ಪಿಎಫ್ ಐ ಸಮಾವೇಶ, ಉಳ್ಳಾಲದಲ್ಲಿ ನಿಷೇಧಾಜ್ಞೆ ಜಾರಿ
ಫೆ.17ರಂದು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ 10ನೇ ವರ್ಷಾಚರಣೆ ಪ್ರಯುಕ್ತ ಉಳ್ಳಾಲದಲ್ಲಿ ಯುನಿಟ್ ಮಾರ್ಚ್ ಸಮಾವೇಶ ಹಮ್ಮಿಕೊಂಡಿದೆ. ಇದರ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲದಲ್ಲಿ ಫೆ.16ರಿಂದ ಫೆ.25ರ ವರೆಗೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಮಂಗಳೂರು, ಫೆಬ್ರವರಿ 16: ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ, ಕರ್ನಾಟ ಇದರ 10ನೇ ವರ್ಷಾಚರಣೆ ಪ್ರಯುಕ್ತ ಫೆಬ್ರವರಿ 17ರಂದು ಉಳ್ಳಾಲದಲ್ಲಿ ಯುನಿಟ್ ಮಾರ್ಚ್ ಸಮಾವೇಶ ನಡೆಸಲಿದೆ.
ಇದರಿಂದ ಮುಂಜಾಗ್ರತಾ ಕ್ರಮವಾಗಿ ಉಳ್ಳಾಲದಲ್ಲಿ ಫೆಬ್ರವರಿ 16 ಗುರುವಾರ ಸಂಜೆಯಿಂದ ಫೆಬ್ರವರಿ 25ರ ಮಧ್ಯಾಹ್ನ 12 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಮಂಗಳೂರು ನಗರ ಪೊಲೀಸ್ ಆಯುಕ್ತ ಎಂ.ಚಂದ್ರಶೇಖರ್ ಆದೇಶಿಸಿದ್ದಾರೆ.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಇದರ 10ನೇ ವರ್ಷಾಚರಣೆ ಪ್ರಯುಕ್ತ ಫೆಬ್ರವರಿ 17ರಂದು ಉಳ್ಳಾಲದಲ್ಲಿ ಯುನಿಟ್ ಮಾರ್ಚ್ ಸಮಾವೇಶಕ್ಕೆ ಜಿಲ್ಲಾಡಳಿತ ನಿರಾಕರಿಸಿದೆ. ಹಿನ್ನಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.
ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪಿಎಫ್ ಐ ರ್ಯಾಲಿಗೆ ಅನುಮತಿ ನಿರಾಕರಿಸಲಾಗಿದೆ. ಅಲ್ಲದೆ, ನಿಷೇಧಾಜ್ಞೆ ಅವಧಿಯಲ್ಲಿ ಬಹಿರಂಗ ಸಭೆ ಕಾರ್ಯಕ್ರಮ ನಡೆಸುವಂತಿಲ್ಲ ಎಂದು ಮಂಗಳೂರು ಪೊಲೀಸ್ ಆಯುಕ್ತ ಚಂದ್ರಶೇಖರ್ ತಿಳಿಸಿದ್ದಾರೆ.












Click it and Unblock the Notifications