75 ವರ್ಷಗಳ ಕನಸಾದ ಫಲ್ಗುಣಿ ತೂಗುಸೇತುವೆ ಉದ್ಘಾಟನೆ
ಮಂಗಳೂರು, ಆಗಸ್ಟ್ 12: 75 ವರ್ಷಗಳಿಂದ ಎದುರು ನೋಡುತ್ತಿದ್ದ ಫಲ್ಗುಣಿ ತೂಗುಸೇತುವೆಯನ್ನು ಅರಣ್ಯ ಸಚಿವ ಬಿ.ರಮಾನಾಥ ರೈ ಲೋಕಾರ್ಪಣೆ ಮಾಡಿದ್ದಾರೆ. ಈ ಸೇತುವೆ ಉದ್ಘಾಟನೆ ಮೂಲಕ ಮುತ್ತೂರು ಹಾಗೂ ಬಡಗಬೆಳ್ಳೂರು ಗ್ರಾಮಗಳ ಜನತೆಯ 75 ವರ್ಷಗಳ ನಿರೀಕ್ಷೆ ಸಾಕಾರವಾಗಿದೆ.
ಸೇತುವೆ ಉದ್ಘಾಟನೆ ನಂತರ ಮಾತನಾಡಿದ ಸಚಿವ ರಮಾನಾಥ ರೈ, ಫಲ್ಗುಣಿ ನದಿಗೆ ಕೂಟೆಲು ಬಳಿ ಅಣೆಕಟ್ಟು ಕಟ್ಟಲು ಉದ್ದೇಶಿಸಲಾಗಿದೆ. ಈ ಯೋಜನೆಗೆ ಸಂಪುಟದಲ್ಲಿ ಒಪ್ಪಿಗೆ ಸಿಗಬೇಕು ಎಂದರು.
ಬಡಗಬೆಳ್ಳೂರು ಕಾವೇಶ್ವರ ದೇಗುಲವನ್ನು ಪ್ರವಾಸೋದ್ಯಮ ಇಲಾಖೆ ಸುಪರ್ದಿಗೆ ವಹಿಸಲು ಪತ್ರ ಬರೆಯಲಾಗಿದೆ. ಶೀಘ್ರವೇ ಆ ಇಲಾಖೆ ಇದಕ್ಕೆ ಅನುಮೋದನೆ ನೀಡಲಿದೆ ಎಂದು ಹೇಳಿದರು.

ಮುತ್ತೂರಿನ ಪದವಿಪೂರ್ವ ಕಾಲೇಜಿನಲ್ಲಿ ಐಟಿಐ ಶಿಕ್ಷಣ ಪ್ರಾರಂಭಿಸಲಾಗುವುದು. ಪೊಳಳಿಯಿಂದ ಮಳಲಿಗೆ ತೂಗು ಸೇತುವೆ ನಿರ್ಮಾಣ , ಕುಪ್ಪೆಪದವು ಸಿದ್ದಕಟ್ಟೆ ತೂಗುಸೇತುವೆ ನಿರ್ಮಾಣ ಕಾಮಗಾರಿ ಮುಂದಿನ ಹಂತದಲ್ಲಿ ಕೈಗೆತ್ತಿಕೊಳ್ಳಲಾಗುವುದು ಎಂದರು.
ಸೇತುವೆ ನಿರ್ಮಾಣ ಮಾಡಿದ ಗಿರೀಶ್ ಭಾರದ್ವಾಜ್ ಹಾಗೂ ಸ್ಥಳಾವಕಾಶ ನೀಡಿದ ಜನರನ್ನು ಈ ಸಂದರ್ಭದಲ್ಲಿ ಸ್ಮರಿಸಿದ ಸಚಿವರು, ಈ ಎರಡೂ ಗ್ರಾಮಗಳನ್ನು ಮಾದರಿ ಗ್ರಾಮಗಳನ್ನಾಗಿ ರೂಪಿಸಲಾಗುವುದು ಎಂದು ಭರವಸೆ ನೀಡಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಶಾಸಕ ಮೊಹಿದ್ದೀನ್ ಬಾವಾ ಮಾತನಾಡಿ, ಮುತ್ತೂರು ಪ್ರೌಢಶಾಲೆಗೆ 50 ಲಕ್ಷ ರು. ಬಿಡುಗಡೆಯಾಗಿದೆ, ನಾಲ್ಕು ಕೊಠಡಿಗಳ ನಿರ್ಮಾಣ ಕಾಮಗಾರಿ ಶೀಘ್ರ ಆರಂಭಿಸಲಾಗುವುದು ಎಂದರು.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications