ಮಂಗಳೂರು; ಮ್ಯಾನ್ ಹೋಲ್ಗೆ ಇಳಿದು ದುರಸ್ತಿ ಮಾಡಿದ ಕಾರ್ಪೊರೇಟರ್
ಮಂಗಳೂರು, ಜೂನ್ 25: ತಮ್ಮ ಪ್ರದೇಶದಲ್ಲಿ ಏನಾದರೂ ಸಮಸ್ಯೆಯಾಗಿ, ಅದನ್ನು ಜನಪ್ರತಿನಿಧಿಗಳ ಗಮನಕ್ಕೆ ತಂದರೆ ಅವುಗಳೆಡೆಗೆ ಲಕ್ಷ್ಯ ಕೊಡದವರೇ ಹೆಚ್ಚು. ಪದೇ ಪದೇ ಸಮಸ್ಯೆ ಕುರಿತು ದೂರು ನೀಡುತ್ತಿದ್ದರೂ ಅದನ್ನು ಗಂಭೀರವಾಗಿ ಪರಿಗಣಿಸಿ ಆ ಸಮಸ್ಯೆಗೆ ಪರಿಹಾರ ದೊರಕಿಸುವ ಉದಾಹರಣೆಗಳಂತೂ ತೀರಾ ಕಡಿಮೆ.
Recommended Video
ಆದರೆ ಮಳೆ ನೀರಿನ ಸಮಸ್ಯೆಯಿಂದಾಗಿ ಮಂಗಳೂರಿನ ಕದ್ರಿ ಕಂಬಳ ರಸ್ತೆಯಲ್ಲಿ ಚರಂಡಿ ಬ್ಲಾಕ್ ಆಗಿದ್ದು, ತಕ್ಷಣವೇ ರಿಪೇರಿಯಾಗದ ಕಾರಣ ಕಾರ್ಪೊರೇಟರ್ ಒಬ್ಬರು ತಾವೇ ಮ್ಯಾನ್ ಹೋಲ್ ಗೆ ಇಳಿದು ಸರಿಪಡಿಸಿದ್ದಾರೆ. ಅವರು ಮ್ಯಾನ್ ಹೋಲ್ ಗೆ ಇಳಿದಿರುವ ಚಿತ್ರಗಳು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಜನ ಇವರ ಕಾರ್ಯಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.
ಈಚೆಗೆ ಮಂಗಳೂರಿನ ಕದ್ರಿ ಕಂಬಳ ವಾರ್ಡ್ ನಲ್ಲಿ ಮಳೆ ನೀರಿನಿಂದಾಗಿ ಚರಂಡಿ ಕಟ್ಟಿಕೊಂಡು ರಸ್ತೆಯಲ್ಲಿ ತಡೆ ಉಂಟಾಗಿತ್ತು. ಆದರೆ ಈ ಸಮಸ್ಯೆಯ ಮೂಲವೇ ತಿಳಿದುಬಂದಿರಲಿಲ್ಲ. ಇದನ್ನು ತಿಳಿದ ಬಿಜೆಪಿ ಕಾರ್ಪೊರೇಟರ್ ಮನೋಹರ್ ಶೆಟ್ಟಿ ಅವರು ತಾವೇ ಚೇಂಬರ್ ಒಳಗೆ ಇಳಿದಿದ್ದಾರೆ. ಸಮಸ್ಯೆ ಏನೆಂದು ತಿಳಿದು ಕಾರ್ಮಿಕರಿಗೆ ಸರಿಪಡಿಸುವಂತೆ ಹೇಳಿದ್ದಾರೆ. ಆದರೆ ಕಾರ್ಮಿಕರೂ ಮ್ಯಾನ್ ಹೋಲ್ ಗಿಳಿದು ಕೆಲಸ ಮಾಡಲು ಹಿಂದೆ ಮುಂದೆ ನೋಡಿದ್ದಾರೆ. ಹೀಗಾಗಿ ಕಾರ್ಪೊರೇಟರ್ ಮನೋಹರ್ ಶೆಟ್ಟಿ ಅವರು ತಾವೇ ಮನೆಯಿಂದ ಬಟ್ಟೆ ತರಿಸಿ ಚೇಂಬರ್ ಒಳಗೆ ಇಳಿದು ಮ್ಯಾನ್ ಹೋಲ್ ದುರಸ್ತಿ ಮಾಡಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಮನೋಹರ್ ಶೆಟ್ಟಿ ಅವರು, "ಮ್ಯಾನ್ ಹೋಲ್ ಸ್ವಚ್ಛಗೊಳಿಸುವಂತೆ ಕಾರ್ಮಿಕರಿಗೆ ಹೇಳಿದೆ. ಆದರೆ, ಅವರು ಇಳಿಯಲು ತಯಾರಿರಲಿಲ್ಲ. ಹಾಗಾಗಿ ನಾನೇ ಮ್ಯಾನ್ ಹೋಲ್ಗೆ ಇಳಿದು ಪೈಪ್ ಕ್ಲೀನ್ ಮಾಡಿದೆ. ನಾನು ಮಾಡಿದ್ದನ್ನು ನೋಡಿದ ಬಳಿಕ ನನ್ನ ಪಕ್ಷದ ಕಾರ್ಯಕರ್ತರು ಬಂದು ನನಗೆ ನೆರವು ನೀಡಿದರು" ಎಂದು ಹೇಳಿದ್ದಾರೆ. ಎಲ್ಲ ಸಮಸ್ಯೆಗಳಿಗೂ ನಾವು ಸ್ಥಳೀಯ ಅಧಿಕಾರಿಗಳ ಮೇಲೆ ಅವಲಂಬಿತರಾಗಲು ಆಗುವುದಿಲ್ಲ. ಕೆಲವೊಮ್ಮೆ ಕೆಲವು ಸಮಸ್ಯೆಗಳನ್ನು ನಾವೇ ಪರಿಹರಿಸಲು ಮುಂದಾಗಬೇಕು ಎಂದೂ ತಿಳಿಸಿದ್ದಾರೆ.
