ಯಾರಿಗೋ ತೋಡಿದ್ದ ಗುಂಡಿಯಲ್ಲಿ ಯಾರೋ ಬಿದ್ದ ಪುತ್ತೂರು ಪ್ರಸಂಗ
ಪುತ್ತೂರು, ನವೆಂಬರ್ 24: ಹಂದಿ ಹಿಡಿಯಲೆಂದು ತೋಟದ ಬದಿಯಲ್ಲಿ ಅಳವಡಿಸಲಾಗಿದ್ದ ಉರುಳಿಗೆ ಚಿರತೆಯೊಂದು ಸಿಕ್ಕಿಬಿದ್ದಿರುವ ಘಟನೆ ಪುತ್ತೂರು ತಾಲೂಕಿನ ಕೊಳ್ತಿಗೆ ಗ್ರಾಮದ ಮಾಲತ್ತೋಡಿ ಎಂಬಲ್ಲಿ ಬುಧವಾರ ನಡೆದಿದ್ದು, ಚಿರತೆಯನ್ನು ಅರಣ್ಯ ಇಲಾಖೆಯವರು ಪ್ರಾಣಾಪಾಯದಿಂದ ಪಾರು ಮಾಡಿ ಬೋನಿನಲ್ಲಿ ಹಾಕಿ ಶಿರಾಡಿ ರಕ್ಷಿತಾರಣ್ಯಕ್ಕೆ ಬಿಟ್ಟಿದ್ದಾರೆ.
ಉರುಳಿಗೆ ಸಿಕ್ಕಿಬಿದ್ದ ಘಟನೆ: ಮಾಲೆತ್ತೋಡಿ ನಿವಾಸಿ ಬಾಲಕೃಷ್ಣ ಕೆದಿಲಾಯ ಎಂಬವರ ತೋಟದ ಸಮೀಪದ ಗುಡ್ಡದಲ್ಲಿ ಹಂದಿ ಹಿಡಿಯಲೆಂದು ಯಾರೋ ಉರುಳು ಹಾಕಿದ್ದರು. ಆಹಾರ ಅರಸಿಕೊಂಡು ರಾತ್ರಿ ವೇಳೆ ಕೆದಿಲಾಯದ ಗುಡ್ಡಕ್ಕೆ ಬಂದಿದ್ದ ಚಿರತೆ ಹಂದಿಗೆ ಹಾಕಿದ್ದ ಉರುಳಿನಲ್ಲಿ ಸಿಕ್ಕಿಹಾಕಿಕೊಂಡಿದೆ. ಹಗ್ಗದ ಉರುಳು ಚಿರತೆ ಸೊಂಟದಲ್ಲಿ ಸಿಲುಕಿ ಸಿಕ್ಕಿಬಿದ್ದಿತ್ತು. ಕೆದಿಲಾಯ ಪುತ್ರ ಬೆಳಗ್ಗೆ ನೀರು ಬಿಡಲೆಂದು ತೋಟಕ್ಕೆ ತೆರಳುವ ವೇಳೆ ಉರುಳಿನಲ್ಲಿ ಚಿರತೆ ಸಿಲುಕಿರುವುದು ತಿಳಿಯಿತು. ತಕ್ಷಣ ಅವರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದರು.[ಕೊನೆಗೂ ಸೆರೆ ಸಿಕ್ಕಿತು ಮೈಸೂರಿನ ಚಿರತೆ]

ಕಾರ್ಯಾಚರಣೆ ವಿವರ: ಪುತ್ತೂರು ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಬಂದರೂ ಚಿರತೆ ಹಿಡಿಯಲು ಸಾಧ್ಯವಾಗಲಿಲ್ಲ. ತಕ್ಷಣ ಪಿಲಿಕುಳದ ಅರಿವಳಿಕೆ ತಜ್ಞರು ಹಾಗೂ ಹುಣಸೂರಿನ ಅರಿವಳಿಕೆ ತಜ್ಞರಿಗೆ ಮಾಹಿತಿ ನೀಡಲಾಯಿತು. ನಂತರ ಪುತ್ತೂರು ಅರಣ್ಯ ಇಲಾಖೆಯಿಂದ ಬೋನು ತರಿಸಲಾಯಿತು. ಬಳಿಕ ಪಿಲಿಕುಳದ ಅರಿವಳಿಕೆ ತಜ್ಞರಾದ ಡಾ. ದೀಪಿಕಾ ಹಾಗೂ ಹುನಸೂರಿನ ಅರಿವಳಿಕೆ ತಜ್ಞರಾದ ಡಾ. ಉಮಾ ಶಂಕರ್, ಪುತ್ತೂರು ಪಶುವೈದ್ಯಾಧಿಕಾರಿ ಡಾ.ಸುರೇಶ್ ಭಟ್ ಚಿರತೆಗೆ ಮತ್ತು ಬರಿಸುವ ಲಸಿಕೆಯನ್ನು ನೀಡಿದ ಬಳಿಕ ಚಿರತೆಯನ್ನು ಬೋನಿಗೆ ಹಾಕಲಾಯಿತು.ನಂತರ ಶಿರಾಡಿ ರಕ್ಷಿತಾರಣ್ಯಕ್ಕೆ ಬಿಡಲಾಯಿತು.[ಹರಿದ ಬಲೆಯಲ್ಲಿ ಚಿರತೆ ಹಿಡಿದ ಅರಣ್ಯ ಇಲಾಖೆ ಶೂರರು!]
ಸ್ಥಳದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರು ಸೇರಿದ್ದರು. ಇವರನ್ನು ಹತೋಟಿಗೆ ತರಲು ಪೊಲೀಸ್ ಹಾಗೂ ಅರಣ್ಯ ಇಲಾಖೆಯವರು ಹರಸಾಹಸಪಟ್ಟರು.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications