ಮಂಗಳೂರು ಗಲಭೆಗೆ ಮೊದಲೇ ನಡೆದಿತ್ತಾ ಪ್ಲಾನ್..? ಸಿಸಿಟಿವಿಯಲ್ಲಿ ಸೆರೆ
Recommended Video
ಮಂಗಳೂರು, ಡಿಸೆಂಬರ್ 24: ಮಂಗಳೂರಲ್ಲಿ ಪೌರತ್ವ ವಿರೋಧಿ ಪ್ರತಿಭಟನೆಯು ಹಿಂಸಾರೂಪಕ್ಕೆ ತಿರುಗಲು ಮೊದಲೇ ಪ್ರತಿಭಟನಾಕಾರರು ಸಂಚು ರೂಪಿಸಿದ್ದರೇ ಎಂಬ ಸಂಶಯ ಹುಟ್ಟಿಕೊಂಡಿದೆ.
ಗಲಭೆ ಶುರುವಾಗುವುದಕ್ಕೂ ಮುಂಚೆ ಆಟೋದಲ್ಲಿ ಕಲ್ಲುಗಳನ್ನು ತಂದಿಟ್ಟುಕೊಂಡಿದ್ದರು ಎಂಬುದಕ್ಕೆ ಸಿಸಿಟಿವಿ ದೃಶ್ಯಾವಳಿ ಸಾಕ್ಷಿಯಾಗಿದೆ. ಮಂಗಳೂರಲ್ಲಿ ನಡೆದ ಗಲಭೆಯಲ್ಲಿ ಇಬ್ಬರು ಗೋಲಿಬಾರ್ ಗೆ ಬಲಿಯಾಗಿದ್ದರು, ಹಲವು ಪೊಲೀಸರು ಗಾಯಗೊಂಡಿದ್ದರು.
ಸಿಎಎ, ಎನ್ಆರ್ಸಿ ವಿರೋಧದ ಹೆಸರಿನಲ್ಲಿ ಗಲಭೆ ನಡೆಸಲು ಪಾತಕಿಗಳು ಸಜ್ಜಾಗಿದ್ದರು ಎಂಬುದು ಜಗಜ್ಜಾಹೀರಾಗಿದೆ. ಗಲಭೆ ಮೊದಲು ಮುಖಕ್ಕೆ ಮಾಸ್ಕ್ ಧರಿಸಿ ಸಿಸಿಟಿವಿ ಧ್ವಂಸ ಮಾಡಿದ್ದಾರೆ.

ಮಂಗಳೂರು ಬೆಂಕಿ ಹತ್ತಿ ಉರಿಯಲು ಕೆಲವು ಕಿಡಿಗೇಡಿಗಳು ಮೊದಲೇ ಹೊಂಚು ಹಾಕಿ ಸಂಚು ರೂಪಿಸಿರುವುದು ಗೊತ್ತಾಗಿದೆ. ಈ ಬಗ್ಗೆ ಪೊಲೀಸರು ಸಮಗ್ರ ತನಿಖೆ ನಡೆಸುತ್ತಿದ್ದಾರೆ. ಗೂಡ್ಸ್ ಆಟೋದಲ್ಲಿ ಗೋಣಿ ಚೀಲದಲ್ಲಿ ಕಲ್ಲುಗಳನ್ನು ತಂದಿರುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಕೆಲವು ಗಲಭೆಕೋರರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕಲ್ಲು ತೂರಾಟ ನಡೆಸಿದ್ದಾರೆ. ಬಳಿಕ ಕಲ್ಲು ತೂರುವ ಯಾವುದೇ ಸಾಕ್ಷ್ಯ ಲಭಿಸಬಾರದೆಂದು ಹತ್ತಿರವಿದ್ದ ಸಿಸಿಟಿವಿ ಕ್ಯಾಮೆರಾಗಳನ್ನು ಒಡೆದು ಹಾಕಿದ್ದಾರೆ.

ಒಂದು ಯುವಕರ ಗುಂಪು ಪ್ರತಿಭಟನೆ ವೇಳೆ ಆಟೋದಲ್ಲಿ ಕಲ್ಲು ತಂದು ಹಾಕಿದರೆ, ಇನ್ನೊಂದು ಗುಂಪು ಸಿಸಿಟಿವಿಗಳನ್ನು ಧ್ವಂಸಗೊಳಿಸಿದ್ದಾರೆ. ಇದರಿಂದಾಗಿಯೇ ಪೊಲೀಸರು ಕಠಿಣ ಕ್ರಮ ತೆಗೆದುಕೊಂಡಿದ್ದಾರೆ.

ಕಲ್ಲು ತೂರಾಟ ನಡೆದಿಲ್ಲವೆಂದು ಪ್ರತಿಪಕ್ಷಗಳ ಅನೇಕ ನಾಯಕರು ಹೇಳಿದ್ದರು. ಇದೀಗ ಮಂಗಳೂರು ಪೊಲೀಸರು ಕಲ್ಲು ತೂರಾಟ ನಡೆದಿರುವುದಕ್ಕೆ ಸಿಸಿಟಿವಿ ದೃಶ್ಯಾವಳಿ ಬಿಡುಗಡೆಗೊಳಿಸಿದ್ದಾರೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications