎ.ಕೆ ಅಶ್ರಫ್ ಆರೋಪಿಸಿದ್ದಾರೆ.
ವಿಧಾನಸಭಾ ಚುನಾವಣೆ ಮುಂದಿಟ್ಟು ಈ ಕೆಲಸ ಮಾಡಲಾಗಿದೆ. ಪಿಎಫ್ ಐ ಟಾರ್ಗೆಟ್ ಮಾಡಿ ಹಾಗೂ ಬಿಜೆಪಿ ಕಾರ್ಯಕರ್ತರ ಸಮಾಧಾನ ಪಡಿಸಲು ಈ ದಾಳಿ ಮಾಡಲಾಗಿದೆ. ಬಿಜೆಪಿ ಸರ್ಕಾರ ವೈಫಲ್ಯತೆ ಮುಚ್ಚಿ ಹಾಕಲು ಈ ಕೆಲಸ ಮಾಡಿದೆ. ಪಿಎಫ್ ಐ ವಿರುದ್ದ ಎನ್ಐಎ ಮತ್ತು ಇಡಿ ಛೂ ಬಿಟ್ಟು ಕಿರುಕುಳ ಕೊಡಲಾಗುತ್ತಿದೆ. ಪ್ರವೀಣ್ ನೆಟ್ಟಾರು ಪ್ರಕರಣ ಸ್ಥಳೀಯ ಮಟ್ಟದ ಪ್ರತೀಕಾರದ ಪ್ರಕರಣ. ಸ್ಥಳೀಯ ಪೊಲೀಸರೇ ಇದರ ಆರೋಪಿಗಳನ್ನ ಬಂಧಿಸಿದ್ದಾರೆ. ಈ ಘಟನೆಯನ್ನ ಭಯೋತ್ಪಾದನೆ ಘಟನೆ ಅಂತ ತಿರುಚಲು ಎನ್ಐಎಗೆ ಅಸೈನ್ ಮೆಂಟ್ ಕೊಡಲಾಗಿದೆ. ಎನ್ಐಎ ದಾಳಿ ವೇಳೆ ಭಯೋತ್ಪಾದಕನ ಹಿಡಿಯೋ ರೀತಿ ವಾತಾವರಣ ಸೃಷ್ಟಿಸಲಾಗಿದೆ ಎಂದು ಕಿಡಿಕಾರಿದ್ದಾರೆ.
ಪ್ರವೀಣ್ ಕೇಸ್ ಅಂತಾರಾಜ್ಯ ನಂಟಿನ ಪ್ರಕರಣ ಎಂದು ಗೃಹ ಸಚಿವರು ಹೇಳಿದ್ದರು. ಆದರೆ ಆರೋಪಿಗಳ ಬಂಧನ ಆದ ನಂತರ ಅದು ಸ್ಥಳೀಯರು ಎಂಬುದು ಗೊತ್ತಾಗಿದೆ. ನಾವು ಇದನ್ನ ಕಾನೂನಾತ್ಮಕವಾಗಿ ಎದುರಿಸಲಿದ್ದೇವೆ. ಸರಕಾರಕ್ಕೆ ಪ್ರವೀಣ್ ಕೇಸಲ್ಲಿ ಮಾತ್ರ ಯಾಕೆ ಆಸಕ್ತಿ? ಮಸೂದ್ ಮತ್ತು ಫಾಜಿಲ್ ಕೇಸ್ನಲ್ಲಿ ಯಾಕಿಲ್ಲ? ಪ್ರವೀಣ್ ಹತ್ಯೆ ಮಸೂದ್ ಹತ್ಯೆಗೆ ಪ್ರತೀಕಾರವಾಗಿ ಹತ್ಯೆ ನಡೆದಿದೆ ಎಂದು ಮಾಧ್ಯಮಗಳಲ್ಲಿ ಬಂದಿದೆ. ನಮ್ಮ ತಾಲೂಕು ಘಟಕದ ಕೆಲ ನಾಯಕರ ಮನೆಗಳಿಗೆ ದಾಳಿ ಮಾಡಿದ್ದಾರೆ. ಕೆಲ ಶಸ್ತ್ರಾಸ್ತ್ರಗಳನ್ನ ವಶಕ್ಕೆ ಪಡೆದಿದ್ದಾರೆ ಎಂದು ಎನ್ಐಎ ಹೇಳಿದೆ. ಆದರೆ ಅದನ್ನ ಬೆಂಗಳೂರಿನಿಂದ ತಂದ್ರಾ? ದೆಹಲಿಯಿಂದ ತಂದ್ರಾ ಎಂದು ಎನ್ಐಎ ಹೇಳಬೇಕು ಎಂದು ಹೇಳಿದ್ದಾರೆ.
