ಸಿಡ್ನಿಯಲ್ಲಿ ಮೋದಿ ಹವಾ: ಪ್ರಧಾನಿಗಳ ಮುಂದೆ ಹೆಜ್ಜೆ ಹಾಕಲಿದ್ದಾರೆ ಕುಡ್ಲದ ಕುವರಿ
ಮಂಗಳೂರು, ಮೇ 23: ದೇಶದ ಪ್ರಧಾನಿ ನರೇಂದ್ರ ಮೋದಿಯವರ ವಿದೇಶಿ ಪ್ರವಾಸದ ವೇಳೆ ಅವರಿಗೆ ಭರ್ಜರಿ ಸ್ವಾಗತ ಕೋರುವುದು, ಅಲ್ಲಿ ಅವರು ಮಹತ್ವದ ಒಪ್ಪಂದ ಮಾಡಿಕೊಳ್ಳುವುದು ನಮಗೆಲ್ಲಾ ತಿಳಿದೇ ಇದೆ. ಇದೇ ರೀತಿ ಇಂದು ಮೇ 23ರಂದು ಮೋದಿಯವರು ಆಸ್ಟ್ರೇಲಿಯಾ ಪ್ರವಾಸದಲ್ಲಿದ್ದು, ಅಲ್ಲಿನ ಪ್ರಧಾನಿ ಆಂಥೊನಿ ಆಲ್ಬನೀಸ್ ಅವರೊಂದಿಗೆ ಸಿಡ್ನಿಯಲ್ಲಿ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ಈ ಸಭೆಯ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೂ ಕರಾವಳಿಗೂ ಸಂಬಂಧವಿದೆ. ಪ್ರಧಾನಿ ಮೋದಿಯವರನ್ನು ಸ್ವಾಗತಿಸಲು ಸಿಡ್ನಿಯ Indian Australian Diaspora Foundation (IADF) ಭರದಿಂದ ಸಿದ್ಧತೆ ನಡೆಸುತ್ತಿದೆ. ಸಭೆಯ ಬಳಿಕ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಮಂಗಳೂರು ಮೂಲದ ಬಿಜೈ ಕಾಪಿಕಾಡು ಮೂಲದ ಯುವತಿ ಅನಿಷಾ ಪೂಜಾರಿಯವರನ್ನು ಒಳಗೊಂಡ ನೃತ್ಯ ತಂಡವು ನೃತ್ಯ ಪ್ರದರ್ಶನ ಮಾಡಲಿದೆ.

ಸುಮಾರು 20,000 ಕ್ಕೂ ಅಧಿಕ ಮಂದಿ ಭಾಗವಹಿಸಲಿರುವ ಈ ಕಾರ್ಯಕ್ರಮದಲ್ಲಿ ಉಡುಪಿ ಕುಂದಾಪುರ ಮೂಲದ ನಾಟ್ಯ ವಿದುಷಿ ಪಲ್ಲವಿ ಭಾಗವತ್ ತಮ್ಮ ನೃತ್ಯ ಸಂಸ್ಥೆಯ ನಾಟ್ಯೋಕ್ತಿ ಶಿಷ್ಯ ವೃಂದದೊಂದಿಗೆ ಕಾಂತಾರ ಸಿನಿಮಾದ ಹಾಡಿನ ನಾಟ್ಯ ಪ್ರದರ್ಶಿಸಲಿದ್ದಾರೆ. ಕರ್ನಾಟಕದ ಹಳ್ಳಿಯ ಸೊಬಗನ್ನು ತೋರಿಸುವ ಜಾನಪದ ಹಾಗೂ ಯಕ್ಷಗಾನವನ್ನು ಅಳವಡಿಸಿ ಈ ನೃತ್ಯವನ್ನು ಪ್ರದರ್ಶಿಸಲಿದ್ದಾರೆ.
ಈ ತಂಡದಲ್ಲಿ ಅನಿಷಾ ಪೂಜಾರಿಯೂ ತಮ್ಮ ನೃತ್ಯ ಚಾತುರ್ಯವನ್ನು ಪ್ರದರ್ಶಿಸಲಿದ್ದಾರೆ. ತಮ್ಮ ನಾಲ್ಕನೇ ವಯಸ್ಸಿಗೆ ಭರತನಾಟ್ಯ ಕಲೆಯನ್ನು ಕಲಿಯಲು ತೊಡಗಿದ ಅವರು ವಿದ್ವಾನ್ ಪ್ರೇಮನಾಥ ಮಾಸ್ಟರ್ ರಲ್ಲಿ ಹೆಚ್ಚಿನ ಶಿಕ್ಷಣ ಪಡೆದರು. ರಾಜ್ಯ ಹೊರರಾಜ್ಯಗಳಲ್ಲೂ ನಾಟ್ಯ ಪ್ರದರ್ಶನ ಮಾಡಿ ಹಲವಾರು ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ. ವಿವಾಹದ ಬಳಿಕ ಪತಿ ಮಗುವಿನೊಂದಿಗೆ ಸಿಡ್ನಿಯಲ್ಲಿ ನೆಲೆಸಿದ್ದಾರೆ. ಆ ಬಳಿಕವೂ ತಮ್ಮ ನೃತ್ಯ ಕಲಿಕೆಯನ್ನು ಮುಂದುವರಿಸಿದ್ದಾರೆ. ಇದೀಗ ಅವರು ನಾಟ್ಯ ವಿದುಷಿ ಪಲ್ಲವಿ ಭಾಗವತ್ ರೊಂದಿಗೆ ತಮ್ಮ ನಾಟ್ಯ ಕಲಿಕೆಯನ್ನು ಮುಂದುವರಿಸಿದ್ದಾರೆ.
ಈ ತಂಡ ಪಲ್ಲವಿ ಭಾಗವತ್ ಮಾರ್ಗದರ್ಶನಲ್ಲಿ ವರಾಹಂ ರೂಪಂಗೆ ಡ್ಯಾನ್ಸ್ ಮಾಡಲಿದೆ. ಇನ್ನು ಈ ತಂಡದಲ್ಲಿ ಮಂಗಳೂರಿನ ಅನಿಷಾ ಪೂಜಾರಿ ಇರಲಿದ್ದು,ಕಾಂತಾರಾ ಸಿನಿಮಾದ ವರಾಹ ರೂಪಂ ಹಾಡು ಮತ್ತು ತುಳು ಆಲ್ಬಂ ಸಾಂಗ್ "ವಾ ಪೊರ್ಲುಯಾ" ಹಾಡಿಗೆ ಡ್ಯಾನ್ಸ್ ಮಾಡಲಿದ್ದಾರೆ..