ಮನೋಹರ್ ಮ್ಯಾನ್ ಹೋಲ್ಗೆ ಇಳಿದು ದುರಸ್ತಿ ಕಾರ್ಯ ಮಾಡಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ. ಜೊತೆಗೆ ಇಂಥ ಕೆಲಸಗಳನ್ನು ಮಾಡಲು ಯಂತ್ರಗಳನ್ನು ಬಳಸಿದರೆ ಒಳ್ಳೆಯದು. ಅಗತ್ಯ ಉಪಕರಣಗಳಿಲ್ಲದೇ ಈ ರೀತಿ ಮ್ಯಾನ್ ಹೋಲ್ ಗೆ ಇಳಿಯುವುದೂ ಸೂಕ್ತವಲ್ಲ ಎಂದು ಕೆಲವರು ಸಲಹೆ ನೀಡಿದ್ದಾರೆ.
-
Bengaluru Startup: ಬೆಂಗಳೂರು ಸ್ಟಾರ್ಟ್ಅಪ್ ರಾಜಧಾನಿ ಅಲ್ಲ ಎಂದ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್ -
ಯುಗಾದಿ ಹಬ್ಬ - ಶಿವರಾತ್ರಿಯಂದು ನಾನು ಮಾಂಸ ತಿಂತಿನಿ, ಅದು ನನ್ನಿಷ್ಟ: ಮುಖ್ಯಮಂತ್ರಿ ಸಿದ್ದರಾಮಯ್ಯ -
Water: ಅನಂತರಪುರ ಜಿಲ್ಲೆಯ ಬರಡು ಭೂಮಿಯ ಯಶೋಗಾಥೆ: ಜಗದೀಶ್ ಕೊಪ್ಪ ಬರಹ -
IPL Tickets: ನಾವು ವಿಐಪಿಗಳು; 5 ಫ್ರೀ ಟಿಕೆಟ್ ಕೊಡಲಿ: ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ -
Tejasvi Surya: ಕೆಎಸ್ಸಿಎನಿಂದ ಐಪಿಎಲ್ ಫ್ರೀ ಟಿಕೆಟ್ ಚರ್ಚೆ: ಕಾಂಗ್ರೆಸ್ ಶಾಸಕರಿಗೆ ಸಂಸದ ತೇಜಸ್ವಿ ಸೂರ್ಯ ಕ್ಲಾಸ್ -
Love Mocktail 3 Row: ಕೃತಿಚೌರ್ಯ ವಿವಾದದ ನಡುವೆ ಸತ್ಯ ಮತ್ತು ನೈತಿಕತೆ ಚರ್ಚೆ: ಮಧು ವೈ.ಎನ್ ಬರಹ -
Rashmika Mandanna: ರಶ್ಮಿಕಾ ಮಂದಣ್ಣ - ವಿಜಯ್ ದೇವರಕೊಂಡ ಕನಸಿನ ಹನಿಮೂನ್: ವಿಶೇಷ ವಿಡಿಯೋ ಹಂಚಿಕೊಂಡ ಜೋಡಿ -
'ಗ್ಯಾರಂಟಿ ಸಮಿತಿ' ಸಿಬ್ಬಂದಿ ಮಾಸಿಕ ವೇತನ ಸರ್ಕಾರದ ಮುಖ್ಯ ಕಾರ್ಯದರ್ಶಿಗಿಂತಲೂ ಹೆಚ್ಚು! ವರ್ಷಕ್ಕೆ ಕೋಟಿ ಕೋಟಿ.. -
ಸದನದಲ್ಲಿ ಬಜೆಟ್ ಚರ್ಚೆ: ಸಿಎಂ ಸಿದ್ದರಾಮಯ್ಯ ವಿರುದ್ಧ ಆರೋಪ -
ವಂದೇ ಭಾರತ್ ರೈಲಿನ ಊಟದಲ್ಲಿ ಹುಳು: 'ಅದು ಕೇಸರಿ' ಎಂದ ಸಿಬ್ಬಂದಿ, IRCTCಗೆ 10 ಲಕ್ಷ ದಂಡ -
ಬೆಂಗಳೂರು ಬಂಗಲೆ ವಿವಾದ: ರಾಜೀವ್ ಚಂದ್ರಶೇಖರ್ ನಾಮಪತ್ರ ಅಂಗೀಕರಿಸಿದ ಚುನಾವಣಾ ಆಯೋಗ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ?












Click it and Unblock the Notifications