ದ.ಕ ಜಿಲ್ಲೆಯ ಬಹುತೇಕ ಎಲ್ಲಾ ಹಾಲ್ ಗಳಲ್ಲಿ ನಮ್ಮ ಸಭೆಗಳು ನಡೆಯುತ್ತದೆ. ಅದೇ ರೀತಿ ಪೊಲೀಸರಿಗೆ ಮಾಹಿತಿ ನೀಡಿ ಮಿತ್ತೂರಿನ ಕಮ್ಯುನಿಟಿ ಹಾಲ್ ನಲ್ಲೂ ಸಭೆ ಮಾಡಿದ್ದೇವೆ. ಇದಕ್ಕೆ ವಿಶೇಷವಾದ ಅರ್ಥ ಕಲ್ಪಿಸಿ ಕೊಲೆಗೆ ತರಬೇತಿ ಎಂದು ಬಿಂಬಿಸಲಾಗುತ್ತಿದೆ ಎಂದು ಎ.ಕೆ ಅಶ್ರಫ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Gold Price: ಚಿನ್ನ-ಬೆಳ್ಳಿ ಬೆಲೆಯಲ್ಲಿ ಭರ್ಜರಿ ಏರಿಕೆ: ಮೂರೇ ದಿನದಲ್ಲಿ ಬೆಳ್ಳಿ 20,000 ರೂ. ಜಂಪ್ -
ಬೆಂಗಳೂರಿನ ಎಂ.ಚಿನ್ನಸ್ವಾಮಿಯಲ್ಲಿ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಬ್ರೇಕ್: ಬಿಸಿಸಿಐ ಈ ನಿರ್ಧಾರದ ಹಿಂದಿದೆ ಮಹತ್ವದ ಉದ್ದೇಶ -
Gold Rate: ಇಂದು ನಿಮ್ಮ ನಗರಗಳಲ್ಲಿ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ? ಇಲ್ಲಿದೆ ಸಂಪೂರ್ಣ ಮಾಹಿತಿ -
RCB ಮಾರಾಟದ ಬಗ್ಗೆ ವಿಜಯ್ ಮಲ್ಯ ಭಾವುಕ ಪೋಸ್ಟ್ ; ವಿರಾಟ್ ಕೊಹ್ಲಿ ಬಗ್ಗೆ ಅವರು ಹೇಳಿದ್ದೇನು? ಇಲ್ಲಿದೆ ಮಾಹಿತಿ -
Jacob Bethell: ವಾಂಖೆಡೆಯಲ್ಲಿ ಕಿವಿಗೆ ಬಿದ್ದಿದ್ದು ಮಾತ್ರ ಆರ್ಸಿಬಿ.. ಆರ್ಸಿಬಿ ಘೋಷಣೆ: ಜೇಕಬ್ ಬೆಥೆಲ್ ವಿಡಿಯೋ ವೈರಲ್ -
Karnataka Weather: ಇಂದು ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
March 26 Horoscope: ಇಂದು ಈ 3 ರಾಶಿಗಳ ಜೀವನದಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
Viral Video: ತರಗತಿಯಲ್ಲೇ ವಿದ್ಯಾರ್ಥಿನಿಗೆ ಚಾಕೊಲೇಟ್ ಕೊಟ್ಟು ಪ್ರಪೋಸ್; ಚಪ್ಪಲಿ ಏಟು ತಿಂದ ಪ್ರೊಫೆಸರ್












Click it and Unblock the Notifications