ಮೋದಿಯೆದು ಮಗಳ ನೃತ್ಯಕ್ಕೆ ಮಂಗಳೂರಿನ ಅನಿಷಾ ಪೂಜಾರಿ ಪೋಷಕರ ಸಂತಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅನಿಷಾ ತಂದೆ ಪದ್ಮನಾಭ, 'ಮಗಳು ಅನಿಷಾ ಪೂಜಾರಿ ಆರು ವರ್ಷದಿಂದ ಸಿಡ್ನಿಯಲ್ಲಿದ್ದಾಳೆ. ಕುಟುಂಬ ಸಮೇತ ಸಿಡ್ನಿಯಲ್ಲೇ ವಾಸವಿದ್ದಾರೆ. ಚಿಕ್ಕಂದಿನಿಂದಲೂ ಡ್ಯಾನ್ಸ್ ನಲ್ಲಿ ಅಪಾರ ಆಸಕ್ತಿಯನ್ನು ಹೊಂದಿದ್ದಳು. ನಾಟ್ಯ ಗುರು ಪಲ್ಲವಿ ಭಾಗವತ್ ಅವರ ತಂಡದಲ್ಲಿ ಮಗಳೂ ಇರೋದು ಹೆಮ್ಮೆ ತಂದಿದೆ. ಮೋದಿಯೆದುರು ಮಗಳು ಡ್ಯಾನ್ಸ್ ಮಾಡುತ್ತಿರುವುದು ಸಂತಸ ತಂದಿದೆ' ಎಂದು ಖುಷಿ ವ್ಯಕ್ತಪಡಿಸಿದ್ದಾರೆ.
ಇನ್ನು ಈ ತಂಡದಲ್ಲಿ ವಿಧೂಷಿ ಪಲ್ಲವಿ ಭಾಗವತ್, ಅಶ್ವಿಕಾ ರಾವ್, ಆರುಷಿ ಬಾದ್ಲೆ, ಮೇನುಕಾ ಪ್ರಧಾನ್, ರಿಹಾ ಶ್ರೀಕಾಂತ್, ಅನುಶ್ರೀ ಉಷಾರಾಜನ್, ನಯನ ಶ್ರೀಧರ್, ಅನಿತಾ, ಅಭಿಜಿತ್, ವಾದಿರಾಜ್ ಮತ್ತು ಗೌತಮ್ ಇರಲಿದ್ದಾರೆ ಎಂದು ತಿಳಿದು ಬಂದಿದೆ.
-
ರಾಷ್ಟ್ರಪತಿ ದ್ರೌಪದಿ ಮುರ್ಮುಗೆ ಅವಮಾನ ಆರೋಪ: ಪಶ್ಚಿಮ ಬಂಗಾಳ ಸರ್ಕಾರದ ವಿರುದ್ಧ ಕೇಂದ್ರದ ಕಿಡಿ, ಮೋದಿ ಆಕ್ರೋಶ -
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು












Click it and Unblock the Notifications